<p><strong>ಜಾಜ್ಪುರ(ಒಡಿಶಾ):</strong> ಜಮೀನು ವಿವಾದದ ಹಿನ್ನೆಲೆಯಲ್ಲಿ ಮೊಮ್ಮಗನೇ 70 ವರ್ಷದ ಅಜ್ಜಿಗೆ ವಾಹನದಿಂದ ಗುದ್ದಿಸಿಕೊಲೆ ಮಾಡಿರುವ ಘಟನೆ ಒಡಿಶಾದ ಜಾಜ್ಪುರದಲ್ಲಿ ನಡೆದಿದೆ.</p><p>ಪಾನಿಕೊಯ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಡರಾಪುರ–ಸಿಣಗಡಾ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. 23 ವರ್ಷದ ವ್ಯಕ್ತಿ ತನ್ನ ಅಜ್ಜಿ ಕುಲಿ ಸಾಹೂ ಅವರನ್ನು ಕೊಂದಿದ್ದಾನೆ.</p><p>ಮಹಿಳೆಯನ್ನು ಆತನ ಮಗ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಹಾಗಾಗಿ, ಆಕೆ ತನ್ನ ಮಗಳ ಮನೆಯಲ್ಲಿ ವಾಸವಾಗಿದ್ದರು ಎಂದು ವರದಿ ತಿಳಿಸಿದೆ.</p><p>ತಮ್ಮ ಮಗನ ದೈಹಿಕ ಮತ್ತು ಮಾನಸಿಕ ಹಿಂಸೆಯಿಂದ ನೊಂದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡುವ ಜೊತೆಗೆ ತಮ್ಮ ಪಾಲಿನ ಭೂಮಿಯನ್ನು ಮಗಳಿಗೆ ಉಡುಗೊರೆಯಾಗಿ ನೀಡಿದ್ದರು.ಇದು ಜಮೀನು ವಿವಾದಕ್ಕೆ ಎಡೆ ಮಾಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.</p><p>ಮೊಮ್ಮಗನ ವಾಹನ ಡಿಕ್ಕಿ ಹೊಡೆದ ಕೂಡಲೇ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಮ್ಮಗ ಸ್ಥಳದಿಂದ ಪರಾರಿಯಾಗಿದ್ದಾನೆ. ಅಜ್ಜಿಯ ಜೊತೆಯಲ್ಲಿದ್ದ ಮಗಳು ಹೇಗೋ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಮಗಳ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಜ್ಪುರ(ಒಡಿಶಾ):</strong> ಜಮೀನು ವಿವಾದದ ಹಿನ್ನೆಲೆಯಲ್ಲಿ ಮೊಮ್ಮಗನೇ 70 ವರ್ಷದ ಅಜ್ಜಿಗೆ ವಾಹನದಿಂದ ಗುದ್ದಿಸಿಕೊಲೆ ಮಾಡಿರುವ ಘಟನೆ ಒಡಿಶಾದ ಜಾಜ್ಪುರದಲ್ಲಿ ನಡೆದಿದೆ.</p><p>ಪಾನಿಕೊಯ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಡರಾಪುರ–ಸಿಣಗಡಾ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. 23 ವರ್ಷದ ವ್ಯಕ್ತಿ ತನ್ನ ಅಜ್ಜಿ ಕುಲಿ ಸಾಹೂ ಅವರನ್ನು ಕೊಂದಿದ್ದಾನೆ.</p><p>ಮಹಿಳೆಯನ್ನು ಆತನ ಮಗ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಹಾಗಾಗಿ, ಆಕೆ ತನ್ನ ಮಗಳ ಮನೆಯಲ್ಲಿ ವಾಸವಾಗಿದ್ದರು ಎಂದು ವರದಿ ತಿಳಿಸಿದೆ.</p><p>ತಮ್ಮ ಮಗನ ದೈಹಿಕ ಮತ್ತು ಮಾನಸಿಕ ಹಿಂಸೆಯಿಂದ ನೊಂದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡುವ ಜೊತೆಗೆ ತಮ್ಮ ಪಾಲಿನ ಭೂಮಿಯನ್ನು ಮಗಳಿಗೆ ಉಡುಗೊರೆಯಾಗಿ ನೀಡಿದ್ದರು.ಇದು ಜಮೀನು ವಿವಾದಕ್ಕೆ ಎಡೆ ಮಾಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.</p><p>ಮೊಮ್ಮಗನ ವಾಹನ ಡಿಕ್ಕಿ ಹೊಡೆದ ಕೂಡಲೇ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಮ್ಮಗ ಸ್ಥಳದಿಂದ ಪರಾರಿಯಾಗಿದ್ದಾನೆ. ಅಜ್ಜಿಯ ಜೊತೆಯಲ್ಲಿದ್ದ ಮಗಳು ಹೇಗೋ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಮಗಳ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>