<p><strong>ನವದೆಹಲಿ</strong>\: ಮೆಟ್ರೊ ನಿಲ್ದಾಣದಲ್ಲಿ ಅನಿತಾ ಎಂಬ 45 ವರ್ಷದ ಮಹಿಳೆ ಜಿಗಿದು ಮೃತಪಟ್ಟಿರುವ ಘಟನೆ ಪಶ್ಚಿಮ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಮಹಿಳೆಯು ಮಾನಸಿಕ ಅಸ್ವಸ್ಥರಾಗಿದ್ದರು ಎಂದು ಆಕೆಯ ಪತಿ ಪೊಲೀಸ್ ತನಿಖೆಯ ವೇಳೆ ತಿಳಿಸಿದ್ದಾರೆ. </p>.<p>ಮೃತ ಮಹಿಳೆಯು ಉತ್ತಮ್ ನಗರ ಪಶ್ಚಿಮ ಮೆಟ್ರೊ ನಿಲ್ದಾಣದಲ್ಲಿ ಮೆಟ್ಟಿಲುಗಳಿಂದ ಮೇಲಕ್ಕೆ ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>‘ಮೆಟ್ರೊ ಸಿಬ್ಬಂದಿ ಹಾಗೂ ಪ್ರಯಾಣಿಕರು ಇರದ ಸ್ಥಳವನ್ನು ಖಚಿತಪಡಿಸಿಕೊಂಡು, ತನ್ನ ಮೊಬೈಲ್ ದೂರದಲ್ಲಿರಿಸಿ ಮೆಟ್ರೊ ನಿಲ್ದಾಣದ ಮೇಲ್ಭಾಗದಿಂದ ಅನಿತಾ ಹಾರಿದ್ದಾರೆ‘ ಎಂದರು.</p>.<p>ಅನಿತಾ ಅವರನ್ನು ದೀನದಯಾಳ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ಆಕೆ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. </p>.<p>ಪತಿ ಸತೀಶ್, ಮಗಳು ಹಾಗೂ ಮಗನ ಜೊತೆ ಅನಿತಾ ವಾಸವಾಗಿದ್ದರು. ಇವರು ಕೆಲ ವರ್ಷಗಳಿಂದ ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪತಿ ಹೇಳಿಕೊಂಡಿದ್ದಾರೆ. ಈ ಪ್ರಕರಣ ಕುರಿತ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>\: ಮೆಟ್ರೊ ನಿಲ್ದಾಣದಲ್ಲಿ ಅನಿತಾ ಎಂಬ 45 ವರ್ಷದ ಮಹಿಳೆ ಜಿಗಿದು ಮೃತಪಟ್ಟಿರುವ ಘಟನೆ ಪಶ್ಚಿಮ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಮಹಿಳೆಯು ಮಾನಸಿಕ ಅಸ್ವಸ್ಥರಾಗಿದ್ದರು ಎಂದು ಆಕೆಯ ಪತಿ ಪೊಲೀಸ್ ತನಿಖೆಯ ವೇಳೆ ತಿಳಿಸಿದ್ದಾರೆ. </p>.<p>ಮೃತ ಮಹಿಳೆಯು ಉತ್ತಮ್ ನಗರ ಪಶ್ಚಿಮ ಮೆಟ್ರೊ ನಿಲ್ದಾಣದಲ್ಲಿ ಮೆಟ್ಟಿಲುಗಳಿಂದ ಮೇಲಕ್ಕೆ ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>‘ಮೆಟ್ರೊ ಸಿಬ್ಬಂದಿ ಹಾಗೂ ಪ್ರಯಾಣಿಕರು ಇರದ ಸ್ಥಳವನ್ನು ಖಚಿತಪಡಿಸಿಕೊಂಡು, ತನ್ನ ಮೊಬೈಲ್ ದೂರದಲ್ಲಿರಿಸಿ ಮೆಟ್ರೊ ನಿಲ್ದಾಣದ ಮೇಲ್ಭಾಗದಿಂದ ಅನಿತಾ ಹಾರಿದ್ದಾರೆ‘ ಎಂದರು.</p>.<p>ಅನಿತಾ ಅವರನ್ನು ದೀನದಯಾಳ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ಆಕೆ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. </p>.<p>ಪತಿ ಸತೀಶ್, ಮಗಳು ಹಾಗೂ ಮಗನ ಜೊತೆ ಅನಿತಾ ವಾಸವಾಗಿದ್ದರು. ಇವರು ಕೆಲ ವರ್ಷಗಳಿಂದ ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪತಿ ಹೇಳಿಕೊಂಡಿದ್ದಾರೆ. ಈ ಪ್ರಕರಣ ಕುರಿತ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>