<p><strong>ಜೈಪುರ: </strong>‘ದೇಶ ರಕ್ಷಣೆ ವೇಳೆ ಪತಿಯು ಹುತಾತ್ಮರಾಗಿರುವುದು ನನಗೆ ಹೆಮ್ಮೆಯ ವಿಚಾರ. ಅವರು ಹುತಾತ್ಮರಾಗಿರುವುದಕ್ಕೆ ಕಣ್ಣೀರಿಡಲಾರೆ. ದೇಶಕ್ಕಾಗಿ ತ್ಯಾಗ ಮಾಡುವುದು ಗೌರವದ ವಿಚಾರ’. ಹೀಗೆ ಹೇಳಿದ್ದು ಹಂದ್ವಾರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹುತಾತ್ಮರಾದ ಕರ್ನಲ್ ಆಶುತೋಷ್ ಶರ್ಮಾ ಅವರ ಪತ್ನಿ ಪಲ್ಲವಿ ಶರ್ಮಾ.</p>.<p>ಆಶುತೋಷ್ ಶರ್ಮಾ ಅವರು ಪತ್ನಿ ಪಲ್ಲವಿ ಶರ್ಮಾ, 12 ವರ್ಷ ವಯಸ್ಸಿನ ಮಗಳು ತಮನ್ನಾರನ್ನು ಅಗಲಿದ್ದಾರೆ. ಇವರಿಬ್ಬರೂ ರಾಜಸ್ಥಾನದ ವೈಶಾಲಿನಗರದ ರಂಗೋಲಿ ಗಾರ್ಡನ್ಸ್ ಸೊಸೈಟಿಯಲ್ಲಿ ವಾಸವಿದ್ದಾರೆ. ಪಲ್ಲವಿ ಅವರ ಕುಟುಂಬದವರು ಮತ್ತು ತಾಯಿ ಜೈಪುರದ ಜೈಸಿಂಗಾಪುರದಲ್ಲಿ ವಾಸವಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/information-about-ashutosh-sharma-724919.html" itemprop="url" target="_blank">ಕಾಶ್ಮೀರದಲ್ಲಿ ನಿನ್ನೆ ಹುತಾತ್ಮರಾದಕರ್ನಲ್ ಆಶುತೋಷ್ ಶರ್ಮಾ ಯಾರು?</a></p>.<p>‘ಮೇ 1ರಂದು ಅವರ ಬಳಿ ಮಾತನಾಡಿದ್ದೇನೆ. ಅದಾದ ಬಳಿಕ ಅವರು ಕಾರ್ಯಾಚರಣೆಗೆ ತೆರಳಿದ್ದರು. ಫೆಬ್ರುವರಿ 28ರಂದು ಉಧಂಪುರದಲ್ಲಿ ನಾವು ಭೇಟಿಯಾಗಿದ್ದೆವು. ಅದೇ ಕೊನೆ, ಆ ಬಳಿಕ ದೂರವಾಣಿಯಲ್ಲಷ್ಟೇ ಮಾತುಕತೆ’ ಎಂದು ಹಿಂದಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ ಪಲ್ಲವಿ ಶರ್ಮಾ.</p>.<p>‘ದೇಶ ಸೇವೆ ಮಾಡಬೇಕಿದ್ದರೆ ಸೇನೆ ಸೇರಲೇಬೇಕು ಎಂದೇನೂ ಇಲ್ಲ. ಒಬ್ಬ ಉತ್ತಮ ಮತ್ತು ಜವಾಬ್ದಾರಿಯುತ ಮಾನವನಾಗುವುದು ಮುಖ್ಯ. ಎಲ್ಲರೂ ಅವರ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದರೆ ಅದುವೇ ದೇಶ ಸೇವೆ’ ಎಂದೂ ಪಲ್ಲವಿ ಶರ್ಮಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/colonel-major-among-seven-killed-in-kashmir-handwara-724776.html" target="_blank">ಹಂದ್ವಾರ ಎನ್ಕೌಂಟರ್–ಕರ್ನಲ್, ಮೇಜರ್ ಸೇರಿ ಐವರು ಹುತಾತ್ಮ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>‘ದೇಶ ರಕ್ಷಣೆ ವೇಳೆ ಪತಿಯು ಹುತಾತ್ಮರಾಗಿರುವುದು ನನಗೆ ಹೆಮ್ಮೆಯ ವಿಚಾರ. ಅವರು ಹುತಾತ್ಮರಾಗಿರುವುದಕ್ಕೆ ಕಣ್ಣೀರಿಡಲಾರೆ. ದೇಶಕ್ಕಾಗಿ ತ್ಯಾಗ ಮಾಡುವುದು ಗೌರವದ ವಿಚಾರ’. ಹೀಗೆ ಹೇಳಿದ್ದು ಹಂದ್ವಾರದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹುತಾತ್ಮರಾದ ಕರ್ನಲ್ ಆಶುತೋಷ್ ಶರ್ಮಾ ಅವರ ಪತ್ನಿ ಪಲ್ಲವಿ ಶರ್ಮಾ.</p>.<p>ಆಶುತೋಷ್ ಶರ್ಮಾ ಅವರು ಪತ್ನಿ ಪಲ್ಲವಿ ಶರ್ಮಾ, 12 ವರ್ಷ ವಯಸ್ಸಿನ ಮಗಳು ತಮನ್ನಾರನ್ನು ಅಗಲಿದ್ದಾರೆ. ಇವರಿಬ್ಬರೂ ರಾಜಸ್ಥಾನದ ವೈಶಾಲಿನಗರದ ರಂಗೋಲಿ ಗಾರ್ಡನ್ಸ್ ಸೊಸೈಟಿಯಲ್ಲಿ ವಾಸವಿದ್ದಾರೆ. ಪಲ್ಲವಿ ಅವರ ಕುಟುಂಬದವರು ಮತ್ತು ತಾಯಿ ಜೈಪುರದ ಜೈಸಿಂಗಾಪುರದಲ್ಲಿ ವಾಸವಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/information-about-ashutosh-sharma-724919.html" itemprop="url" target="_blank">ಕಾಶ್ಮೀರದಲ್ಲಿ ನಿನ್ನೆ ಹುತಾತ್ಮರಾದಕರ್ನಲ್ ಆಶುತೋಷ್ ಶರ್ಮಾ ಯಾರು?</a></p>.<p>‘ಮೇ 1ರಂದು ಅವರ ಬಳಿ ಮಾತನಾಡಿದ್ದೇನೆ. ಅದಾದ ಬಳಿಕ ಅವರು ಕಾರ್ಯಾಚರಣೆಗೆ ತೆರಳಿದ್ದರು. ಫೆಬ್ರುವರಿ 28ರಂದು ಉಧಂಪುರದಲ್ಲಿ ನಾವು ಭೇಟಿಯಾಗಿದ್ದೆವು. ಅದೇ ಕೊನೆ, ಆ ಬಳಿಕ ದೂರವಾಣಿಯಲ್ಲಷ್ಟೇ ಮಾತುಕತೆ’ ಎಂದು ಹಿಂದಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ ಪಲ್ಲವಿ ಶರ್ಮಾ.</p>.<p>‘ದೇಶ ಸೇವೆ ಮಾಡಬೇಕಿದ್ದರೆ ಸೇನೆ ಸೇರಲೇಬೇಕು ಎಂದೇನೂ ಇಲ್ಲ. ಒಬ್ಬ ಉತ್ತಮ ಮತ್ತು ಜವಾಬ್ದಾರಿಯುತ ಮಾನವನಾಗುವುದು ಮುಖ್ಯ. ಎಲ್ಲರೂ ಅವರ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದರೆ ಅದುವೇ ದೇಶ ಸೇವೆ’ ಎಂದೂ ಪಲ್ಲವಿ ಶರ್ಮಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/colonel-major-among-seven-killed-in-kashmir-handwara-724776.html" target="_blank">ಹಂದ್ವಾರ ಎನ್ಕೌಂಟರ್–ಕರ್ನಲ್, ಮೇಜರ್ ಸೇರಿ ಐವರು ಹುತಾತ್ಮ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>