<p><strong>ಮುಂಬೈ</strong>: ತ್ರಿಭಾಷಾ ನೀತಿಯ ಅನುಷ್ಠಾನದ ಕುರಿತಾದ ಆದೇಶಗಳನ್ನು ಮಹಾರಾಷ್ಟ್ರ ಸರ್ಕಾರ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್, ನಾವು ಭವಿಷ್ಯದಲ್ಲಿ ಎಂದಿಗೂ ಅಂತಹ ನೀತಿಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.</p><p>ಮಹಾರಾಷ್ಟ್ರ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ಹಿಂದಿ ಭಾಷೆಯನ್ನು ಪರಿಚಯಿಸುವುದಕ್ಕೆ ಸಂಬಂಧಿಸಿದಂತೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಭಾನುವಾರ ನಡೆದ ಸಚಿವ ಸಂಪುಟ ಸಭೆ, ತ್ರಿಭಾಷಾ ನೀತಿಯ ಅನುಷ್ಠಾನದ ಕುರಿತಾದ ಸರ್ಕಾರಿ ಆದೇಶಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿತ್ತು.</p><p>ಭಾಷಾ ನೀತಿಯ ಕುರಿತು ಮುಂದಿನ ಮಾರ್ಗ ಸೂಚಿಸಲು ಶಿಕ್ಷಣ ತಜ್ಞ ನರೇಂದ್ರ ಜಾಧವ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವುದಾಗಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನಂತರ ಘೋಷಿಸಿದ್ದರು.</p><p>ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ‘ಫಡಣವೀಸ್ ಸಮಿತಿಗಳು ಮತ್ತು ಎಸ್ಐಟಿಗಳನ್ನು ರಚಿಸಲು ಇಷ್ಟಪಡುತ್ತಾರೆ. ಆದರೆ, ಏನನ್ನೂ ಜಾರಿ ಮಾಡುವುದಿಲ್ಲ’ಎಂದರು.</p><p>ಜಾಧವ್ ಅವರನ್ನು ಅರ್ಥಶಾಸ್ತ್ರಜ್ಞರಾಗಿ ಗೌರವಿಸಲಾಗುತ್ತದೆ. ಆದರೆ, ಅವರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಗೆ ಈಗ ಯಾವುದೇ ಪ್ರಸ್ತುತತೆ ಇಲ್ಲ. ಭವಿಷ್ಯದಲ್ಲಿ ತ್ರಿಭಾಷಾ ನೀತಿಯನ್ನು ನಾವು ಸ್ವೀಕರಿಸುವುದಿಲ್ಲ ಎಂದು ರಾವುತ್ ಪ್ರತಿಪಾದಿಸಿದ್ದಾರೆ.</p><p>ಶಿವಸೇನಾ (ಯುಬಿಟಿ) ಮತ್ತು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಜಂಟಿಯಾಗಿ ಜುಲೈ 5 ರಂದು ಮುಂಬೈನಲ್ಲಿ ಆಯೋಜಿಸಲಿರುವ 'ಮರಾಠಿ ವಿಜಯ್ ದಿವಸ್' ಆಚರಣೆಯ ಕುರಿತು ಮಾತನಾಡಿದ ಅವರು, ಎರಡೂ ಕಡೆಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದರು.</p><p>ನಾವು ಪ್ರಮುಖ ನಾಯಕರು ಮತ್ತು ಸಾರ್ವಜನಿಕರನ್ನು ಆಹ್ವಾನಿಸಿದ್ದೇವೆ. ನಾವು ಕೇವಲ ಸಂಘಟಕರು. ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ನಮ್ಮ ನಾಯಕ ಉದ್ಧವ್ ಠಾಕ್ರೆ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.</p> .ಭಾರತದ ಮೇಲೆ ಶೇ 500ರಷ್ಟು ಸುಂಕ ವಿಧಿಸಬಹುದಾದ ಮಸೂದೆಗೆ ಟ್ರಂಪ್ ಒಪ್ಪಿಗೆ?: ವರದಿ.ಕೋವಿಡ್ ಲಸಿಕೆ, ಹೃದಯ ಸಂಬಂಧಿತ ಸಾವುಗಳ ನಡುವೆ ಯಾವುದೇ ಸಂಬಂಧವಿಲ್ಲ: ಕೇಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ತ್ರಿಭಾಷಾ ನೀತಿಯ ಅನುಷ್ಠಾನದ ಕುರಿತಾದ ಆದೇಶಗಳನ್ನು ಮಹಾರಾಷ್ಟ್ರ ಸರ್ಕಾರ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್, ನಾವು ಭವಿಷ್ಯದಲ್ಲಿ ಎಂದಿಗೂ ಅಂತಹ ನೀತಿಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.</p><p>ಮಹಾರಾಷ್ಟ್ರ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ಹಿಂದಿ ಭಾಷೆಯನ್ನು ಪರಿಚಯಿಸುವುದಕ್ಕೆ ಸಂಬಂಧಿಸಿದಂತೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಭಾನುವಾರ ನಡೆದ ಸಚಿವ ಸಂಪುಟ ಸಭೆ, ತ್ರಿಭಾಷಾ ನೀತಿಯ ಅನುಷ್ಠಾನದ ಕುರಿತಾದ ಸರ್ಕಾರಿ ಆದೇಶಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿತ್ತು.</p><p>ಭಾಷಾ ನೀತಿಯ ಕುರಿತು ಮುಂದಿನ ಮಾರ್ಗ ಸೂಚಿಸಲು ಶಿಕ್ಷಣ ತಜ್ಞ ನರೇಂದ್ರ ಜಾಧವ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವುದಾಗಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನಂತರ ಘೋಷಿಸಿದ್ದರು.</p><p>ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ‘ಫಡಣವೀಸ್ ಸಮಿತಿಗಳು ಮತ್ತು ಎಸ್ಐಟಿಗಳನ್ನು ರಚಿಸಲು ಇಷ್ಟಪಡುತ್ತಾರೆ. ಆದರೆ, ಏನನ್ನೂ ಜಾರಿ ಮಾಡುವುದಿಲ್ಲ’ಎಂದರು.</p><p>ಜಾಧವ್ ಅವರನ್ನು ಅರ್ಥಶಾಸ್ತ್ರಜ್ಞರಾಗಿ ಗೌರವಿಸಲಾಗುತ್ತದೆ. ಆದರೆ, ಅವರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಗೆ ಈಗ ಯಾವುದೇ ಪ್ರಸ್ತುತತೆ ಇಲ್ಲ. ಭವಿಷ್ಯದಲ್ಲಿ ತ್ರಿಭಾಷಾ ನೀತಿಯನ್ನು ನಾವು ಸ್ವೀಕರಿಸುವುದಿಲ್ಲ ಎಂದು ರಾವುತ್ ಪ್ರತಿಪಾದಿಸಿದ್ದಾರೆ.</p><p>ಶಿವಸೇನಾ (ಯುಬಿಟಿ) ಮತ್ತು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಜಂಟಿಯಾಗಿ ಜುಲೈ 5 ರಂದು ಮುಂಬೈನಲ್ಲಿ ಆಯೋಜಿಸಲಿರುವ 'ಮರಾಠಿ ವಿಜಯ್ ದಿವಸ್' ಆಚರಣೆಯ ಕುರಿತು ಮಾತನಾಡಿದ ಅವರು, ಎರಡೂ ಕಡೆಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದರು.</p><p>ನಾವು ಪ್ರಮುಖ ನಾಯಕರು ಮತ್ತು ಸಾರ್ವಜನಿಕರನ್ನು ಆಹ್ವಾನಿಸಿದ್ದೇವೆ. ನಾವು ಕೇವಲ ಸಂಘಟಕರು. ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ನಮ್ಮ ನಾಯಕ ಉದ್ಧವ್ ಠಾಕ್ರೆ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.</p> .ಭಾರತದ ಮೇಲೆ ಶೇ 500ರಷ್ಟು ಸುಂಕ ವಿಧಿಸಬಹುದಾದ ಮಸೂದೆಗೆ ಟ್ರಂಪ್ ಒಪ್ಪಿಗೆ?: ವರದಿ.ಕೋವಿಡ್ ಲಸಿಕೆ, ಹೃದಯ ಸಂಬಂಧಿತ ಸಾವುಗಳ ನಡುವೆ ಯಾವುದೇ ಸಂಬಂಧವಿಲ್ಲ: ಕೇಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>