<p class="title"><strong>ಮಲಪ್ಪುರ (ಕೇರಳ)</strong>: ಜನವರಿ 2ರಂದು ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಿಗೆ ಹಿಂದೂಪರ ಸಂಘಟನೆಗಳಿಂದ ಜೀವಬೆದರಿಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p class="title">ದೇವಾಲಯ ಪ್ರವೇಶಿಸಲು10ರಿಂದ 50 ವರ್ಷದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ಅದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ದೇವಾಲಯ ಪ್ರವೇಶಿಸಲು ಹಲವು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಮಹಿಳೆಯರು ವಿಫಲ ಪ್ರಯತ್ನ ನಡೆಸಿದ್ದರು.</p>.<p class="title">ಆದರೆ ಜನವರಿ 2ರಂದು ಕನಕದುರ್ಗ (44) ಮತ್ತು ಬಿಂದು (42) ದೇವಾಲಯವನ್ನು ಯಶಸ್ವಿಯಾಗಿ ಪ್ರವೇಶಿಸಿದ್ದರು. ಆನಂತರ ಅವರಿಗೆ ಜೀವ ಬೆದರಿಕೆಗಳು ಬಂದಿವೆ ಎಂದು ಪೊಲೀಸರು ಹೇಳಿದ್ದಾರೆ.</p>.<p class="Subhead">ಆರ್ಎಸ್ಎಸ್ ಸ್ವಯಂಸೇವಕರ ಬಂಧನ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿದ್ದರ ವಿರುದ್ಧ ಜನವರಿ 3ರಂದು ನಡೆದಿದ್ದ ಬಂದ್ ವೇಳೆ ಪೊಲೀಸ್ ಠಾಣೆಯ ಮೇಲೆ ಬಾಂಬ್ ಎಸೆದಿದ್ದ ಆರ್ಎಸ್ಎಸ್ ಸ್ವಯಂಸೇವಕರನ್ನು ಪೊಲೀಸರು ಬಂಧಿಸಿದ್ದಾರೆ.</p>.<p class="title">ಆರ್ಎಸ್ಎಸ್ನ ತಿರುವನಂತಪುರ ಜಿಲ್ಲಾ ಘಟಕದ ಸ್ವಯಂಸೇವಕ ಪ್ರವೀಣ್ ಮತ್ತು ಸಾಮಾನ್ಯ ಸ್ವಯಂಸೇವಕ ಶ್ರೀಜಿತ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮಲಪ್ಪುರ (ಕೇರಳ)</strong>: ಜನವರಿ 2ರಂದು ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಿಗೆ ಹಿಂದೂಪರ ಸಂಘಟನೆಗಳಿಂದ ಜೀವಬೆದರಿಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p class="title">ದೇವಾಲಯ ಪ್ರವೇಶಿಸಲು10ರಿಂದ 50 ವರ್ಷದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ಅದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ದೇವಾಲಯ ಪ್ರವೇಶಿಸಲು ಹಲವು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಮಹಿಳೆಯರು ವಿಫಲ ಪ್ರಯತ್ನ ನಡೆಸಿದ್ದರು.</p>.<p class="title">ಆದರೆ ಜನವರಿ 2ರಂದು ಕನಕದುರ್ಗ (44) ಮತ್ತು ಬಿಂದು (42) ದೇವಾಲಯವನ್ನು ಯಶಸ್ವಿಯಾಗಿ ಪ್ರವೇಶಿಸಿದ್ದರು. ಆನಂತರ ಅವರಿಗೆ ಜೀವ ಬೆದರಿಕೆಗಳು ಬಂದಿವೆ ಎಂದು ಪೊಲೀಸರು ಹೇಳಿದ್ದಾರೆ.</p>.<p class="Subhead">ಆರ್ಎಸ್ಎಸ್ ಸ್ವಯಂಸೇವಕರ ಬಂಧನ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿದ್ದರ ವಿರುದ್ಧ ಜನವರಿ 3ರಂದು ನಡೆದಿದ್ದ ಬಂದ್ ವೇಳೆ ಪೊಲೀಸ್ ಠಾಣೆಯ ಮೇಲೆ ಬಾಂಬ್ ಎಸೆದಿದ್ದ ಆರ್ಎಸ್ಎಸ್ ಸ್ವಯಂಸೇವಕರನ್ನು ಪೊಲೀಸರು ಬಂಧಿಸಿದ್ದಾರೆ.</p>.<p class="title">ಆರ್ಎಸ್ಎಸ್ನ ತಿರುವನಂತಪುರ ಜಿಲ್ಲಾ ಘಟಕದ ಸ್ವಯಂಸೇವಕ ಪ್ರವೀಣ್ ಮತ್ತು ಸಾಮಾನ್ಯ ಸ್ವಯಂಸೇವಕ ಶ್ರೀಜಿತ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>