ಕಪುರ್ತಲಾ: ವ್ಯಕ್ತಿಯೊಬ್ಬ ದೇವಸ್ಥಾನ ಆವರಣದಲ್ಲಿಯೇ ಭಕ್ತೆಯನ್ನು ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಕಪುರ್ತಲಾದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮೃತರನ್ನು ಸರಿತಾ ದೇವಿ ಎಂದು ಗುರುತಿಸಲಾಗಿದೆ.
ಆರೋಪಿ ಆಗಾಗ ಪಾನಮತ್ತನಾಗಿ ದೇವಸ್ಥಾನಕ್ಕೆ ಬರುತ್ತಿದ್ದ. ಇದನ್ನು ಸರಿತಾ ದೇವಿ ಅವರು ವಿರೋಧಿಸುತ್ತಿದ್ದರು. ಆದರೆ ಸೋಮವಾರ ರಾತ್ರಿ ಮದ್ಯಪಾನ ಮಾಡಿ ಬಂದಿದ್ದ ಆರೋಪಿ ಸರಿತಾ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಚಾಕುವಿನಿಂದ ಅನೇಕ ಬಾರಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸರಿತಾ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು ಎಂದು ಆಕೆಯ ಪತಿ ಹೇಳಿದ್ದಾರೆ.
ಸರಿತಾ ಪತಿ ರಾಕೇಶ್ ಕುಮಾರ್ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡು ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.