ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಮತ್ತು ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದವರ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ ತೆಲುಗು ಲೇಖಕ ವರವರ ರಾವ್ ಮತ್ತು ಇತರ ಹೋರಾಟಗಾರರ ಮನೆ ಮೇಲೆ ಆಗಸ್ಟ್ 28ರಂದು ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದರು.ವರವರ ರಾವ್, ಸುಧಾ ಭಾರದ್ವಾಜ್, ಗೌತಮ್ ನವಾಲಖಾ, ವರ್ನಾನ್ ಗೋನ್ಸಾಲ್ವೆಸ್, ಅರುಣ್ ಫೆರೇರಾ ಅವರನ್ನು ಬಂಧಿಸಲಾಗಿತ್ತು.