ದಾಮೋದರಪುರದ ವಿಮಲೇಶ್ ಸಹಾ (19) ಎಂಬುವರ ಮೃತದೇಹ ಗ್ರಾಮದ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿತ್ತು. ಪಕ್ಕದಲ್ಲಿಯೇ ವೇಶ್ಯಾವಾಟಿಕೆ ಚಟುವಟಿಕೆ ನಡೆಯುವ ಪ್ರದೇಶವಿದ್ದು, ಅಲ್ಲಿನ ನಿವಾಸಿಗಳ ಮೇಲೆ ಯುವಕನ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಲ್ಲದೆ, ಆ ಪ್ರದೇಶದಲ್ಲಿನ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಹಲವರ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ. ಮನೆಯೊಂದರಲ್ಲಿದ್ದ ಮಹಿಳೆಯನ್ನು ಹೊರಗೆಳೆದ ಗುಂಪು, ಆಕೆಯನ್ನು ಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.