‘ಮರಾಠ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ನೀಡಲು ಸರ್ಕಾರ ವಿಫಲವಾದರೆ ಜೂ.5ರಿಂದ ಉಪವಾಸ ಕುಳಿತು ಹೋರಾಟ ಮಾಡುತ್ತೇವೆ. ಜೂ.6ರಿಂದ ನಾವು ಹೊಸ ಆಂದೋಲನವನ್ನು ಆರಂಭಿಸುತ್ತೇವೆ. ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿಯನ್ನೂ ಶುರು ಮಾಡುತ್ತೇವೆ. ಮಹಾ ವಿಕಾಸ ಅಘಾಡಿ ಸರ್ಕಾರ ನಮಗೆ ಮೀಸಲಾತಿ ನೀಡಲಿಲ್ಲ. ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಸರ್ಕಾರವೂ ಸಮುದಾಯಕ್ಕೆ ದ್ರೋಹ ಮಾಡಿದೆ. ಎಲ್ಲಾ ಪಕ್ಷಗಳು ಕಳೆದ 40 ವರ್ಷಗಳಿಂದ ಮರಾಠ ಸಮುದಾಯವನ್ನು ಬಳಸಿಕೊಂಡಿವೆ’ ಎಂದು ಆರೋಪಿಸಿದರು.