<p><strong>ಮುಂಬೈ</strong>: ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಬದ್ಲಾಪುರದಲ್ಲಿ ಪ್ರತಿಭಟಿಸಿದವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಶಿವಸೇನಾ ಮುಖ್ಯಸ್ಥ (ಯುಬಿಟಿ ಬಣ) ಉದ್ಧವ್ ಠಾಕ್ರೆ ಶುಕ್ರವಾರ ಆಗ್ರಹಿಸಿದ್ದಾರೆ.</p>.<p>ರಾಜ್ಯ ಸರ್ಕಾರ ಪ್ರಕರಣಗಳನ್ನು ಹಿಂಪಡೆಯದಿದ್ದರೆ, ಪ್ರತಿಪಕ್ಷಗಳು ಬೀದಿಗಳಿದು ಹೋರಾಟ ನಡೆಸಲಿವೆ ಎಂದೂ ಎಚ್ಚರಿಸಿದ್ದಾರೆ.</p>.<p>‘ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ ಆಘಾಡಿಯಿಂದ (ಎಂವಿಎ) ಆ. 24ರ ಶನಿವಾರ ಮಹಾರಾಷ್ಟ್ರ ಬಂದ್ಗೆ ಕರೆ ನೀಡಲಾಗಿದೆ. ಇದು ರಾಜಕೀಯವಲ್ಲ. ರಾಜ್ಯದ ಜನರ ಪರವಾಗಿ ವಿಕೃತಿಯ ವಿರುದ್ಧ. ಎಲ್ಲರೂ ಜಾತಿ, ಧರ್ಮಾತೀತರಾಗಿ ಭಾಗಿಯಾಗಬೇಕು. ತುರ್ತು ಸೇವೆಗಳನ್ನು ಹೊರತುಪಡಿಸಿ, ಮಧ್ಯಾಹ್ನ 2 ಗಂಟೆಯವರೆಗೂ ಕಟ್ಟುನಿಟ್ಟಾಗಿ ಬಂದ್ ಆಚರಿಸಬೇಕು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಕೋರಿದರು.</p>.<p>ಪ್ರತಿಭಟನಕಾರರ ವಿರುದ್ಧ ಏಕನಾಥ ಶಿಂದೆ ಸರ್ಕಾರ ಕೈಗೊಂಡ ಕ್ರಮವನ್ನು ಖಂಡಿಸಿದ ಠಾಕ್ರೆ, ‘ಬದ್ಲಾಪುರದಲ್ಲಿ ಇನ್ನೂ ಬಂಧನಗಳಾಗುತ್ತಿವೆ. ಪ್ರತಿಭಟನಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ’ ಎಂದು ಗುಡುಗಿದರು.</p>.<p>ನಾಲ್ಕು ವರ್ಷದ ಮಕ್ಕಳಿಬ್ಬರ ಮೇಲೆ ಶಾಲೆಯ ಸಹಾಯಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಅಸಂಖ್ಯಾತ ಜನರು ಠಾಣೆ ಜಿಲ್ಲೆಯ ಬದ್ಲಾಪುರದಲ್ಲಿ ಮಂಗಳವಾರ ರೈಲ್ವೆ ಹಳಿಗಳ ಮೇಲೆ ನಿಂತು ಪ್ರತಿಭಟಿಸಿದ್ದರು. ಈ ಸಂದರ್ಭ ನಡೆದ ಕಲ್ಲು ತೂರಾಟದಲ್ಲಿ ಕನಿಷ್ಠ 25 ಪೊಲೀಸರು ಗಾಯಗೊಂಡಿದ್ದರು. </p>.<p>ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 72 ಜನರನ್ನು ಬಂಧಿಸಿದ್ದಾರೆ. ಆರೋಪಿಯನ್ನು ಆ. 17ರಂದು ಬಂಧಿಸಲಾಗಿದ್ದು, 26ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.</p>.<p>Highlights - null</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಬದ್ಲಾಪುರದಲ್ಲಿ ಪ್ರತಿಭಟಿಸಿದವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಶಿವಸೇನಾ ಮುಖ್ಯಸ್ಥ (ಯುಬಿಟಿ ಬಣ) ಉದ್ಧವ್ ಠಾಕ್ರೆ ಶುಕ್ರವಾರ ಆಗ್ರಹಿಸಿದ್ದಾರೆ.</p>.<p>ರಾಜ್ಯ ಸರ್ಕಾರ ಪ್ರಕರಣಗಳನ್ನು ಹಿಂಪಡೆಯದಿದ್ದರೆ, ಪ್ರತಿಪಕ್ಷಗಳು ಬೀದಿಗಳಿದು ಹೋರಾಟ ನಡೆಸಲಿವೆ ಎಂದೂ ಎಚ್ಚರಿಸಿದ್ದಾರೆ.</p>.<p>‘ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ ಆಘಾಡಿಯಿಂದ (ಎಂವಿಎ) ಆ. 24ರ ಶನಿವಾರ ಮಹಾರಾಷ್ಟ್ರ ಬಂದ್ಗೆ ಕರೆ ನೀಡಲಾಗಿದೆ. ಇದು ರಾಜಕೀಯವಲ್ಲ. ರಾಜ್ಯದ ಜನರ ಪರವಾಗಿ ವಿಕೃತಿಯ ವಿರುದ್ಧ. ಎಲ್ಲರೂ ಜಾತಿ, ಧರ್ಮಾತೀತರಾಗಿ ಭಾಗಿಯಾಗಬೇಕು. ತುರ್ತು ಸೇವೆಗಳನ್ನು ಹೊರತುಪಡಿಸಿ, ಮಧ್ಯಾಹ್ನ 2 ಗಂಟೆಯವರೆಗೂ ಕಟ್ಟುನಿಟ್ಟಾಗಿ ಬಂದ್ ಆಚರಿಸಬೇಕು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಕೋರಿದರು.</p>.<p>ಪ್ರತಿಭಟನಕಾರರ ವಿರುದ್ಧ ಏಕನಾಥ ಶಿಂದೆ ಸರ್ಕಾರ ಕೈಗೊಂಡ ಕ್ರಮವನ್ನು ಖಂಡಿಸಿದ ಠಾಕ್ರೆ, ‘ಬದ್ಲಾಪುರದಲ್ಲಿ ಇನ್ನೂ ಬಂಧನಗಳಾಗುತ್ತಿವೆ. ಪ್ರತಿಭಟನಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ’ ಎಂದು ಗುಡುಗಿದರು.</p>.<p>ನಾಲ್ಕು ವರ್ಷದ ಮಕ್ಕಳಿಬ್ಬರ ಮೇಲೆ ಶಾಲೆಯ ಸಹಾಯಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಅಸಂಖ್ಯಾತ ಜನರು ಠಾಣೆ ಜಿಲ್ಲೆಯ ಬದ್ಲಾಪುರದಲ್ಲಿ ಮಂಗಳವಾರ ರೈಲ್ವೆ ಹಳಿಗಳ ಮೇಲೆ ನಿಂತು ಪ್ರತಿಭಟಿಸಿದ್ದರು. ಈ ಸಂದರ್ಭ ನಡೆದ ಕಲ್ಲು ತೂರಾಟದಲ್ಲಿ ಕನಿಷ್ಠ 25 ಪೊಲೀಸರು ಗಾಯಗೊಂಡಿದ್ದರು. </p>.<p>ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 72 ಜನರನ್ನು ಬಂಧಿಸಿದ್ದಾರೆ. ಆರೋಪಿಯನ್ನು ಆ. 17ರಂದು ಬಂಧಿಸಲಾಗಿದ್ದು, 26ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.</p>.<p>Highlights - null</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>