<p><strong>ಬಂಟ್ವಾಳ</strong>: ‘ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ ಎಂದು ಆರೋಪಿಸಿ ಮಹಿಳೆಯರಲ್ಲಿ ಕ್ಷಮೆ ಯಾಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮಹಿಳೆಯರು ಹಾಗೂ ಅಪ್ರಾಪ್ತ ವಯಸ್ಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ಬಗ್ಗೆ ಮೌನ ತಾಳುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತಿರುವುದು ಜನರಿಗೆ ತಿಳಿದಿದೆ’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹಮ್ಮದ್ ಆಲಿ ಪುತ್ತೂರು ಟೀಕಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ನಡೆದಿರುವ ಅಪ್ರಾಪ್ತ ವಯಸ್ಸಿನ ಯುವತಿಯ ಅತ್ಯಾಚಾರ, ಗುಜರಾತಿನಲ್ಲಿ ನಡೆದ ಗರ್ಭಿಣಿ ಮೇಲಿನ ಸಾಮೂಹಿಕ ಅತ್ಯಾಚಾರ, ಮಣಿಪುರದಲ್ಲಿ ನಡೆದಿರುವ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಬಗ್ಗೆ ಮೋದಿ ಮೌನವಾಗಿದ್ದಾರೆ. ‘ಬೇಟಿ ಬಚಾವೊ, ಬೇಟಿ ಪಢಾವೊ’ ಘೋಷಣೆ ಕೂಗುವ ಇವರು ಬಿಜೆಪಿ ಆಡಳಿತ ಹೊಂದಿರುವ ಯಾವ ರಾಜ್ಯಗಳಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂಬ ಬಗ್ಗೆ ಉತ್ತರಿಸಬೇಕು ಎಂದರು.</p>.<p>ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅಪ್ರಾಪ್ತ ವಯಸ್ಸಿನ ಯುವತಿಯ ಅತ್ಯಾಚಾರ ನಡೆಸಿದ್ದು, ಹಾತರಸ್ನಲ್ಲಿ ದಲಿತ ಹೆಣ್ಣಿನ ಮೇಲಿನ ಅತ್ಯಾಚಾರ ಪ್ರಕರಣ, ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲಾಗಿಸಿ ಮೆರವ ಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣ ಗಳ ಬಗ್ಗೆ ಪ್ರಧಾನಿ ಅವರು ಏಕೆ ಮೌನ ತಾಳಿದ್ದಾರೆ ಎಂದು ಅವರು ಪ್ರಶ್ನಿಸಿದರು.</p>.<p>ಹಿಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸಲು ಮುಂದಾದಾಗ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಯಶವಂತ ಸಿನ್ಹ, ರಾಮ್ ಜೇಠ್ಮಲಾನಿ ಮತ್ತಿತರರು ವಿರೋಧ ವ್ಯಕ್ತಪಡಿಸಿದ್ದರು. 2023ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ನಾರಿ ಶಕ್ತಿ ವಂದನ್’ ಮಹಿಳಾ ಮೀಸಲಾತಿ ಕಾಯ್ದೆ ಮಂಡಿಸಿದಾಗ ಕಾಂಗ್ರೆಸ್ ಬೆಂಬಲ ನೀಡಿರುವುದನ್ನು ಅವರು ನೆನಪಿಸಬೇಕು. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿರುವುದಕ್ಕೆ ಮಾತ್ರ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.</p>.<p>ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರಾದ ಲಾದ್ರು ಮಿನೇಜಸ್, ಎ.ಬಿ. ಅಬ್ದುಲ್ಲ ಕೊಳ್ನಾಡು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-29-1392634540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ‘ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ ಎಂದು ಆರೋಪಿಸಿ ಮಹಿಳೆಯರಲ್ಲಿ ಕ್ಷಮೆ ಯಾಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮಹಿಳೆಯರು ಹಾಗೂ ಅಪ್ರಾಪ್ತ ವಯಸ್ಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ಬಗ್ಗೆ ಮೌನ ತಾಳುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತಿರುವುದು ಜನರಿಗೆ ತಿಳಿದಿದೆ’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹಮ್ಮದ್ ಆಲಿ ಪುತ್ತೂರು ಟೀಕಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ನಡೆದಿರುವ ಅಪ್ರಾಪ್ತ ವಯಸ್ಸಿನ ಯುವತಿಯ ಅತ್ಯಾಚಾರ, ಗುಜರಾತಿನಲ್ಲಿ ನಡೆದ ಗರ್ಭಿಣಿ ಮೇಲಿನ ಸಾಮೂಹಿಕ ಅತ್ಯಾಚಾರ, ಮಣಿಪುರದಲ್ಲಿ ನಡೆದಿರುವ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಬಗ್ಗೆ ಮೋದಿ ಮೌನವಾಗಿದ್ದಾರೆ. ‘ಬೇಟಿ ಬಚಾವೊ, ಬೇಟಿ ಪಢಾವೊ’ ಘೋಷಣೆ ಕೂಗುವ ಇವರು ಬಿಜೆಪಿ ಆಡಳಿತ ಹೊಂದಿರುವ ಯಾವ ರಾಜ್ಯಗಳಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂಬ ಬಗ್ಗೆ ಉತ್ತರಿಸಬೇಕು ಎಂದರು.</p>.<p>ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅಪ್ರಾಪ್ತ ವಯಸ್ಸಿನ ಯುವತಿಯ ಅತ್ಯಾಚಾರ ನಡೆಸಿದ್ದು, ಹಾತರಸ್ನಲ್ಲಿ ದಲಿತ ಹೆಣ್ಣಿನ ಮೇಲಿನ ಅತ್ಯಾಚಾರ ಪ್ರಕರಣ, ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲಾಗಿಸಿ ಮೆರವ ಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣ ಗಳ ಬಗ್ಗೆ ಪ್ರಧಾನಿ ಅವರು ಏಕೆ ಮೌನ ತಾಳಿದ್ದಾರೆ ಎಂದು ಅವರು ಪ್ರಶ್ನಿಸಿದರು.</p>.<p>ಹಿಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೊಳಿಸಲು ಮುಂದಾದಾಗ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಯಶವಂತ ಸಿನ್ಹ, ರಾಮ್ ಜೇಠ್ಮಲಾನಿ ಮತ್ತಿತರರು ವಿರೋಧ ವ್ಯಕ್ತಪಡಿಸಿದ್ದರು. 2023ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ನಾರಿ ಶಕ್ತಿ ವಂದನ್’ ಮಹಿಳಾ ಮೀಸಲಾತಿ ಕಾಯ್ದೆ ಮಂಡಿಸಿದಾಗ ಕಾಂಗ್ರೆಸ್ ಬೆಂಬಲ ನೀಡಿರುವುದನ್ನು ಅವರು ನೆನಪಿಸಬೇಕು. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿರುವುದಕ್ಕೆ ಮಾತ್ರ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.</p>.<p>ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರಾದ ಲಾದ್ರು ಮಿನೇಜಸ್, ಎ.ಬಿ. ಅಬ್ದುಲ್ಲ ಕೊಳ್ನಾಡು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-29-1392634540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>