<p><strong>ತಿರುವನಂತಪುರ</strong>: ನಾಲ್ಕು ದಶಕಗಳಿಂದ ಎಡ ಪಕ್ಷಗಳ ಭದ್ರಕೋಟೆಯಾಗಿದ್ದ ತಿರುವನಂತಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ, ರಾಜ್ಯದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆ ಹೊಂದಿರುವ ಆರ್. ಶ್ರೀಲೇಖಾ ಅವರ ಹೆಸರು ಮೇಯರ್ ಸ್ಥಾನಕ್ಕೆ ಮುಂಚೂಣಿಯಲ್ಲಿದೆ.</p><p>ಪಾಲಿಕೆ ಚುನಾವಣೆಗೆ ಇದೇ ವಾರ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಇಂದು (ಶನಿವಾರ) ಮತ ಎಣಿಕೆಯಾಗಿದೆ.</p><p>ಶಾಸ್ತಮಂಗಲಂ ವಾರ್ಡ್ನಿಂದ ಗೆದ್ದಿರುವ ಶ್ರೀಲೇಖಾ ಅವರನ್ನು, ಮೇಯರ್ ಸ್ಥಾನಕ್ಕೆ ಎನ್ಡಿಎ ಬಣದ ಅಭ್ಯರ್ಥಿ ಎಂದು ಬಿಂಬಿಸಲಾಗಿತ್ತು. ಬಿಜೆಪಿ ಗೆಲುವಿಗೆ ಅದರಿಂದ ನೆರವಾಗಿದೆ ಎನ್ನಲಾಗುತ್ತಿದೆ.</p><p>ಫಲಿತಾಂಶದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಶ್ರೀಲೇಖಾ, ಮತದಾರರಿಗೆ ಧನ್ಯವಾದ ಹೇಳಿದ್ದಾರೆ.</p><p>'ಶಾಸ್ತಮಂಗಲಂ ವಾರ್ಡ್ನಲ್ಲಿ ಈ ಹಿಂದೆ ಸ್ಪರ್ಧಿಸಿದ್ದ ಯಾವೊಬ್ಬ ಅಭ್ಯರ್ಥಿಯೂ ಇಷ್ಟು ಅಂತರದಿಂದ ಗೆದ್ದಿರಲಿಲ್ಲ ಎಂಬುದು ಈಗಷ್ಟೇ ತಿಳಿಯಿತು. ಇಂತಹ ತೀರ್ಪು ನೀಡಿದ್ದಕ್ಕಾಗಿ ಜನರಿಗೆ ಧನ್ಯವಾದ ಹೇಳುತ್ತೇನೆ' ಎಂದಿದ್ದಾರೆ.</p><p>ಮೇಯರ್ ಆಗುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ, ಅದನ್ನು ಪಕ್ಷ ನಿರ್ಧರಿಸುತ್ತದೆ ಎಂದಿದ್ದಾರೆ. ಅವರೇನಾದರೂ ಮೇಯರ್ ಆಗಿ ಆಯ್ಕೆಯಾದರೆ, ಬಿಜೆಪಿ ವತಿಯಿಂದ ತಿರುವನಂತಪುರ ಪಾಲಿಕೆಗೆ ಮೇಯರ್ ಆದ ಮೊದಲಿಗರೆಂಬ ಶ್ರೇಯವೂ ಅವರದ್ದಾಗುತ್ತದೆ.</p><p>ಪಾಲಿಕೆಯ 101 ವಾರ್ಡ್ಗಳ ಪೈಕಿ ಬಿಜೆಪಿ 50ರಲ್ಲಿ ಗೆದ್ದಿದೆ. ಎಲ್ಡಿಎಫ್ 29 ಕಡೆ ಮತ್ತು ಯುಡಿಎಫ್ 19 ಸ್ಥಾನಗಳಲ್ಲಿ ಜಯ ಗಳಿಸಿವೆ. ಎರಡು ಕಡೆ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಮತ್ತೊಂದು ಕ್ಷೇತ್ರದ ಫಲಿತಾಂಶ ಇನ್ನಷ್ಟೇ ಬರಬೇಕಿದೆ ಎಂದು ವರದಿಯಾಗಿದೆ.</p>.ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ.<p><strong>ಶ್ರೀಲೇಖಾ ಸಾಧನೆ<br></strong>ತಿರುವನಂತಪುರದಲ್ಲಿ 1960ರ ಡಿಸೆಂಬರ್ 5ರಂದು ಜನಿಸಿದ ಶ್ರೀಲೇಖಾ, 1987ರ ಬ್ಯಾಚ್ನ ಐಎಎಸ್ ಅಧಿಕಾರಿ.</p><p>ಮೂರು ದಶಕಗಳ ಅವರ ವೃತ್ತಿ ಬದುಕಿನಲ್ಲಿ, ಸಿಬಿಐ, ಕೇರಳ ಅಪರಾಧ ವಿಭಾಗ, ವಿಚಕ್ಷಣ ದಳ, ಅಗ್ನಿಶಾಮಕ ದಳ, ಮೋಟಾರ್ ವಾಹನ ಇಲಾಖೆ, ಬಂಧೀಖಾನೆ ಇಲಾಖೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಘಟಕಗಳಲ್ಲಿ ಕೆಲಸ ಮಾಡಿದ್ದಾರೆ.</p><p>2017ರಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿಯಾಗಿ ನೇಮಕಗೊಳ್ಳುವ ಮೂಲಕ, ಈ ಹುದ್ದೆಗೇರಿದ ರಾಜ್ಯದ ಮೊದಲ ಮಹಿಳೆ ಎನಿಸಿದ್ದರು.</p><p>2020ರ ಡಿಸೆಂಬರ್ನಲ್ಲಿ ನಿವೃತ್ತರಾದನಂತರವೂ ಅವರು ಸುದ್ದಿಯಲ್ಲಿದ್ದಾರೆ. 2017ರ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸಿಲುಕಿಸಲಾಗಿದೆ ಎಂದು ಅವರು ಹೇಳಿಕೆ ನೀಡಿದ್ದರು.</p><p>ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡಿರುವ ರಾಹುಲ್ ಮಮ್ಕೂತಥಿಲ್ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗಿದೆ ಎಂದು ಆರೋಪಿಸಿದ್ದರು.</p><p>2024ರ ಅಕ್ಟೋಬರ್ನಲ್ಲಿ ಬಿಜೆಪಿ ಸೇರಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ತಮಗೆ ಸ್ಫೂರ್ತಿ ಎಂದಿದ್ದರು.</p><p>ಪೊಲೀಸ್ ಅಧಿಕಾರಿಯಾಗಿ ವೃತ್ತಿ ಆರಂಭಿಸಿದ ಬಳಿಕ ತಮ್ಮಲ್ಲಿ ಯಾವುದೇ ರಾಜಕೀಯ ಆಲೋಚನೆಗಳು ಇರಲಿಲ್ಲ. ಎಂದೂ ರಾಜಕೀಯ ಪಕ್ಷಪಾತ ಮಾಡಿಲ್ಲ ಎಂದು ಹೇಳಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ನಾಲ್ಕು ದಶಕಗಳಿಂದ ಎಡ ಪಕ್ಷಗಳ ಭದ್ರಕೋಟೆಯಾಗಿದ್ದ ತಿರುವನಂತಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ, ರಾಜ್ಯದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆ ಹೊಂದಿರುವ ಆರ್. ಶ್ರೀಲೇಖಾ ಅವರ ಹೆಸರು ಮೇಯರ್ ಸ್ಥಾನಕ್ಕೆ ಮುಂಚೂಣಿಯಲ್ಲಿದೆ.</p><p>ಪಾಲಿಕೆ ಚುನಾವಣೆಗೆ ಇದೇ ವಾರ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಇಂದು (ಶನಿವಾರ) ಮತ ಎಣಿಕೆಯಾಗಿದೆ.</p><p>ಶಾಸ್ತಮಂಗಲಂ ವಾರ್ಡ್ನಿಂದ ಗೆದ್ದಿರುವ ಶ್ರೀಲೇಖಾ ಅವರನ್ನು, ಮೇಯರ್ ಸ್ಥಾನಕ್ಕೆ ಎನ್ಡಿಎ ಬಣದ ಅಭ್ಯರ್ಥಿ ಎಂದು ಬಿಂಬಿಸಲಾಗಿತ್ತು. ಬಿಜೆಪಿ ಗೆಲುವಿಗೆ ಅದರಿಂದ ನೆರವಾಗಿದೆ ಎನ್ನಲಾಗುತ್ತಿದೆ.</p><p>ಫಲಿತಾಂಶದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಶ್ರೀಲೇಖಾ, ಮತದಾರರಿಗೆ ಧನ್ಯವಾದ ಹೇಳಿದ್ದಾರೆ.</p><p>'ಶಾಸ್ತಮಂಗಲಂ ವಾರ್ಡ್ನಲ್ಲಿ ಈ ಹಿಂದೆ ಸ್ಪರ್ಧಿಸಿದ್ದ ಯಾವೊಬ್ಬ ಅಭ್ಯರ್ಥಿಯೂ ಇಷ್ಟು ಅಂತರದಿಂದ ಗೆದ್ದಿರಲಿಲ್ಲ ಎಂಬುದು ಈಗಷ್ಟೇ ತಿಳಿಯಿತು. ಇಂತಹ ತೀರ್ಪು ನೀಡಿದ್ದಕ್ಕಾಗಿ ಜನರಿಗೆ ಧನ್ಯವಾದ ಹೇಳುತ್ತೇನೆ' ಎಂದಿದ್ದಾರೆ.</p><p>ಮೇಯರ್ ಆಗುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ, ಅದನ್ನು ಪಕ್ಷ ನಿರ್ಧರಿಸುತ್ತದೆ ಎಂದಿದ್ದಾರೆ. ಅವರೇನಾದರೂ ಮೇಯರ್ ಆಗಿ ಆಯ್ಕೆಯಾದರೆ, ಬಿಜೆಪಿ ವತಿಯಿಂದ ತಿರುವನಂತಪುರ ಪಾಲಿಕೆಗೆ ಮೇಯರ್ ಆದ ಮೊದಲಿಗರೆಂಬ ಶ್ರೇಯವೂ ಅವರದ್ದಾಗುತ್ತದೆ.</p><p>ಪಾಲಿಕೆಯ 101 ವಾರ್ಡ್ಗಳ ಪೈಕಿ ಬಿಜೆಪಿ 50ರಲ್ಲಿ ಗೆದ್ದಿದೆ. ಎಲ್ಡಿಎಫ್ 29 ಕಡೆ ಮತ್ತು ಯುಡಿಎಫ್ 19 ಸ್ಥಾನಗಳಲ್ಲಿ ಜಯ ಗಳಿಸಿವೆ. ಎರಡು ಕಡೆ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಮತ್ತೊಂದು ಕ್ಷೇತ್ರದ ಫಲಿತಾಂಶ ಇನ್ನಷ್ಟೇ ಬರಬೇಕಿದೆ ಎಂದು ವರದಿಯಾಗಿದೆ.</p>.ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ.<p><strong>ಶ್ರೀಲೇಖಾ ಸಾಧನೆ<br></strong>ತಿರುವನಂತಪುರದಲ್ಲಿ 1960ರ ಡಿಸೆಂಬರ್ 5ರಂದು ಜನಿಸಿದ ಶ್ರೀಲೇಖಾ, 1987ರ ಬ್ಯಾಚ್ನ ಐಎಎಸ್ ಅಧಿಕಾರಿ.</p><p>ಮೂರು ದಶಕಗಳ ಅವರ ವೃತ್ತಿ ಬದುಕಿನಲ್ಲಿ, ಸಿಬಿಐ, ಕೇರಳ ಅಪರಾಧ ವಿಭಾಗ, ವಿಚಕ್ಷಣ ದಳ, ಅಗ್ನಿಶಾಮಕ ದಳ, ಮೋಟಾರ್ ವಾಹನ ಇಲಾಖೆ, ಬಂಧೀಖಾನೆ ಇಲಾಖೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಘಟಕಗಳಲ್ಲಿ ಕೆಲಸ ಮಾಡಿದ್ದಾರೆ.</p><p>2017ರಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿಯಾಗಿ ನೇಮಕಗೊಳ್ಳುವ ಮೂಲಕ, ಈ ಹುದ್ದೆಗೇರಿದ ರಾಜ್ಯದ ಮೊದಲ ಮಹಿಳೆ ಎನಿಸಿದ್ದರು.</p><p>2020ರ ಡಿಸೆಂಬರ್ನಲ್ಲಿ ನಿವೃತ್ತರಾದನಂತರವೂ ಅವರು ಸುದ್ದಿಯಲ್ಲಿದ್ದಾರೆ. 2017ರ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸಿಲುಕಿಸಲಾಗಿದೆ ಎಂದು ಅವರು ಹೇಳಿಕೆ ನೀಡಿದ್ದರು.</p><p>ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡಿರುವ ರಾಹುಲ್ ಮಮ್ಕೂತಥಿಲ್ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗಿದೆ ಎಂದು ಆರೋಪಿಸಿದ್ದರು.</p><p>2024ರ ಅಕ್ಟೋಬರ್ನಲ್ಲಿ ಬಿಜೆಪಿ ಸೇರಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ತಮಗೆ ಸ್ಫೂರ್ತಿ ಎಂದಿದ್ದರು.</p><p>ಪೊಲೀಸ್ ಅಧಿಕಾರಿಯಾಗಿ ವೃತ್ತಿ ಆರಂಭಿಸಿದ ಬಳಿಕ ತಮ್ಮಲ್ಲಿ ಯಾವುದೇ ರಾಜಕೀಯ ಆಲೋಚನೆಗಳು ಇರಲಿಲ್ಲ. ಎಂದೂ ರಾಜಕೀಯ ಪಕ್ಷಪಾತ ಮಾಡಿಲ್ಲ ಎಂದು ಹೇಳಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>