<p><strong>ಮುಂಬೈ</strong>: ಮಹಿಳೆಯೊಬ್ಬಳು ಪ್ರಿಯಕರನ ಸಹಾಯದಿಂದ ತನ್ನ ಗಂಡನನ್ನು ಕೊಂದು ಮನೆಯೊಳಗೆ ಗುಂಡಿ ತೋಡಿ ಹೂತು ಹಾಕಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪರದಲ್ಲಿ ನಡೆದಿದೆ.</p><p>ವಿಜಯ್ ಚವಾಣ್(40) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಚಮನ್ ಚವಾಣ್ ಮತ್ತು ಪ್ರಿಯಕರ ಮೋನು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p><p>ಕಳೆದ 15 ದಿನಗಳಿಂದ ವಿಜಯ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ ಅವರ ಸಹೋದರ, ಸೋಮವಾರ ಬೆಳಿಗ್ಗೆ ನೇರವಾಗಿ ಮನೆಗೆ ಭೇಟಿ ನೀಡಿದ್ದಾನೆ. ಈ ವೇಳೆ ಅಣ್ಣ ಮನೆಯಲ್ಲಿ ಇರದದ್ದನ್ನು ಕಂಡು ಅತ್ತಿಗೆ ಚಮನ್ ಬಳಿ ವಿಚಾರಿಸಿದ್ದಾರೆ. ದೂರದ ಊರಿಗೆ ಕೆಲಸಕ್ಕೆ ಹೋಗಿದ್ದಾರೆ ಎಂದು ಆಕೆ ಉತ್ತರಿಸಿದ್ದಾಳೆ.</p><p>ಅತ್ತಿಗೆ ಉತ್ತರದಿಂದ ಅನುಮಾನಗೊಂಡ ಸಹೋದರ, ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾನೆ. ಮನೆಯಲ್ಲಿ ಒಂದು ಮೂಲೆಯಲ್ಲಿ ಹೊಸದಾಗಿ ಟೈಲ್ಸ್ ಹಾಕಿರುವುದು ಆತನ ಅನುಮಾನಕ್ಕೆ ಪುಷ್ಟಿ ನೀಡಿತ್ತು,</p><p>ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ ಸಹೋದರ, ಪೊಲೀಸರೊಂದಿಗೆ ಮನೆಗೆ ಬಂದಿದ್ದಾನೆ. ಈ ವೇಳೆಗಾಗಲೇ ಆರೋಪಿ ಚಮನ್ ತನ್ನ ಏಳು ವರ್ಷದ ಮಗನನ್ನು ಕರೆದುಕೊಂಡು ಮನೆ ತೊರೆದಿದ್ದಳು. ಆಕೆ ಮನೆ ಬಿಟ್ಟು ಪರಾರಿಯಾಗುತ್ತಿರುವುದು ದೃಶ್ಯ ಸಿಸಿಟಿವಿ ಸೆರೆಯಾಗಿದೆ.</p><p>ಮನೆಯ ಬೀಗ ಒಡೆದು ಟೈಲ್ಸ್ ಇದ್ದ ಜಾಗವನ್ನು ಅಗೆದ ಪೊಲೀಸರಿಗೆ, ಸುಮಾರು ಆರು ಅಡಿ ಆಳದಲ್ಲಿ ಕಪ್ಪು ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಸಿಕ್ಕಿದೆ.</p><p>ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಗಳಿಗಾಗಿ ಹುಡಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಿಳೆಯೊಬ್ಬಳು ಪ್ರಿಯಕರನ ಸಹಾಯದಿಂದ ತನ್ನ ಗಂಡನನ್ನು ಕೊಂದು ಮನೆಯೊಳಗೆ ಗುಂಡಿ ತೋಡಿ ಹೂತು ಹಾಕಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪರದಲ್ಲಿ ನಡೆದಿದೆ.</p><p>ವಿಜಯ್ ಚವಾಣ್(40) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಚಮನ್ ಚವಾಣ್ ಮತ್ತು ಪ್ರಿಯಕರ ಮೋನು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p><p>ಕಳೆದ 15 ದಿನಗಳಿಂದ ವಿಜಯ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ ಅವರ ಸಹೋದರ, ಸೋಮವಾರ ಬೆಳಿಗ್ಗೆ ನೇರವಾಗಿ ಮನೆಗೆ ಭೇಟಿ ನೀಡಿದ್ದಾನೆ. ಈ ವೇಳೆ ಅಣ್ಣ ಮನೆಯಲ್ಲಿ ಇರದದ್ದನ್ನು ಕಂಡು ಅತ್ತಿಗೆ ಚಮನ್ ಬಳಿ ವಿಚಾರಿಸಿದ್ದಾರೆ. ದೂರದ ಊರಿಗೆ ಕೆಲಸಕ್ಕೆ ಹೋಗಿದ್ದಾರೆ ಎಂದು ಆಕೆ ಉತ್ತರಿಸಿದ್ದಾಳೆ.</p><p>ಅತ್ತಿಗೆ ಉತ್ತರದಿಂದ ಅನುಮಾನಗೊಂಡ ಸಹೋದರ, ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾನೆ. ಮನೆಯಲ್ಲಿ ಒಂದು ಮೂಲೆಯಲ್ಲಿ ಹೊಸದಾಗಿ ಟೈಲ್ಸ್ ಹಾಕಿರುವುದು ಆತನ ಅನುಮಾನಕ್ಕೆ ಪುಷ್ಟಿ ನೀಡಿತ್ತು,</p><p>ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ ಸಹೋದರ, ಪೊಲೀಸರೊಂದಿಗೆ ಮನೆಗೆ ಬಂದಿದ್ದಾನೆ. ಈ ವೇಳೆಗಾಗಲೇ ಆರೋಪಿ ಚಮನ್ ತನ್ನ ಏಳು ವರ್ಷದ ಮಗನನ್ನು ಕರೆದುಕೊಂಡು ಮನೆ ತೊರೆದಿದ್ದಳು. ಆಕೆ ಮನೆ ಬಿಟ್ಟು ಪರಾರಿಯಾಗುತ್ತಿರುವುದು ದೃಶ್ಯ ಸಿಸಿಟಿವಿ ಸೆರೆಯಾಗಿದೆ.</p><p>ಮನೆಯ ಬೀಗ ಒಡೆದು ಟೈಲ್ಸ್ ಇದ್ದ ಜಾಗವನ್ನು ಅಗೆದ ಪೊಲೀಸರಿಗೆ, ಸುಮಾರು ಆರು ಅಡಿ ಆಳದಲ್ಲಿ ಕಪ್ಪು ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಸಿಕ್ಕಿದೆ.</p><p>ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಗಳಿಗಾಗಿ ಹುಡಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>