<p><strong>ಶ್ರೀನಗರ:</strong> ‘ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರವನ್ನು ಮರಳಿಸುವಂತೆ ಕೋರಿ ಸಂಸತ್ ಹಾಗೂ ದೇಶದ ಜನರ ಮೊರೆ ಹೋಗಲಾಗುವುದು’ ಎಂದು ಪೀಪಲ್ಸ್ ಅಲಯೆನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಪಿಎಜಿಡಿ) ಗುರುವಾರ ಹೇಳಿದೆ.</p>.<p>ಅಲ್ಲದೇ, 370ನೇ ವಿಧಿ ರದ್ದುಗೊಳಿಸಿದ ನಂತರದ ಅವಧಿಯಲ್ಲಿ ಆಗಿರುವ ಎಲ್ಲ ಬೆಳವಣಿಗೆಗಳಿಗೆ ಬಿಜೆಪಿ ಸರ್ಕಾರವನ್ನೇ ಉತ್ತರದಾಯಿಯನ್ನಾಗಿ ಮಾಡಲಾಗುವುದು ಎಂದೂ ಪಿಎಜಿಡಿ ಮುಖಂಡರು ಹೇಳಿದ್ದಾರೆ.</p>.<p>ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಎರಡು ವರ್ಷಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ಪಿಎಜಿಡಿ ಅಧ್ಯಕ್ಷರೂ ಆಗಿರುವ ನ್ಯಾಷನಲ್ ಕಾನ್ಫರೆನ್ಸ್ನ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಮೈತ್ರಿಕೂಟದ ಅಂಗಪಕ್ಷಗಳ ಸಭೆ ನಡೆಯಿತು.</p>.<p><a href="https://www.prajavani.net/india-news/mizoram-and-assam-agree-to-resolveboundary-issue-amicably-854946.html" itemprop="url">ಗಡಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಅಸ್ಸಾಂ–ಮಿಜೋರಾಂ ಒಪ್ಪಿಗೆ </a></p>.<p>ಪಿಎಜಿಡಿ ಎಂಬುದು ಆರು ಪ್ರಮುಖ ರಾಜಕೀಯ ಪಕ್ಷಗಳ ಮೈತ್ರಿಕೂಟ. ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಮರಳಿ ಪಡೆಯುವ ಸಲುವಾಗಿ ಹೋರಾಟ ನಡೆಸಲು ಕಳೆದ ವರ್ಷ ಅಕ್ಟೋಬರ್ನಲ್ಲಿ ಈ ಮೈತ್ರಿಕೂಟ ರಚಿಸಲಾಗಿದೆ.</p>.<p>ಸಭೆಯಲ್ಲಿ ಮಾತನಾಡಿದ ವಿವಿಧ ಪಕ್ಷಗಳ ಮುಖಂಡರು, ‘2019ರ ಆಗಸ್ಟ್ 5ರಂದು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು’ ಎಂದರು. ಸಂವಿಧಾನ ನೀಡಿರುವ ಈ ಹಕ್ಕುಗಳನ್ನು ಮರಳಿ ಪಡೆಯುವ ಶಪಥ ಮಾಡಿದರು. ಅಲ್ಲದೇ, ನಮ್ಮ ಹೋರಾಟವನ್ನು ತಡೆಯಲು ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂಬುದಾಗಿ ಹೇಳಿದರು ಎಂದು ಮೂಲಗಳು ತಿಳಿಸಿವೆ.</p>.<p>ಒಂದು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಸಿಪಿಎಂ ನಾಯಕ ಮೊಹಮ್ಮದ್ ಯೂಸೂಫ್ ತಾರಿಗಾಮಿ ಮತ್ತಿತರರು ಪಾಲ್ಗೊಂಡಿದ್ದರು.</p>.<p><a href="https://www.prajavani.net/india-news/rahul-gandhi-says-pegasus-a-tool-to-silence-people-854939.html" itemprop="url">ದೇಶದ ಜನರ ಧ್ವನಿ ಅಡಗಿಸುವ ಸಾಧನ ಪೆಗಾಸಸ್: ರಾಹುಲ್ ಗಾಂಧಿ </a></p>.<p class="Subhead"><strong>‘ಶೋಕಾಚರಣೆಯ ದಿನ’:</strong> ‘ಜಮ್ಮು–ಕಾಶ್ಮೀರದ ಪಾಲಿಗೆ ಶೋಕಾಚರಣೆಯ ದಿನವಿದು. 2019ರಲ್ಲಿ ಬಿಜೆಪಿ ಸರ್ಕಾರ ದಬ್ಬಾಳಿಕೆ ಆರಂಭಿಸಿತು. ಅನಾಗರಿಕ ರೀತಿಯಲ್ಲಿ ವರ್ತಿಸಲು ಶುರು ಮಾಡಿತು. ಕಾಶ್ಮೀರ ಶೋಕದಲ್ಲಿ ಮುಳುಗಿದ್ದರೆ ಬಿಜೆಪಿ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ದುರದೃಷ್ಟಕರ’ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಗುರುವಾರ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ‘ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರವನ್ನು ಮರಳಿಸುವಂತೆ ಕೋರಿ ಸಂಸತ್ ಹಾಗೂ ದೇಶದ ಜನರ ಮೊರೆ ಹೋಗಲಾಗುವುದು’ ಎಂದು ಪೀಪಲ್ಸ್ ಅಲಯೆನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ (ಪಿಎಜಿಡಿ) ಗುರುವಾರ ಹೇಳಿದೆ.</p>.<p>ಅಲ್ಲದೇ, 370ನೇ ವಿಧಿ ರದ್ದುಗೊಳಿಸಿದ ನಂತರದ ಅವಧಿಯಲ್ಲಿ ಆಗಿರುವ ಎಲ್ಲ ಬೆಳವಣಿಗೆಗಳಿಗೆ ಬಿಜೆಪಿ ಸರ್ಕಾರವನ್ನೇ ಉತ್ತರದಾಯಿಯನ್ನಾಗಿ ಮಾಡಲಾಗುವುದು ಎಂದೂ ಪಿಎಜಿಡಿ ಮುಖಂಡರು ಹೇಳಿದ್ದಾರೆ.</p>.<p>ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಎರಡು ವರ್ಷಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ಪಿಎಜಿಡಿ ಅಧ್ಯಕ್ಷರೂ ಆಗಿರುವ ನ್ಯಾಷನಲ್ ಕಾನ್ಫರೆನ್ಸ್ನ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಮೈತ್ರಿಕೂಟದ ಅಂಗಪಕ್ಷಗಳ ಸಭೆ ನಡೆಯಿತು.</p>.<p><a href="https://www.prajavani.net/india-news/mizoram-and-assam-agree-to-resolveboundary-issue-amicably-854946.html" itemprop="url">ಗಡಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಅಸ್ಸಾಂ–ಮಿಜೋರಾಂ ಒಪ್ಪಿಗೆ </a></p>.<p>ಪಿಎಜಿಡಿ ಎಂಬುದು ಆರು ಪ್ರಮುಖ ರಾಜಕೀಯ ಪಕ್ಷಗಳ ಮೈತ್ರಿಕೂಟ. ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಮರಳಿ ಪಡೆಯುವ ಸಲುವಾಗಿ ಹೋರಾಟ ನಡೆಸಲು ಕಳೆದ ವರ್ಷ ಅಕ್ಟೋಬರ್ನಲ್ಲಿ ಈ ಮೈತ್ರಿಕೂಟ ರಚಿಸಲಾಗಿದೆ.</p>.<p>ಸಭೆಯಲ್ಲಿ ಮಾತನಾಡಿದ ವಿವಿಧ ಪಕ್ಷಗಳ ಮುಖಂಡರು, ‘2019ರ ಆಗಸ್ಟ್ 5ರಂದು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು’ ಎಂದರು. ಸಂವಿಧಾನ ನೀಡಿರುವ ಈ ಹಕ್ಕುಗಳನ್ನು ಮರಳಿ ಪಡೆಯುವ ಶಪಥ ಮಾಡಿದರು. ಅಲ್ಲದೇ, ನಮ್ಮ ಹೋರಾಟವನ್ನು ತಡೆಯಲು ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂಬುದಾಗಿ ಹೇಳಿದರು ಎಂದು ಮೂಲಗಳು ತಿಳಿಸಿವೆ.</p>.<p>ಒಂದು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಸಿಪಿಎಂ ನಾಯಕ ಮೊಹಮ್ಮದ್ ಯೂಸೂಫ್ ತಾರಿಗಾಮಿ ಮತ್ತಿತರರು ಪಾಲ್ಗೊಂಡಿದ್ದರು.</p>.<p><a href="https://www.prajavani.net/india-news/rahul-gandhi-says-pegasus-a-tool-to-silence-people-854939.html" itemprop="url">ದೇಶದ ಜನರ ಧ್ವನಿ ಅಡಗಿಸುವ ಸಾಧನ ಪೆಗಾಸಸ್: ರಾಹುಲ್ ಗಾಂಧಿ </a></p>.<p class="Subhead"><strong>‘ಶೋಕಾಚರಣೆಯ ದಿನ’:</strong> ‘ಜಮ್ಮು–ಕಾಶ್ಮೀರದ ಪಾಲಿಗೆ ಶೋಕಾಚರಣೆಯ ದಿನವಿದು. 2019ರಲ್ಲಿ ಬಿಜೆಪಿ ಸರ್ಕಾರ ದಬ್ಬಾಳಿಕೆ ಆರಂಭಿಸಿತು. ಅನಾಗರಿಕ ರೀತಿಯಲ್ಲಿ ವರ್ತಿಸಲು ಶುರು ಮಾಡಿತು. ಕಾಶ್ಮೀರ ಶೋಕದಲ್ಲಿ ಮುಳುಗಿದ್ದರೆ ಬಿಜೆಪಿ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ದುರದೃಷ್ಟಕರ’ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಗುರುವಾರ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>