<p><strong>ವಯನಾಡ್:</strong> ಕೇರಳದ ವಯನಾಡ್ ಜಿಲ್ಲೆಯ ಮಾನಂದವಾಡಿಯ ಪ್ರಿಯದರ್ಶಿನಿ ಕಾಫಿ ಎಸ್ಟೇಟ್ನಲ್ಲಿ ಆದಿವಾಸಿ ಮಹಿಳೆಯನ್ನು ಹುಲಿಯೊಂದು ಕೊಂದು ಹಾಕಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ.</p><p>ಪರಿಶಿಷ್ಟ ಜಾತಿಗೆ ಸೇರಿದ ರಾಧಾ (47) ಹುಲಿ ದಾಳಿಗೆ ಬಲಿಯಾದವರು. ಶುಕ್ರವಾರ ಬೆಳಿಗ್ಗೆ ಕಾಫಿ ಕೊಯ್ಯಲು ತೆರಳಿದ್ದಾಗ ಘಟನೆ ನಡೆದಿದೆ.</p>.ಸೈಫ್ ‘ಸಿಂಹ’ದಂತೆ ಹೋಗಿ ‘ಹುಲಿ’ಯಂತೆ ಹೊರ ಬಂದಿದ್ದಾರೆ: ರಾಣೆಗೆ ಶೈನಾ ತಿರುಗೇಟು?. <p>ಸರ್ಕಾರದ ಪರಿಣಾಮಕಾರಿ ಕ್ರಮದಿಂದಾಗಿ ರಾಜ್ಯದಲ್ಲಿ ಮಾನವ–ವನ್ಯಜೀವಿ ಸಂಘರ್ಷ ಇಳಿಕೆಯಾಗಿದೆ ಎಂದು ಕೇರಳ ಅರಣ್ಯ ಸಚಿವ ಎ.ಕೆ ಶಶೀಂಧ್ರನ್ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ ಮರುದಿನವೇ ಘಟನೆ ಸಂಭವಿಸಿದೆ.</p><p>ಘಟನೆ ನಡೆದ ಕೂಡಲೇ ಸ್ಥಳೀಯರು ಪ್ರತಿಭಟಿಸಿದ್ದು, ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವುನ್ನು ತಡೆದಿದ್ದಾರೆ. ಬಳಿಕ ಹುಲಿಯನ್ನು ಸೆರೆಹಿಡಿಯಲಾಗುವುದು ಅಥವಾ ಕೊಲ್ಲಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.</p>.ಗೋಣಿಕೊಪ್ಪಲು: ಹುಲಿ ಕಾಡಿಗಟ್ಟುವ ಕಾರ್ಯಾಚರಣೆ ಬಿರುಸು, ಕಾರ್ಯಾಚರಣೆಗೆ 8 ಕ್ಯಾಮರಾ.<p>ಪ್ರದೇಶಕ್ಕೆ ಭೇಟಿ ನೀಡಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಒ.ಆರ್ ಕೇಲು ಅವರಿಗೂ ಪ್ರತಿಭಟನೆಯ ಬಿಸಿ ಮುಟ್ಟಿತು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಪೇಕ್ಷೆಯಂತೆ ಹುಲಿಯನ್ನು ಸೆರೆಹಿಡಿಯಲು ಅಥವಾ ಕೊಲ್ಲಲು ಆದೇಶಿಸಲಾಗಿದೆ ಎಂದರು.</p><p>ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ನೌಕರಿ ಕೊಡಿಸುವ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಇಡಲಾಗುವುದು. ಪರಿಹಾರವಾಗಿ ₹ 11 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ. </p><p>ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಮಹಿಳೆ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.</p>.ತ್ಯಾವರೆಕೊಪ್ಪ ಹುಲಿ–ಸಿಂಹಧಾಮದ ಹೆಣ್ಣು ಹುಲಿ ಅಂಜನಿ ಸಾವು.<p></p><h2>ಹುಲಿ ಸೆರೆಗೆ ಆದೇಶ</h2><p>ಮಹಿಳೆಯನ್ನು ಕೊಂದು ಹಾಕಿದ ಹುಲಿಯನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಸೂಚಿಸಿದ ಪ್ರಮಾಣಿತ ಕಾರ್ಯಾಚರಣೆ ವಿಧಾನದ ಪ್ರಕಾರ ಸೆರೆಹಿಡಿಯಲು ಸರ್ವ ಪ್ರಯತ್ನಗಳನ್ನೂ ಮಾಡಬೇಕು. ಆಗದೇ ಇದ್ದಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಮುಖ್ಯ ವನ್ಯಜೀವಿ ವಾರ್ಡನ್ ಪ್ರಮೋದ್ ಜಿ. ಕೃಷ್ಣನ್ ಆದೇಶಿಸಿದ್ದಾರೆ.</p><p>ಹುಲಿಯಿಂದ ಮಾನವ ಜೀವನಕ್ಕೆ ತೊಂದರೆಯುಂಟಾಗುತ್ತದೆ ಎನ್ನುವುದಕ್ಕೆ ನಿದರ್ಶನಗಳು ಇದ್ದರೆ ಮಾತ್ರ ಕೊಲ್ಲಬೇಕು’ ಎಂದು ಆದೇಶದಲ್ಲಿ ಹೇಳಲಾಗಿದೆ.</p> . ಮಧ್ಯಪ್ರದೇಶ: ಹುಲಿ ದಾಳಿಗೆ ಮಹಿಳೆ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್:</strong> ಕೇರಳದ ವಯನಾಡ್ ಜಿಲ್ಲೆಯ ಮಾನಂದವಾಡಿಯ ಪ್ರಿಯದರ್ಶಿನಿ ಕಾಫಿ ಎಸ್ಟೇಟ್ನಲ್ಲಿ ಆದಿವಾಸಿ ಮಹಿಳೆಯನ್ನು ಹುಲಿಯೊಂದು ಕೊಂದು ಹಾಕಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ.</p><p>ಪರಿಶಿಷ್ಟ ಜಾತಿಗೆ ಸೇರಿದ ರಾಧಾ (47) ಹುಲಿ ದಾಳಿಗೆ ಬಲಿಯಾದವರು. ಶುಕ್ರವಾರ ಬೆಳಿಗ್ಗೆ ಕಾಫಿ ಕೊಯ್ಯಲು ತೆರಳಿದ್ದಾಗ ಘಟನೆ ನಡೆದಿದೆ.</p>.ಸೈಫ್ ‘ಸಿಂಹ’ದಂತೆ ಹೋಗಿ ‘ಹುಲಿ’ಯಂತೆ ಹೊರ ಬಂದಿದ್ದಾರೆ: ರಾಣೆಗೆ ಶೈನಾ ತಿರುಗೇಟು?. <p>ಸರ್ಕಾರದ ಪರಿಣಾಮಕಾರಿ ಕ್ರಮದಿಂದಾಗಿ ರಾಜ್ಯದಲ್ಲಿ ಮಾನವ–ವನ್ಯಜೀವಿ ಸಂಘರ್ಷ ಇಳಿಕೆಯಾಗಿದೆ ಎಂದು ಕೇರಳ ಅರಣ್ಯ ಸಚಿವ ಎ.ಕೆ ಶಶೀಂಧ್ರನ್ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ ಮರುದಿನವೇ ಘಟನೆ ಸಂಭವಿಸಿದೆ.</p><p>ಘಟನೆ ನಡೆದ ಕೂಡಲೇ ಸ್ಥಳೀಯರು ಪ್ರತಿಭಟಿಸಿದ್ದು, ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವುನ್ನು ತಡೆದಿದ್ದಾರೆ. ಬಳಿಕ ಹುಲಿಯನ್ನು ಸೆರೆಹಿಡಿಯಲಾಗುವುದು ಅಥವಾ ಕೊಲ್ಲಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.</p>.ಗೋಣಿಕೊಪ್ಪಲು: ಹುಲಿ ಕಾಡಿಗಟ್ಟುವ ಕಾರ್ಯಾಚರಣೆ ಬಿರುಸು, ಕಾರ್ಯಾಚರಣೆಗೆ 8 ಕ್ಯಾಮರಾ.<p>ಪ್ರದೇಶಕ್ಕೆ ಭೇಟಿ ನೀಡಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಒ.ಆರ್ ಕೇಲು ಅವರಿಗೂ ಪ್ರತಿಭಟನೆಯ ಬಿಸಿ ಮುಟ್ಟಿತು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಪೇಕ್ಷೆಯಂತೆ ಹುಲಿಯನ್ನು ಸೆರೆಹಿಡಿಯಲು ಅಥವಾ ಕೊಲ್ಲಲು ಆದೇಶಿಸಲಾಗಿದೆ ಎಂದರು.</p><p>ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ನೌಕರಿ ಕೊಡಿಸುವ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಇಡಲಾಗುವುದು. ಪರಿಹಾರವಾಗಿ ₹ 11 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ. </p><p>ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಮಹಿಳೆ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.</p>.ತ್ಯಾವರೆಕೊಪ್ಪ ಹುಲಿ–ಸಿಂಹಧಾಮದ ಹೆಣ್ಣು ಹುಲಿ ಅಂಜನಿ ಸಾವು.<p></p><h2>ಹುಲಿ ಸೆರೆಗೆ ಆದೇಶ</h2><p>ಮಹಿಳೆಯನ್ನು ಕೊಂದು ಹಾಕಿದ ಹುಲಿಯನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಸೂಚಿಸಿದ ಪ್ರಮಾಣಿತ ಕಾರ್ಯಾಚರಣೆ ವಿಧಾನದ ಪ್ರಕಾರ ಸೆರೆಹಿಡಿಯಲು ಸರ್ವ ಪ್ರಯತ್ನಗಳನ್ನೂ ಮಾಡಬೇಕು. ಆಗದೇ ಇದ್ದಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಮುಖ್ಯ ವನ್ಯಜೀವಿ ವಾರ್ಡನ್ ಪ್ರಮೋದ್ ಜಿ. ಕೃಷ್ಣನ್ ಆದೇಶಿಸಿದ್ದಾರೆ.</p><p>ಹುಲಿಯಿಂದ ಮಾನವ ಜೀವನಕ್ಕೆ ತೊಂದರೆಯುಂಟಾಗುತ್ತದೆ ಎನ್ನುವುದಕ್ಕೆ ನಿದರ್ಶನಗಳು ಇದ್ದರೆ ಮಾತ್ರ ಕೊಲ್ಲಬೇಕು’ ಎಂದು ಆದೇಶದಲ್ಲಿ ಹೇಳಲಾಗಿದೆ.</p> . ಮಧ್ಯಪ್ರದೇಶ: ಹುಲಿ ದಾಳಿಗೆ ಮಹಿಳೆ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>