<p><strong>ಹೊನ್ನಾಳಿ</strong>: ‘ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ಕಲ್ಪಿಸುವ ಉದ್ದೇಶ ಹೊಂದಿದ್ದ ಮಸೂದೆಯನ್ನು ಸೋಲಿಸುವ ಮೂಲಕ ವಿರೋಧ ಪಕ್ಷಗಳು ನಮ್ಮ ಸಂವಿಧಾನಕ್ಕೆ ಹಾಗೂ ದೇಶದ ನಾರಿಶಕ್ತಿಗೆ ಅವಮಾನ ಮಾಡಿವೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.</p>.<p>‘ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾದ ಕೂಡಲೇ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ಮುಖಂಡರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದು ಬಿಜೆಪಿಗೆ ಮಾಡಿದ ಅವಮಾನ ಅಲ್ಲ. ಇದು ನಾರಿಶಕ್ತಿಗೆ ಮಾಡಿದ ಅಪಮಾನ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೀಸಲಾತಿ ಮಸೂದೆ ಪರ ಎಲ್ಲರೂ ಕೈಜೋಡಿಸಿದ್ದರೆ ಮಹಿಳೆಯರಿಗೆ ಪ್ರಾತಿನಿಧ್ಯ, ಸಮಾನ ಅವಕಾಶ ಸಿಗುತ್ತಿತ್ತು. ಆಗ ಲೋಕಸಭೆಯಲ್ಲಿ ಮಹಿಳೆಯರ ಧ್ವನಿ ಹೆಚ್ಚಾಗುತ್ತಿತ್ತು. ಆದರೀಗ ವಿಪಕ್ಷಗಳ ಧೋರಣೆಯಿಂದ ಮಹಿಳೆಯರ ಧ್ವನಿ ಅಡಗಿದೆ’ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮುಖಂಡರಾದ ಜೆ.ಕೆ. ಸುರೇಶ್, ಸಿ.ಆರ್. ಶಿವಾನಂದ್, ನೆಲಹೊನ್ನೆ ಮಂಜುನಾಥ್, ಎಸ್.ಎಸ್. ಬೀರಪ್ಪ, ಮಾರುತಿನಾಯ್ಕ, ಕರಿಬಸವ ರೆಡ್ಡಿ, ರಾಜುಗೌಡ, ಕೋಟೆಹಾಳ್ ಮಲ್ಲೇಶ್, ಹಿರೇಗೋಣಿಗೆರೆ ನರಸಿಂಹಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-407772752</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ‘ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ಕಲ್ಪಿಸುವ ಉದ್ದೇಶ ಹೊಂದಿದ್ದ ಮಸೂದೆಯನ್ನು ಸೋಲಿಸುವ ಮೂಲಕ ವಿರೋಧ ಪಕ್ಷಗಳು ನಮ್ಮ ಸಂವಿಧಾನಕ್ಕೆ ಹಾಗೂ ದೇಶದ ನಾರಿಶಕ್ತಿಗೆ ಅವಮಾನ ಮಾಡಿವೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.</p>.<p>‘ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾದ ಕೂಡಲೇ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ಮುಖಂಡರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದು ಬಿಜೆಪಿಗೆ ಮಾಡಿದ ಅವಮಾನ ಅಲ್ಲ. ಇದು ನಾರಿಶಕ್ತಿಗೆ ಮಾಡಿದ ಅಪಮಾನ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೀಸಲಾತಿ ಮಸೂದೆ ಪರ ಎಲ್ಲರೂ ಕೈಜೋಡಿಸಿದ್ದರೆ ಮಹಿಳೆಯರಿಗೆ ಪ್ರಾತಿನಿಧ್ಯ, ಸಮಾನ ಅವಕಾಶ ಸಿಗುತ್ತಿತ್ತು. ಆಗ ಲೋಕಸಭೆಯಲ್ಲಿ ಮಹಿಳೆಯರ ಧ್ವನಿ ಹೆಚ್ಚಾಗುತ್ತಿತ್ತು. ಆದರೀಗ ವಿಪಕ್ಷಗಳ ಧೋರಣೆಯಿಂದ ಮಹಿಳೆಯರ ಧ್ವನಿ ಅಡಗಿದೆ’ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮುಖಂಡರಾದ ಜೆ.ಕೆ. ಸುರೇಶ್, ಸಿ.ಆರ್. ಶಿವಾನಂದ್, ನೆಲಹೊನ್ನೆ ಮಂಜುನಾಥ್, ಎಸ್.ಎಸ್. ಬೀರಪ್ಪ, ಮಾರುತಿನಾಯ್ಕ, ಕರಿಬಸವ ರೆಡ್ಡಿ, ರಾಜುಗೌಡ, ಕೋಟೆಹಾಳ್ ಮಲ್ಲೇಶ್, ಹಿರೇಗೋಣಿಗೆರೆ ನರಸಿಂಹಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-407772752</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>