<p><strong>ಮಾಲಕಾನ್ಗಿರಿ:</strong> ಒಡಿಶಾದಲ್ಲಿ ಕಚ್ಚಾಬಾಂಬ್ ಸ್ಫೋಟ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಿಳಾ ನಕ್ಸಲ್ ಬುಧವಾರ ಪೊಲೀಸರಿಗೆ ಶರಣಾಗಿದ್ದಾರೆ. ಇವರ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಇವರನ್ನು ಉಂಗಿ ಮಾದ್ವಿ ಅಲಿಯಾಸ್ ರೋಸ್ನಿ ಎಂದು ಗುರುತಿಸಲಾಗಿದೆ. ಛತ್ತೀಸಗಢದ ಸುಕ್ಮಾ ಜಿಲ್ಲೆಯ ಇವರು 2016ರಲ್ಲಿ ನಿಷೇಧಿತ ಸಿಪಿಐ (ಎಂ) ಸೇರ್ಪಡೆಯಾಗಿದ್ದರು. ಸದ್ಯ, ದಂಡಕಾರಣ್ಯ ವಿಶೇಷ ವಲಯ ಸಮಿತಿಯ (ಡಿಕೆಎಸ್ಐಡ್ಸಿ) ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು’ ಎಂದು ಹೇಳಿದ್ದಾರೆ.</p>.<p>‘ಇವರು ಕಳೆದ ಎಂಟು ವರ್ಷಗಳಿಂದ ಒಡಿಶಾದಲ್ಲಿ ಕನಿಷ್ಠ 48 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನೆರೆಯ ರಾಜ್ಯಗಳಲ್ಲೂ ಕೃತ್ಯ ಎಸಗಿದ್ದರು’ ಎಂದು ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ವಾಧ್ವಾನಿ ತಿಳಿಸಿದ್ದಾರೆ.</p>.<p>‘ಉಂಗಿ ಅವರು ನಕ್ಸಲ್ ಸಿದ್ಧಾಂತಗಳಿಂದ ಭ್ರಮನಿರಸನಗೊಂಡು ಈ ಹಿಂದೆಯೇ ಶರಣಾಗಲು ಬಯಸಿದ್ದರು. ಆದರೆ ಹಿರಿಯ ನಾಯಕರು ಅವರಿಗೆ ಅವಕಾಶ ನೀಡಿರಲಿಲ್ಲ. ಬಲವಂತವಾಗಿ ಅವರಿಂದ ಹಲವು ವಿಧ್ವಂಸಕ ಕೃತ್ಯಗಳನ್ನು ಮಾಡಿಸುತ್ತಿದ್ದರು’ ಎಂದು ಹೇಳಿದ್ದಾರೆ.</p>.<p>‘ರಾಜ್ಯ ಸರ್ಕಾರವು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಅಲ್ಲದೆ ನಕ್ಸಲ್ವಾದದ ಹಿಂಸಾತ್ಮಕ ಹಾದಿಯ ನಿಷ್ಪ್ರಯೋಜಕತೆಯು ಅರಿವಿಗೆ ಬಂದಿದೆ. ಹೀಗಾಗಿ ಪೊಲೀಸರಿಗೆ ಶರಣಾಗಿದ್ದೇನೆ ಎಂದು ಉಂಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲಕಾನ್ಗಿರಿ:</strong> ಒಡಿಶಾದಲ್ಲಿ ಕಚ್ಚಾಬಾಂಬ್ ಸ್ಫೋಟ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಿಳಾ ನಕ್ಸಲ್ ಬುಧವಾರ ಪೊಲೀಸರಿಗೆ ಶರಣಾಗಿದ್ದಾರೆ. ಇವರ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಇವರನ್ನು ಉಂಗಿ ಮಾದ್ವಿ ಅಲಿಯಾಸ್ ರೋಸ್ನಿ ಎಂದು ಗುರುತಿಸಲಾಗಿದೆ. ಛತ್ತೀಸಗಢದ ಸುಕ್ಮಾ ಜಿಲ್ಲೆಯ ಇವರು 2016ರಲ್ಲಿ ನಿಷೇಧಿತ ಸಿಪಿಐ (ಎಂ) ಸೇರ್ಪಡೆಯಾಗಿದ್ದರು. ಸದ್ಯ, ದಂಡಕಾರಣ್ಯ ವಿಶೇಷ ವಲಯ ಸಮಿತಿಯ (ಡಿಕೆಎಸ್ಐಡ್ಸಿ) ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು’ ಎಂದು ಹೇಳಿದ್ದಾರೆ.</p>.<p>‘ಇವರು ಕಳೆದ ಎಂಟು ವರ್ಷಗಳಿಂದ ಒಡಿಶಾದಲ್ಲಿ ಕನಿಷ್ಠ 48 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನೆರೆಯ ರಾಜ್ಯಗಳಲ್ಲೂ ಕೃತ್ಯ ಎಸಗಿದ್ದರು’ ಎಂದು ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ವಾಧ್ವಾನಿ ತಿಳಿಸಿದ್ದಾರೆ.</p>.<p>‘ಉಂಗಿ ಅವರು ನಕ್ಸಲ್ ಸಿದ್ಧಾಂತಗಳಿಂದ ಭ್ರಮನಿರಸನಗೊಂಡು ಈ ಹಿಂದೆಯೇ ಶರಣಾಗಲು ಬಯಸಿದ್ದರು. ಆದರೆ ಹಿರಿಯ ನಾಯಕರು ಅವರಿಗೆ ಅವಕಾಶ ನೀಡಿರಲಿಲ್ಲ. ಬಲವಂತವಾಗಿ ಅವರಿಂದ ಹಲವು ವಿಧ್ವಂಸಕ ಕೃತ್ಯಗಳನ್ನು ಮಾಡಿಸುತ್ತಿದ್ದರು’ ಎಂದು ಹೇಳಿದ್ದಾರೆ.</p>.<p>‘ರಾಜ್ಯ ಸರ್ಕಾರವು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಅಲ್ಲದೆ ನಕ್ಸಲ್ವಾದದ ಹಿಂಸಾತ್ಮಕ ಹಾದಿಯ ನಿಷ್ಪ್ರಯೋಜಕತೆಯು ಅರಿವಿಗೆ ಬಂದಿದೆ. ಹೀಗಾಗಿ ಪೊಲೀಸರಿಗೆ ಶರಣಾಗಿದ್ದೇನೆ ಎಂದು ಉಂಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>