ಜ.15ರಂದು ಕನಕದುರ್ಗ ಮನೆಗೆ ಬರುತ್ತಿದ್ದಂತೆ ಆಕೆಯ ಅತ್ತೆ, ಕೋಲಿನಿಂದ ಮನಬಂದಂತೆ ಬಡಿದಿದ್ದರು. ’ನಮ್ಮ ಮನೆಯ ಗೌರಕ್ಕೆ ಧಕ್ಕೆ ತಂದವಳು,..’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ವರದಿಯಾಗಿತ್ತು.ಹಾಗಾಗಿ ಕನಕದುರ್ಗಾ ಮತ್ತು ಬಿಂದು ‘ತಮಗೆ ಭದ್ರತೆಯ ಅಗತ್ಯವಿದೆ’ ಎಂದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಬ್ಬರಿಗೂ ದಿನದ 24 ಗಂಟೆಯೂ ರಕ್ಷಣೆ ಕೊಡಬೇಕು ಎಂದು ಸುಪ್ರೀಂಕೋರ್ಟ್ ಕೇರಳ ಪೊಲೀಸರಿಗೆ ಸೂಚಿಸಿತ್ತು.