<p><strong>ನವದೆಹಲಿ</strong> : ‘ಜಿ20 ಶೃಂಗಸಭೆ ಈಗ ಮುಗಿದಿದ್ದು, ಮೋದಿ ನೇತೃತ್ವದ ಸರ್ಕಾರವು ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರ ಗಲಭೆಯಂತಹ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.</p>.<p>2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ನಿರ್ಗಮನಕ್ಕೆ ಜನರು ದಾರಿ ಮಾಡಿಕೊಡಲು ಆರಂಭಿಸಿದ್ದಾರೆ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಳ ಕುರಿತು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯವನ್ನು ಮರೆ ಮಾಚಲು ಪ್ರಯತ್ನಿಸುತ್ತಿದ್ದಾರೆ, ಆದರೆ ಸಾರ್ವಜನಿಕರು ಸತ್ಯವನ್ನು ಮಾತ್ರ ನೋಡಲು ಮತ್ತು ಕೇಳಲು ಬಯಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p>‘ಇದೀಗ ಜಿ20 ಶೃಂಗಸಭೆಯೂ ಮುಗಿದಿದ್ದು, ಮೋದಿ ಸರ್ಕಾರವು ದೇಶೀಯ ಸಮಸ್ಯೆಗಳತ್ತ ಚಿತ್ತ ಹರಿಸಬೇಕು. ಆಗಸ್ಟ್ನಲ್ಲಿ ಸಾಮಾನ್ಯ ‘ಥಾಲಿ’ಯ ಬೆಲೆ ಶೇ 24ರಷ್ಟು ಹೆಚ್ಚಾಗಿದ್ದರೆ, ನಿರುದ್ಯೋಗ ಸಮಸ್ಯೆ ಶೇ 8ರಷ್ಟು ಏರಿಕೆಯಾಗಿತ್ತು’ ಎಂದಿರುವ ಅವರು, ‘ದೇಶದ ಯುವ ಜನರ ಭವಿಷ್ಯ ಮಂಕಾಗಿದೆ’ ಎಂದಿದ್ದಾರೆ.</p>.<p>‘ಮೋದಿ ಸರ್ಕಾರದ ದುರಾಡಳಿತದಲ್ಲಿ ಭ್ರಷ್ಟಾಚಾರದ ಮಹಾಪೂರವೇ ಹರಿಯುತ್ತಿದೆ. ಸಿಎಜಿಯ ಹಲವು ವರದಿಗಳು ಬಿಜೆಪಿಯ ಮುಖವನ್ನು ಬಹಿರಂಗಪಡಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಜಲ ಜೀವನ್ ಯೋಜನೆಯಲ್ಲಿ ₹ 13,000 ಕೋಟಿ ಹಗರಣ ನಡೆದಿದೆ. ಇದರಲ್ಲಿನ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ ದಲಿತ ಐಎಎಸ್ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ‘ಜಿ20 ಶೃಂಗಸಭೆ ಈಗ ಮುಗಿದಿದ್ದು, ಮೋದಿ ನೇತೃತ್ವದ ಸರ್ಕಾರವು ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರ ಗಲಭೆಯಂತಹ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.</p>.<p>2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ನಿರ್ಗಮನಕ್ಕೆ ಜನರು ದಾರಿ ಮಾಡಿಕೊಡಲು ಆರಂಭಿಸಿದ್ದಾರೆ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಳ ಕುರಿತು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯವನ್ನು ಮರೆ ಮಾಚಲು ಪ್ರಯತ್ನಿಸುತ್ತಿದ್ದಾರೆ, ಆದರೆ ಸಾರ್ವಜನಿಕರು ಸತ್ಯವನ್ನು ಮಾತ್ರ ನೋಡಲು ಮತ್ತು ಕೇಳಲು ಬಯಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p>‘ಇದೀಗ ಜಿ20 ಶೃಂಗಸಭೆಯೂ ಮುಗಿದಿದ್ದು, ಮೋದಿ ಸರ್ಕಾರವು ದೇಶೀಯ ಸಮಸ್ಯೆಗಳತ್ತ ಚಿತ್ತ ಹರಿಸಬೇಕು. ಆಗಸ್ಟ್ನಲ್ಲಿ ಸಾಮಾನ್ಯ ‘ಥಾಲಿ’ಯ ಬೆಲೆ ಶೇ 24ರಷ್ಟು ಹೆಚ್ಚಾಗಿದ್ದರೆ, ನಿರುದ್ಯೋಗ ಸಮಸ್ಯೆ ಶೇ 8ರಷ್ಟು ಏರಿಕೆಯಾಗಿತ್ತು’ ಎಂದಿರುವ ಅವರು, ‘ದೇಶದ ಯುವ ಜನರ ಭವಿಷ್ಯ ಮಂಕಾಗಿದೆ’ ಎಂದಿದ್ದಾರೆ.</p>.<p>‘ಮೋದಿ ಸರ್ಕಾರದ ದುರಾಡಳಿತದಲ್ಲಿ ಭ್ರಷ್ಟಾಚಾರದ ಮಹಾಪೂರವೇ ಹರಿಯುತ್ತಿದೆ. ಸಿಎಜಿಯ ಹಲವು ವರದಿಗಳು ಬಿಜೆಪಿಯ ಮುಖವನ್ನು ಬಹಿರಂಗಪಡಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಜಲ ಜೀವನ್ ಯೋಜನೆಯಲ್ಲಿ ₹ 13,000 ಕೋಟಿ ಹಗರಣ ನಡೆದಿದೆ. ಇದರಲ್ಲಿನ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ ದಲಿತ ಐಎಎಸ್ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>