<p><strong>ನವದೆಹಲಿ:</strong> ಸಂಸತ್ ಅಧಿವೇಶನದಲ್ಲಿ ಮೌಲ್ಯಯುತ ಚರ್ಚೆಗೆ ಆದ್ಯತೆ ಕೊಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಪ್ರಧಾನಿ ಎಂದಾದರೂ ಸಂಸತ್ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ.</p>.<p>ಸಂಸತ್ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆಗೆ ಪ್ರತ್ಯೇಕ ಸಮಯವನ್ನು ಕಲ್ಪಿಸುವ ಮಹತ್ವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದರು.</p>.<p>'ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಗಳ ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿರುವುದು ಆಸಕ್ತಿದಾಯಕವಾಗಿದೆ. ಗುಣಮಟ್ಟದ ಚರ್ಚೆಗಳಿಗಾಗಿ ಪ್ರತ್ಯೇಕ ಸಮಯವನ್ನು ನಿಗದಿ ಮಾಡುವಂತೆಯೂ ಸಲಹೆ ಮಾಡಿದ್ದಾರೆ. ಆದರೆ ಈಗ ಉದ್ಭವಿಸಿರುವ ಪ್ರಶ್ನೆ ಏನೆಂದರೆ ಸಂಸತ್ತಿನಲ್ಲಿ ಪ್ರಧಾನಿ ಎಂದಾದರೂ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/delhi-govt-has-prepared-six-point-action-plan-to-clean-yamuna-arvind-kejriwal-884816.html" itemprop="url">ಯಮುನಾ ನದಿ ಸ್ವಚ್ಛತೆಗೆ ಆರು ಅಂಶಗಳ ಯೋಜನೆ: ಕೇಜ್ರಿವಾಲ್ </a></p>.<p>ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಚರ್ಚೆಯಿಂದ ಸರ್ಕಾರ ಪಾಲಾಯನ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅತ್ತ ವಿರೋಧ ಪಕ್ಷಗಳು ಸದನದ ಕಾರ್ಯಕಲಾಪಕ್ಕೆ ಅಡ್ಡಿಯಾಗುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ ಅಧಿವೇಶನದಲ್ಲಿ ಮೌಲ್ಯಯುತ ಚರ್ಚೆಗೆ ಆದ್ಯತೆ ಕೊಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಪ್ರಧಾನಿ ಎಂದಾದರೂ ಸಂಸತ್ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ.</p>.<p>ಸಂಸತ್ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆಗೆ ಪ್ರತ್ಯೇಕ ಸಮಯವನ್ನು ಕಲ್ಪಿಸುವ ಮಹತ್ವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದರು.</p>.<p>'ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಗಳ ಅಗತ್ಯವಿದೆ ಎಂದು ಪ್ರಧಾನಿ ಒತ್ತಿ ಹೇಳಿರುವುದು ಆಸಕ್ತಿದಾಯಕವಾಗಿದೆ. ಗುಣಮಟ್ಟದ ಚರ್ಚೆಗಳಿಗಾಗಿ ಪ್ರತ್ಯೇಕ ಸಮಯವನ್ನು ನಿಗದಿ ಮಾಡುವಂತೆಯೂ ಸಲಹೆ ಮಾಡಿದ್ದಾರೆ. ಆದರೆ ಈಗ ಉದ್ಭವಿಸಿರುವ ಪ್ರಶ್ನೆ ಏನೆಂದರೆ ಸಂಸತ್ತಿನಲ್ಲಿ ಪ್ರಧಾನಿ ಎಂದಾದರೂ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/delhi-govt-has-prepared-six-point-action-plan-to-clean-yamuna-arvind-kejriwal-884816.html" itemprop="url">ಯಮುನಾ ನದಿ ಸ್ವಚ್ಛತೆಗೆ ಆರು ಅಂಶಗಳ ಯೋಜನೆ: ಕೇಜ್ರಿವಾಲ್ </a></p>.<p>ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಚರ್ಚೆಯಿಂದ ಸರ್ಕಾರ ಪಾಲಾಯನ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅತ್ತ ವಿರೋಧ ಪಕ್ಷಗಳು ಸದನದ ಕಾರ್ಯಕಲಾಪಕ್ಕೆ ಅಡ್ಡಿಯಾಗುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>