<p class="title"><strong>ಕುಲ್ತಾಲಿ(ಪಶ್ಚಿಮ ಬಂಗಾಳ): </strong>ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರವೇ ರಾಜಕೀಯದಲ್ಲಿ ಅವಕಾಶ ಎಂಬ ಕಾನೂನನ್ನು ಕೇಂದ್ರ ಜಾರಿಗೊಳಿಸಿದರೆ ಖಂಡಿತವಾಗಿಯೂ ರಾಜಕೀಯ ತೊರೆಯುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಭಾನುವಾರ ತಿಳಿಸಿದ್ದಾರೆ.</p>.<p class="title">ಬಿಜೆಪಿಯಲ್ಲಿನ ತಮ್ಮ ವಿರೋಧಿಗಳಿಗೆ ನೇರವಾಗಿ ಸವಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಮುಖಂಡ ಅಭಿಷೇಕ್, ‘ನನ್ನ ಮೇಲಿರುವ ಭ್ರಷ್ಟಾಚಾರ ಆರೋಪಗಳನ್ನು ಸಾಬೀತುಪಡಿಸಿದರೆ, ಸಾರ್ವಜನಿಕವಾಗಿ ನೇಣಿಗೆ ಶರಣಾಗುತ್ತೇನೆ’ ಎಂದು ಹೇಳಿದ್ದಾರೆ.</p>.<p class="title">ಕುಲ್ತಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಟುಂಬದ ಒಂದಕ್ಕಿಂತ ಹೆಚ್ಚು ಸದಸ್ಯರನ್ನು ಸಕ್ರಿಯ ರಾಜಕೀಯದಿಂದ ನಿಷೇಧಿಸುವ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಬೇಕು. ಹೀಗಾದರೆ, ಮರು ಕ್ಷಣದಿಂದಲೇ ಬ್ಯಾನರ್ಜಿ ರಾಜಕೀಯ ರಂಗದಲ್ಲಿ ಇರುವುದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕುಲ್ತಾಲಿ(ಪಶ್ಚಿಮ ಬಂಗಾಳ): </strong>ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರವೇ ರಾಜಕೀಯದಲ್ಲಿ ಅವಕಾಶ ಎಂಬ ಕಾನೂನನ್ನು ಕೇಂದ್ರ ಜಾರಿಗೊಳಿಸಿದರೆ ಖಂಡಿತವಾಗಿಯೂ ರಾಜಕೀಯ ತೊರೆಯುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಭಾನುವಾರ ತಿಳಿಸಿದ್ದಾರೆ.</p>.<p class="title">ಬಿಜೆಪಿಯಲ್ಲಿನ ತಮ್ಮ ವಿರೋಧಿಗಳಿಗೆ ನೇರವಾಗಿ ಸವಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಮುಖಂಡ ಅಭಿಷೇಕ್, ‘ನನ್ನ ಮೇಲಿರುವ ಭ್ರಷ್ಟಾಚಾರ ಆರೋಪಗಳನ್ನು ಸಾಬೀತುಪಡಿಸಿದರೆ, ಸಾರ್ವಜನಿಕವಾಗಿ ನೇಣಿಗೆ ಶರಣಾಗುತ್ತೇನೆ’ ಎಂದು ಹೇಳಿದ್ದಾರೆ.</p>.<p class="title">ಕುಲ್ತಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಟುಂಬದ ಒಂದಕ್ಕಿಂತ ಹೆಚ್ಚು ಸದಸ್ಯರನ್ನು ಸಕ್ರಿಯ ರಾಜಕೀಯದಿಂದ ನಿಷೇಧಿಸುವ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಬೇಕು. ಹೀಗಾದರೆ, ಮರು ಕ್ಷಣದಿಂದಲೇ ಬ್ಯಾನರ್ಜಿ ರಾಜಕೀಯ ರಂಗದಲ್ಲಿ ಇರುವುದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>