<p><strong>ಹೈದರಾಬಾದ್</strong>: ತನ್ನಿಂದ ದೂರವಾಗಲು ಪ್ರಯತ್ನಿಸುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಮಹಿಳೆಯನ್ನು ಬೀದರ್ನ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಬುಧವಾರ ತಡರಾತ್ರಿ ಮಹಿಳೆ ತಂಗಿದ್ದ ಕೊಠಡಿಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ. ಆಕೆಯನ್ನು ರಕ್ಷಿಸಲು ಮುಂದಾದ ಇತರ ಮೂವರು ಮಹಿಳೆಯರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಅಷ್ಟರಲ್ಲೇ ತೀವ್ರ ಗಾಯಗೊಂಡಿದ್ದ ಈ ಮಹಿಳೆ ಮೃತಪಟ್ಟಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಈ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮತ್ತು ಬ್ಯೂಟಿಷಿಯನ್ ಆಗಿದ್ದ ಮಹಿಳೆ ಪರಸ್ಪರ ಪರಿಚಿತರಾಗಿ, ಪ್ರೇಮಿಸುತ್ತಿದ್ದರು. ಗಂಡನಿಂದ ದೂರವಾಗಿದ್ದ ಈ ಮಹಿಳೆ ನಂತರ ಹೈದರಾಬಾದ್ಗೆ ವಾಸ್ತವ್ಯ ಬದಲಿಸಿದ್ದರು. ಕೆಲ ದಿನಗಳಿಂದ ಆಕೆ ಆರೋಪಿಯಿಂದ ದೂರವಾಗಲು ಪ್ರಯತ್ನಿಸಿ, ಮತ್ತೊಬ್ಬನ ಜತೆ ಸಲುಗೆ ಬೆಳೆಸಿದ್ದಳು ಎಂದು ಶಂಕಿಸಲಾಗಿದೆ. ಇದೇ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಆರೋಪಿ, ಮೊಯಿನಾಬಾದ್ ಬಳಿ ವಿದ್ಯುತ್ ಕಂಬವನ್ನು ಹತ್ತಿ ಹೈ–ಟೆನ್ಷನ್ ತಂತಿ ಸ್ಪರ್ಶಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತನ್ನಿಂದ ದೂರವಾಗಲು ಪ್ರಯತ್ನಿಸುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಮಹಿಳೆಯನ್ನು ಬೀದರ್ನ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಬುಧವಾರ ತಡರಾತ್ರಿ ಮಹಿಳೆ ತಂಗಿದ್ದ ಕೊಠಡಿಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ. ಆಕೆಯನ್ನು ರಕ್ಷಿಸಲು ಮುಂದಾದ ಇತರ ಮೂವರು ಮಹಿಳೆಯರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಅಷ್ಟರಲ್ಲೇ ತೀವ್ರ ಗಾಯಗೊಂಡಿದ್ದ ಈ ಮಹಿಳೆ ಮೃತಪಟ್ಟಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಈ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮತ್ತು ಬ್ಯೂಟಿಷಿಯನ್ ಆಗಿದ್ದ ಮಹಿಳೆ ಪರಸ್ಪರ ಪರಿಚಿತರಾಗಿ, ಪ್ರೇಮಿಸುತ್ತಿದ್ದರು. ಗಂಡನಿಂದ ದೂರವಾಗಿದ್ದ ಈ ಮಹಿಳೆ ನಂತರ ಹೈದರಾಬಾದ್ಗೆ ವಾಸ್ತವ್ಯ ಬದಲಿಸಿದ್ದರು. ಕೆಲ ದಿನಗಳಿಂದ ಆಕೆ ಆರೋಪಿಯಿಂದ ದೂರವಾಗಲು ಪ್ರಯತ್ನಿಸಿ, ಮತ್ತೊಬ್ಬನ ಜತೆ ಸಲುಗೆ ಬೆಳೆಸಿದ್ದಳು ಎಂದು ಶಂಕಿಸಲಾಗಿದೆ. ಇದೇ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಆರೋಪಿ, ಮೊಯಿನಾಬಾದ್ ಬಳಿ ವಿದ್ಯುತ್ ಕಂಬವನ್ನು ಹತ್ತಿ ಹೈ–ಟೆನ್ಷನ್ ತಂತಿ ಸ್ಪರ್ಶಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>