<p><strong>ಪಟ್ನಾ</strong>: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್ ಕುಮಾರ್, ಹಿಂದಿನ ಮೈತ್ರಿಕೂಟವನ್ನು ತೊರೆದು ಹೊಸ ಮೈತ್ರಿ ಮೂಲಕ ಸರ್ಕಾರ ರಚಿಸುವುದಾಗಿ ಹೇಳಿದ್ದಾರೆ.</p><p>‘ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೂ ತಿಳಿಸಿದ್ದೇನೆ’ಎಂದು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಹೇಳಿದ್ದಾರೆ.</p><p>ಮಹಾಘಟಬಂಧನ ಮತ್ತು ಇಂಡಿಯಾ ಬಣದಲ್ಲಿ ಎಲ್ಲವೂ ಸರಿಯಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದಲೂ ಅಭಿಪ್ರಾಯಗಳನ್ನು ಪಡೆದಿದ್ದೇನೆ. ಆ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ಇಂದು ಸರ್ಕಾರ ವಿಸರ್ಜನೆಯಾಗಿದೆ ಎಂದು ರಾಜಭವನದ ಹೊರಗೆ ನಿತೀಶ್ ಕುಮಾರ್ ಸುದ್ದಿಗಾರರರಿಗೆ ತಿಳಿಸಿದ್ದಾರೆ.</p><p>'ಹಿಂದಿನ ಮೈತ್ರಿಕೂಟದಲ್ಲಿ ಕೆಲಸ ಮಾಡಲು ನನಗೆ ಬಹಳ ಕಷ್ಟವಾಗುತ್ತಿತ್ತು. ಪಕ್ಷದ ಸದಸ್ಯರಿಗೆ ಈ ಬಗ್ಗೆ ವಿವರಿಸಿದಾಗ, ರಾಜೀನಾಮೆ ನೀಡುವಂತೆ ಸಲಹೆ ನೀಡಿದರು. ಹಾಗಾಗಿ, ರಾಜೀನಾಮೆ ನೀಡಿದೆ’ ಎಂದಿದ್ದಾರೆ.</p><p>‘ಇಂಡಿಯಾ ಮೈತ್ರಿಕೂಟ ಸೇರಿಕೊಂಡಿದ್ದೆ. ಆದರೆ, ಅಲ್ಲಿ ಯಾವ ಕೆಲಸವೂ ಆಗುತ್ತಿರಲಿಲ್ಲ. ಇಂಡಿಯಾ ಬಣ ತೊರೆದಿದ್ದೇನೆ’ ಎಂದು ಹೇಳಿದ್ದಾರೆ</p><p>ನಿತೀಶ್ ಕುಮಾರ್ ರಾಜೀನಾಮೆಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡುವ ಉದ್ದೇಶ ಹೊಂದಿರುವ ಇಂಡಿಯಾ ಬಣಕ್ಕೆ ಹಿನ್ನಡೆಯಾಗಿದೆ. </p> .ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್ ಕುಮಾರ್, ಹಿಂದಿನ ಮೈತ್ರಿಕೂಟವನ್ನು ತೊರೆದು ಹೊಸ ಮೈತ್ರಿ ಮೂಲಕ ಸರ್ಕಾರ ರಚಿಸುವುದಾಗಿ ಹೇಳಿದ್ದಾರೆ.</p><p>‘ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೂ ತಿಳಿಸಿದ್ದೇನೆ’ಎಂದು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಹೇಳಿದ್ದಾರೆ.</p><p>ಮಹಾಘಟಬಂಧನ ಮತ್ತು ಇಂಡಿಯಾ ಬಣದಲ್ಲಿ ಎಲ್ಲವೂ ಸರಿಯಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದಲೂ ಅಭಿಪ್ರಾಯಗಳನ್ನು ಪಡೆದಿದ್ದೇನೆ. ಆ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ್ದೇನೆ. ಇಂದು ಸರ್ಕಾರ ವಿಸರ್ಜನೆಯಾಗಿದೆ ಎಂದು ರಾಜಭವನದ ಹೊರಗೆ ನಿತೀಶ್ ಕುಮಾರ್ ಸುದ್ದಿಗಾರರರಿಗೆ ತಿಳಿಸಿದ್ದಾರೆ.</p><p>'ಹಿಂದಿನ ಮೈತ್ರಿಕೂಟದಲ್ಲಿ ಕೆಲಸ ಮಾಡಲು ನನಗೆ ಬಹಳ ಕಷ್ಟವಾಗುತ್ತಿತ್ತು. ಪಕ್ಷದ ಸದಸ್ಯರಿಗೆ ಈ ಬಗ್ಗೆ ವಿವರಿಸಿದಾಗ, ರಾಜೀನಾಮೆ ನೀಡುವಂತೆ ಸಲಹೆ ನೀಡಿದರು. ಹಾಗಾಗಿ, ರಾಜೀನಾಮೆ ನೀಡಿದೆ’ ಎಂದಿದ್ದಾರೆ.</p><p>‘ಇಂಡಿಯಾ ಮೈತ್ರಿಕೂಟ ಸೇರಿಕೊಂಡಿದ್ದೆ. ಆದರೆ, ಅಲ್ಲಿ ಯಾವ ಕೆಲಸವೂ ಆಗುತ್ತಿರಲಿಲ್ಲ. ಇಂಡಿಯಾ ಬಣ ತೊರೆದಿದ್ದೇನೆ’ ಎಂದು ಹೇಳಿದ್ದಾರೆ</p><p>ನಿತೀಶ್ ಕುಮಾರ್ ರಾಜೀನಾಮೆಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡುವ ಉದ್ದೇಶ ಹೊಂದಿರುವ ಇಂಡಿಯಾ ಬಣಕ್ಕೆ ಹಿನ್ನಡೆಯಾಗಿದೆ. </p> .ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>