<p><strong>ನವದೆಹಲಿ</strong>: 'ಉದ್ಯಮಿ ಗೌತಮ್ ಅದಾನಿ ಮತ್ತು ನಿಖಿಲ್ ಮರ್ಚೆಂಟ್ಗೆ ಹೊಸ ಸಂಸತ್ ಭವನದಲ್ಲಿ ವಿಶೇಷ ಕೊಠಡಿಗಳೇನಾದರೂ ಇವೆಯೇ' ಎಂದು ಕೇಳುವ ಮೂಲಕ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಿದ್ದಾರೆ.</p>.<p>ದೆಹಲಿಯಲ್ಲಿ ನಿರ್ಮಾಣಗೊಂಡಿರುವ ಹೊಸ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ದಿಢೀರ್ ಭೇಟಿ ನೀಡಿದ್ದರು. ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದ ಮೋದಿ ಅವರ ಫೋಟೊ, ವಿಡಿಯೊಗಳು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.</p>.<p>ಇದೇ ಹಿನ್ನೆಲೆಯಲ್ಲಿ ಶನಿವಾರ ಟ್ವೀಟ್ ಮಾಡಿರುವ ಮಹುವಾ, ‘ನಮ್ಮ ಹೊಸ ಸಂಸತ್ತಿನಲ್ಲಿ ಅದಾನಿ, ನಿಖಿಲ್ ಮರ್ಚೆಂಟ್ಗೆ ವಿಶೇಷ ಕೊಠಡಿಗಳೇನಾದರೂ ಇವೆಯೇ? ಬಿಜೆಪಿಗೆ ಪಕ್ಷಾಂತರಗೊಳ್ಳುವ ನಾಯಕರಿಗೆ ನೆಲಮಾಳಿಗೆಯಲ್ಲಿ ವಾಷಿಂಗ್ ಮೆಷಿನ್ ಕೊಠಡಿ ಇದೆಯೇ? ಎಂದು ಪ್ರಶ್ನೆ ಮಾಡಿ ಕುಹಕವಾಡಿದ್ದಾರೆ.</p>.<p>ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಕೃಷ್ಣನಗರ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದೆಯಾಗಿರುವ ಮಹುವಾ, ಟ್ವಿಟರ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸದಾ ಟೀಕೆಗೆ ಗುರಿಪಡಿಸುವ ಅವರು, ಸಂಸತ್ತಿನಲ್ಲಿಯೂ ತರಾಟೆಗೆ ತೆಗೆದುಕೊಂಡ ಹಲವು ನಿದರ್ಶನಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ಉದ್ಯಮಿ ಗೌತಮ್ ಅದಾನಿ ಮತ್ತು ನಿಖಿಲ್ ಮರ್ಚೆಂಟ್ಗೆ ಹೊಸ ಸಂಸತ್ ಭವನದಲ್ಲಿ ವಿಶೇಷ ಕೊಠಡಿಗಳೇನಾದರೂ ಇವೆಯೇ' ಎಂದು ಕೇಳುವ ಮೂಲಕ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಿದ್ದಾರೆ.</p>.<p>ದೆಹಲಿಯಲ್ಲಿ ನಿರ್ಮಾಣಗೊಂಡಿರುವ ಹೊಸ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ದಿಢೀರ್ ಭೇಟಿ ನೀಡಿದ್ದರು. ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದ ಮೋದಿ ಅವರ ಫೋಟೊ, ವಿಡಿಯೊಗಳು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.</p>.<p>ಇದೇ ಹಿನ್ನೆಲೆಯಲ್ಲಿ ಶನಿವಾರ ಟ್ವೀಟ್ ಮಾಡಿರುವ ಮಹುವಾ, ‘ನಮ್ಮ ಹೊಸ ಸಂಸತ್ತಿನಲ್ಲಿ ಅದಾನಿ, ನಿಖಿಲ್ ಮರ್ಚೆಂಟ್ಗೆ ವಿಶೇಷ ಕೊಠಡಿಗಳೇನಾದರೂ ಇವೆಯೇ? ಬಿಜೆಪಿಗೆ ಪಕ್ಷಾಂತರಗೊಳ್ಳುವ ನಾಯಕರಿಗೆ ನೆಲಮಾಳಿಗೆಯಲ್ಲಿ ವಾಷಿಂಗ್ ಮೆಷಿನ್ ಕೊಠಡಿ ಇದೆಯೇ? ಎಂದು ಪ್ರಶ್ನೆ ಮಾಡಿ ಕುಹಕವಾಡಿದ್ದಾರೆ.</p>.<p>ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಕೃಷ್ಣನಗರ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದೆಯಾಗಿರುವ ಮಹುವಾ, ಟ್ವಿಟರ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸದಾ ಟೀಕೆಗೆ ಗುರಿಪಡಿಸುವ ಅವರು, ಸಂಸತ್ತಿನಲ್ಲಿಯೂ ತರಾಟೆಗೆ ತೆಗೆದುಕೊಂಡ ಹಲವು ನಿದರ್ಶನಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>