ನವದೆಹಲಿ: ಎರಡು ರಾಜ್ಯಗಳಲ್ಲಿ ಮೂರು ಜ್ಯೋತಿರ್ಲಿಂಗಗಳನ್ನು ಸಂಪರ್ಕಿಸುವ ಕಾಶಿ ‘ಮಹಾಕಾಲ್ ಎಕ್ಸ್ಪ್ರೆಸ್’ ರೈಲಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಿಂದ ಚಾಲನೆ ನೀಡಿದ್ದು, ಇದೇ ಮೊದಲ ಬಾರಿಗೆ ಶಿವನಿಗಾಗಿ ಸೀಟನ್ನು ಕಾಯ್ದಿರಿಸಲಾಗಿದೆ.
ರೈಲಿನಲ್ಲಿ 'ಭೋಲೆ ಬಾಬಾ'ನಿಗಾಗಿ ಕಾಯ್ದಿರಿಸಿದ ಆಸನವನ್ನು ಶಾಶ್ವತವಾಗಿ ಉಳಿಸಬೇಕೆ ಎನ್ನುವ ಕುರಿತು ರೈಲ್ವೆ ಅಧಿಕಾರಿಗಳು ಆಲೋಚಿಸುತ್ತಿದ್ದಾರೆ.
Varanasi: Seat number 64 of coach B5 in Kashi Mahakal Express (Varanasi-Indore) has been turned into a mini-temple of Lord Shiva. The train was flagged off by Prime Minister Narendra Modi via video conferencing yesterday. pic.twitter.com/X5rO4Ftbl6
— ANI UP (@ANINewsUP) February 16, 2020
ಲಖನೌ- ನವದೆಹಲಿ ನಡುವಿನ ತೇಜಸ್ ಮತ್ತು ಅಹ್ಮದಾಬಾದ್ - ಮುಂಬೈ ನಡುವಿನ ತೇಜಸ್ ಬಳಿಕ ಐಆರ್ಸಿಟಿಸಿ ನಿರ್ವಹಣೆಯ ಮೂರನೇ ಖಾಸಗಿ ರೈಲು ಇದಾಗಿದ್ದು, ಉತ್ತರ ಪ್ರದೇಶದ ವಾರಣಾಸಿಯಿಂದ ಮಧ್ಯಪ್ರದೇಶದ ಇಂದೋರ್ವರೆಗೆ ಚಲಿಸಲಿದೆ.
ಕಾಶಿ ಮಹಾಕಾಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಿ5 ಬೋಗಿಯಲ್ಲಿ 64ನೇ ಸೀಟನ್ನು ಶಿವನಿಗಾಗಿ ಕಾಯ್ದಿರಿಸಲಾಗಿದೆ ಮತ್ತು ಅದನ್ನು ಖಾಲಿ ಉಳಿಸಲಾಗಿದೆ'. ಮಧ್ಯಪ್ರದೇಶದ ಉಜ್ಜಯಿನಿಯಮಹಾಕಾಳನಿಗಾಗಿ ಈ ಸೀಟನ್ನು ಕಾಯ್ದಿರಿಸಲಾಗಿದೆ ಎಂದು ಜನರಿಗೆ ಅರಿವು ಮೂಡಿಸಲು ಸೀಟಿನ ಮೇಲೆ ದೇವಾಲಯವನ್ನು ಸಹ ರಚಿಸಲಾಗಿದೆ. ಇದನ್ನು ರೈಲಿನಲ್ಲಿ ಶಾಶ್ವತವಾಗಿ ಉಳಿಸಬೇಕೇ ಬೇಡವೇ ಎನ್ನುವ ಕುರಿತು ಇನ್ನೂ ನಿರ್ಧಾರವಾಗಿಲ್ಲ ಎಂದು ಉತ್ತರ ರೈಲ್ವೆ ವಕ್ತಾರ ದೀಪಕ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
Railways Gift to the Devotees of Lord Shiva: PM @NarendraModi ji inaugurated the #KashiMahakalExpress today, ensuring that the citizens have a safe, convenient & comfortable pilgrimage. pic.twitter.com/dT5I6J3Hkr
— Piyush Goyal (@PiyushGoyal) February 16, 2020
ವಾರಣಾಸಿಯಿಂದ ಇಂದೋರ್ಗೆ ವಾರದಲ್ಲಿ ಮೂರು ದಿನ ಚಲಿಸುವ 3-ಎಸಿ ರೈಲಿನಲ್ಲಿ ಲಘು ಭಕ್ತಿ ಸಂಗೀತ, ಪ್ರತಿ ಕೋಚ್ನಲ್ಲಿ ಮೀಸಲಾದ ಇಬ್ಬರು ಖಾಸಗಿ ಗಾರ್ಡ್ಗಳು ಮತ್ತು ಸಸ್ಯಾಹಾರಿ ಊಟ ಈ ರೈಲಿನ ಕೆಲವು ವೈಶಿಷ್ಟ್ಯಗಳಾಗಿವೆ.
ಈ ರೈಲು ಲಖನೌ ಮೂಲಕ ವಾರಣಾಸಿ ಮತ್ತು ಇಂದೋರ್ ನಡುವೆ 1,131 ಕಿ.ಮೀ ಮತ್ತು ಪ್ರಯಾಗ್ರಾಜ್ (ಅಲಹಾಬಾದ್) ಮೂಲಕ ವಾರಣಾಸಿ ಮತ್ತು ಇಂದೋರ್ ನಡುವೆ ಸುಮಾರು 19 ಗಂಟೆಗಳಲ್ಲಿ 1,102 ಕಿ.ಮೀ. ಚಲಿಸಲಿದೆ.
Take a look at the newly inaugurated Kashi Mahakal Express, with its clean & hygienic pantry for providing high quality vegetarian food to passengers.
— Piyush Goyal (@PiyushGoyal) February 16, 2020
Also, facilities such as bedrolls, houskeeping and travel insurance is going to make the journey convenient & pleasant for all. pic.twitter.com/KbTkxSQ8rK
ಐಆರ್ಸಿಟಿಸಿಯ ‘ಮಹಾ ಕಾಲ್ ಎಕ್ಸ್ಪ್ರೆಸ್’ ರೈಲಿಗೆ ವಿಡಿಯೊ ಲಿಂಕ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು. ಈ ರೈಲು ಮೂರು ಯಾತ್ರಾ ಸ್ಥಳಗಳಾದ ಇಂದೋರ್ ಬಳಿಯ ಓಂಕಾರೇಶ್ವರ, ಉಜ್ಜಯಿನಿಯ ಮಹಾಕಾಳೇಶ್ವರ ಮತ್ತು ವಾರಣಾಸಿಯ ಕಾಶಿ ವಿಶ್ವನಾಥ್ ಎಂಬ ಮೂರು ಜ್ಯೋತಿರ್ಲಿಂಗಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.