ಸತ್ಯಪಾಲ್ ಮಲ್ಲೀಕ್ ಅವರ ಈ ಹೇಳಿಕೆಗೆ ತಿರುಗೇಟು ನೀಡಿರುವ ರಾಹುಲ್ ಗಾಂಧಿ, ‘ರಾಜ್ಯಪಾಲರೇ, ಜಮ್ಮು ಕಾಶ್ಮೀರ ಮತ್ತು ಲಡಾಕ್ಗೆ ಬರುವಂತೆ ನೀಡಿದ ಆಹ್ವಾನವನ್ನು ವಿರೋಧ ಪಕ್ಷಗಳ ನಿಯೋಗ ಮತ್ತು ನಾನು ಸ್ವೀಕರಿಸಿದ್ದೇವೆ. ಆದರೆ, ನಮಗೆ ವಿಮಾನ ಬೇಡ. ಅಲ್ಲಿ ಮುಕ್ತವಾಗಿ ಓಡಾಡುವ, ಜನರು, ನಾಯಕರು, ಸೈನಿಕರನ್ನು ಭೇಟಿಯಾಗಲು ಸ್ವಾತಂತ್ರ್ಯವಿದೆ ಎಂಬುದನ್ನುಖಾತ್ರಿಪಡಿಸಿ,’ ಎಂದು ಟ್ವೀಟ್ ಮಾಡಿದ್ದಾರೆ.