ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್ಸಿ), ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ರದ್ದುಪಡಿಸಲಾಗುವುದು. ಜತೆಗೆ, ತಾರತಮ್ಯ ಆಧಾರಿತ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದಾರೆ
‘ಪ್ರಧಾನಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಚುನಾವಣೆಗಳೇ ಇರುವುದಿಲ್ಲ. ನನ್ನ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಚುನಾವಣೆ ಇದಾಗಿದೆ‘ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
‘ನಮ್ಮ ಪಕ್ಷವು (ಟಿಎಂಸಿ) ಎಲ್ಲಾ ಧರ್ಮದವರನ್ನು ಪ್ರೀತಿಸುತ್ತದೆ. ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವುದನ್ನು ಬಯಸುವುದಿಲ್ಲ‘ ಎಂದು ಹೇಳಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮಮತಾ ತಿಳಿಸಿದ್ದಾರೆ.