<p><strong>ಶ್ರೀನಗರ:</strong> ಕಳೆದ ಏಪ್ರಿಲ್ನಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಕುಂಠಿತಗೊಂಡಿದ್ದ ಪ್ರವಾಸೋದ್ಯಮ ವರ್ಷಾಂತ್ಯ, ಹೊಸ ವರ್ಷದ ಆರಂಭದಲ್ಲಿ ಪುಟಿದೆದ್ದಿದೆ. </p><p>ಏಪ್ರಿಲ್ ಘಟನೆಯ ನಂತರ ತಾತ್ಕಾಲಿಕವಾಗಿ ಪ್ರವಾಸೋದ್ಯಮಕ್ಕೆ ಹಿನ್ನೆಡೆಯಾಗಿದ್ದರೂ, ಈಗ ಪರಿಸ್ಥಿತಿ ಸುಧಾರಿಸಿದೆ. ಪ್ರವಾಸಿಗರು ಮತ್ತೆ ರಜಾದಿನಗಳ ಭೇಟಿಗೆ ಕಾಶ್ಮೀರವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ 2025ರಲ್ಲಿ ಕಾಶ್ಮೀರ ಕಣಿವೆಗೆ ಸುಮಾರು 10.5 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದರಲ್ಲಿ 4 ಲಕ್ಷಕ್ಕೂ ಅಧಿಕ ಅಮರನಾಥ ಯಾತ್ರಿಕರೂ ಸೇರಿದ್ದಾರೆ. 2024ರಲ್ಲಿ ಯಾತ್ರಿಕರು ಸೇರಿ 35 ಲಕ್ಷ ಜನ ಭೇಟಿ ನೀಡಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ ಕಾಶ್ಮೀರಕ್ಕೆ ಬರುವವರ ಸಂಖ್ಯೆ ಕಡಿಮೆಯಿದ್ದರೂ ಪ್ರಸ್ತುತ ಚೇತರಿಕೆ ಕಾಣುತ್ತಿದೆ ಎಂದು ಪ್ರವಾಸೋದ್ಯಮ ಅಧಿಕಾರಿಗಳು ತಿಳಿಸಿದ್ದಾರೆ.</p><p>ಚಳಿಗಾಲದಲ್ಲಿ ವಿಶೇಷವಾಗಿ ಗುಲ್ಮಾರ್ಗ್ನಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ರೆಸಾರ್ಟ್ಗಳಲ್ಲಿ ಹಬ್ಬದ ವಾತಾವರಣ, ಹೋಟೆಲ್ಗಳಲ್ಲಿ ಜನಜಂಗುಳಿ ಕಂಡುಬರುತ್ತಿದೆ. ಹಿಮ ಆವೃತ ಪ್ರದೇಶಗಳಲ್ಲಿ ಸಾಹಸಮಯ ಆಟಗಳಲ್ಲಿ ಜನರು ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>'ಹೊಸವರ್ಷಕ್ಕೆ ಹೋಟೆಲ್ಗಳಲ್ಲಿ ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವವರ ಸಂಖ್ಯೆ ಹೆಚ್ಚಾಗಿದೆ. ನಿರ್ಭಿತಿಯಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ' ಎಂದು ಗುಲ್ಮಾರ್ಗ್ನ ಹೋಟೆಲ್ ಮಾಲೀಕರೊಬ್ಬರು ತಿಳಿಸಿದ್ದಾರೆ.</p><p>ಪಹಲ್ಗಾಮ್, ಸೋನ್ಮಾರ್ಗ್, ಶ್ರೀನಗರಗಳಲ್ಲಿ ಹಿಮದಲ್ಲಿ ಸಾಹಸಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವವರು, ನವದಂಪತಿಗಳು ಹನಿಮೂನ್ಗೆ ಬರುತ್ತಿದ್ದಾರೆ. ಪ್ರವಾಸಿಗರ ಸುರಕ್ಷತೆಗಾಗಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದ್ದು, ಪ್ರವಾಸಿಗರ ನಿರಂತರ ಹರಿವನ್ನು ಕಾಯ್ದುಕೊಳ್ಳಲು ಪ್ರವಾಸೋದ್ಯಮ ಅಧಿಕಾರಿಗಳು ಸ್ಥಳೀಯರೊಂದಿಗೆ ಸೇರಿ ಕೆಲಸ ಮಾಡುತ್ತಿದ್ದಾರೆ ಎಂದೂ ಅಧಿಕಾರಿಗಳು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕಳೆದ ಏಪ್ರಿಲ್ನಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಕುಂಠಿತಗೊಂಡಿದ್ದ ಪ್ರವಾಸೋದ್ಯಮ ವರ್ಷಾಂತ್ಯ, ಹೊಸ ವರ್ಷದ ಆರಂಭದಲ್ಲಿ ಪುಟಿದೆದ್ದಿದೆ. </p><p>ಏಪ್ರಿಲ್ ಘಟನೆಯ ನಂತರ ತಾತ್ಕಾಲಿಕವಾಗಿ ಪ್ರವಾಸೋದ್ಯಮಕ್ಕೆ ಹಿನ್ನೆಡೆಯಾಗಿದ್ದರೂ, ಈಗ ಪರಿಸ್ಥಿತಿ ಸುಧಾರಿಸಿದೆ. ಪ್ರವಾಸಿಗರು ಮತ್ತೆ ರಜಾದಿನಗಳ ಭೇಟಿಗೆ ಕಾಶ್ಮೀರವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ 2025ರಲ್ಲಿ ಕಾಶ್ಮೀರ ಕಣಿವೆಗೆ ಸುಮಾರು 10.5 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಇದರಲ್ಲಿ 4 ಲಕ್ಷಕ್ಕೂ ಅಧಿಕ ಅಮರನಾಥ ಯಾತ್ರಿಕರೂ ಸೇರಿದ್ದಾರೆ. 2024ರಲ್ಲಿ ಯಾತ್ರಿಕರು ಸೇರಿ 35 ಲಕ್ಷ ಜನ ಭೇಟಿ ನೀಡಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ ಕಾಶ್ಮೀರಕ್ಕೆ ಬರುವವರ ಸಂಖ್ಯೆ ಕಡಿಮೆಯಿದ್ದರೂ ಪ್ರಸ್ತುತ ಚೇತರಿಕೆ ಕಾಣುತ್ತಿದೆ ಎಂದು ಪ್ರವಾಸೋದ್ಯಮ ಅಧಿಕಾರಿಗಳು ತಿಳಿಸಿದ್ದಾರೆ.</p><p>ಚಳಿಗಾಲದಲ್ಲಿ ವಿಶೇಷವಾಗಿ ಗುಲ್ಮಾರ್ಗ್ನಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ರೆಸಾರ್ಟ್ಗಳಲ್ಲಿ ಹಬ್ಬದ ವಾತಾವರಣ, ಹೋಟೆಲ್ಗಳಲ್ಲಿ ಜನಜಂಗುಳಿ ಕಂಡುಬರುತ್ತಿದೆ. ಹಿಮ ಆವೃತ ಪ್ರದೇಶಗಳಲ್ಲಿ ಸಾಹಸಮಯ ಆಟಗಳಲ್ಲಿ ಜನರು ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>'ಹೊಸವರ್ಷಕ್ಕೆ ಹೋಟೆಲ್ಗಳಲ್ಲಿ ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸುವವರ ಸಂಖ್ಯೆ ಹೆಚ್ಚಾಗಿದೆ. ನಿರ್ಭಿತಿಯಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ' ಎಂದು ಗುಲ್ಮಾರ್ಗ್ನ ಹೋಟೆಲ್ ಮಾಲೀಕರೊಬ್ಬರು ತಿಳಿಸಿದ್ದಾರೆ.</p><p>ಪಹಲ್ಗಾಮ್, ಸೋನ್ಮಾರ್ಗ್, ಶ್ರೀನಗರಗಳಲ್ಲಿ ಹಿಮದಲ್ಲಿ ಸಾಹಸಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವವರು, ನವದಂಪತಿಗಳು ಹನಿಮೂನ್ಗೆ ಬರುತ್ತಿದ್ದಾರೆ. ಪ್ರವಾಸಿಗರ ಸುರಕ್ಷತೆಗಾಗಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದ್ದು, ಪ್ರವಾಸಿಗರ ನಿರಂತರ ಹರಿವನ್ನು ಕಾಯ್ದುಕೊಳ್ಳಲು ಪ್ರವಾಸೋದ್ಯಮ ಅಧಿಕಾರಿಗಳು ಸ್ಥಳೀಯರೊಂದಿಗೆ ಸೇರಿ ಕೆಲಸ ಮಾಡುತ್ತಿದ್ದಾರೆ ಎಂದೂ ಅಧಿಕಾರಿಗಳು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>