<p><strong>ಚಂಡೀಗಡ:</strong>‘ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ)’ ಅನುಮತಿ ನೀಡಿದರೆ ನ.26ರಂದು ಸಂಸತ್ ಭವನದತ್ತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳುವುದಾಗಿ ‘ಭಾರತ್ ಕಿಸಾನ್ ಯೂನಿಯನ್ನ (ಬಿಕೆಯು)’ ಹರಿಯಾಣ ಘಟಕದ ಅಧ್ಯಕ್ಷ ಗುರುನಾಮ್ ಸಿಂಗ್ ಚಡೂನಿ ಹೇಳಿದ್ದಾರೆ.</p>.<p>ಹರಿಯಾಣದ ಅನೇಕ ರೈತ ಸಂಘಟನೆಗಳ ಜತೆ ರೋಹ್ಟಕ್ನಲ್ಲಿ ಭಾನುವಾರ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ಸಂವಿಧಾನ ದಿನವೂ ಆಗಿರುವ ನ.26ರಂದು ಸಂಸತ್ಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಕುರಿತು ನ.9ರಂದು ಸಂಯುಕ್ತ ಕಿಸಾನ್ ಮೋರ್ಚಾಗೆ ಪ್ರಸ್ತಾವ ಸಲ್ಲಿಸಲಿದ್ದೇವೆ. ಅನುಮತಿ ದೊರೆತರೆ ಮುಂದುವರಿಯಲಿದ್ದೇವೆ’ ಎಂದು ಚಡೂನಿ ಹೇಳಿದ್ದಾರೆ.</p>.<p>ಬಿಜೆಪಿ ಸಂಸದ ಅರವಿಂದ ಶರ್ಮಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲೂ ನಿರ್ಧರಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>ಪಕ್ಷದ ಕೆಲವು ನಾಯಕರನ್ನು ರೋಹ್ಟಕ್ನಲ್ಲಿ ಶುಕ್ರವಾರ ವಶಕ್ಕೆ ಪಡೆದದ್ದನ್ನು ವಿರೋಧಿಸಿ ಹೇಳಿಕೆ ನೀಡಿದ್ದ ಅರವಿಂದ ಶರ್ಮಾ, ಹರಿಯಾಣದ ಮಾಜಿ ಸಚಿವ ಮನೀಷ್ ಗ್ರೋವರ್ ತಂಟೆಗೆ ಯಾರಾದರೂ ಮುಂದಾದರೆ ಅಂಥವರ ಕಣ್ಣು ಕಿತ್ತು ಕೈ ಕತ್ತರಿಸಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.</p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಲವು ರೈತರಿಗೆ ಅನೇಕ ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗುತ್ತಿದೆ. ಈ ಸಮನ್ಸ್ಗಳಿಗೆ ಯಾರೂ ಉತ್ತರಿಸಲು ಹೋಗಬಾರದು ಎಂದೂ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದೂ ಚಡೂನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong>‘ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ)’ ಅನುಮತಿ ನೀಡಿದರೆ ನ.26ರಂದು ಸಂಸತ್ ಭವನದತ್ತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳುವುದಾಗಿ ‘ಭಾರತ್ ಕಿಸಾನ್ ಯೂನಿಯನ್ನ (ಬಿಕೆಯು)’ ಹರಿಯಾಣ ಘಟಕದ ಅಧ್ಯಕ್ಷ ಗುರುನಾಮ್ ಸಿಂಗ್ ಚಡೂನಿ ಹೇಳಿದ್ದಾರೆ.</p>.<p>ಹರಿಯಾಣದ ಅನೇಕ ರೈತ ಸಂಘಟನೆಗಳ ಜತೆ ರೋಹ್ಟಕ್ನಲ್ಲಿ ಭಾನುವಾರ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ಸಂವಿಧಾನ ದಿನವೂ ಆಗಿರುವ ನ.26ರಂದು ಸಂಸತ್ಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಕುರಿತು ನ.9ರಂದು ಸಂಯುಕ್ತ ಕಿಸಾನ್ ಮೋರ್ಚಾಗೆ ಪ್ರಸ್ತಾವ ಸಲ್ಲಿಸಲಿದ್ದೇವೆ. ಅನುಮತಿ ದೊರೆತರೆ ಮುಂದುವರಿಯಲಿದ್ದೇವೆ’ ಎಂದು ಚಡೂನಿ ಹೇಳಿದ್ದಾರೆ.</p>.<p>ಬಿಜೆಪಿ ಸಂಸದ ಅರವಿಂದ ಶರ್ಮಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲೂ ನಿರ್ಧರಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>ಪಕ್ಷದ ಕೆಲವು ನಾಯಕರನ್ನು ರೋಹ್ಟಕ್ನಲ್ಲಿ ಶುಕ್ರವಾರ ವಶಕ್ಕೆ ಪಡೆದದ್ದನ್ನು ವಿರೋಧಿಸಿ ಹೇಳಿಕೆ ನೀಡಿದ್ದ ಅರವಿಂದ ಶರ್ಮಾ, ಹರಿಯಾಣದ ಮಾಜಿ ಸಚಿವ ಮನೀಷ್ ಗ್ರೋವರ್ ತಂಟೆಗೆ ಯಾರಾದರೂ ಮುಂದಾದರೆ ಅಂಥವರ ಕಣ್ಣು ಕಿತ್ತು ಕೈ ಕತ್ತರಿಸಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.</p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಲವು ರೈತರಿಗೆ ಅನೇಕ ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗುತ್ತಿದೆ. ಈ ಸಮನ್ಸ್ಗಳಿಗೆ ಯಾರೂ ಉತ್ತರಿಸಲು ಹೋಗಬಾರದು ಎಂದೂ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದೂ ಚಡೂನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>