<p><strong>ಕೋಲ್ಕತ್ತ</strong>: ‘ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು.</p><p>‘ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಏಕೆಂದರೆ, ನಾವು ಜನಾದೇಶದಿಂದ ಸೋತಿಲ್ಲ. ಒಳಸಂಚಿನಿಂದಾಗಿ ಸೋತಿದ್ದೇವೆ. ಆದ್ದರಿಂದ ರಾಜೀನಾಮೆ ನೀಡಲು ಲೋಕಭವನಕ್ಕೆ ಹೋಗುವುದಿಲ್ಲ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ನಾನು ಏಕೆ ರಾಜೀನಾಮೆ ನೀಡಬೇಕು? ನಾವು ಸೋತಿಲ್ಲ. ಮತಗಳನ್ನು ಲೂಟಿ ಮಾಡಲಾಗಿದೆ. ರಾಜೀನಾಮೆಯ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ಎಂದು ಪ್ರತಿಪಾದಿಸಿದರು.</p><p>ಆದರೂ ಸಾಂವಿಧಾನಿಕ ಆಯ್ಕೆಗಳು ಮುಕ್ತವಾಗಿವೆ ಎಂದು ಮಮತಾ ಸೂಚಿಸಿದರು. ‘ಅವರು ಸಾಂವಿಧಾನಿಕ ನಿಯಮಗಳ ಅನುಸಾರ ಮುಂದಿನ ಕ್ರಮ ತೆಗೆದುಕೊಳ್ಳಬಹುದು’ ಎಂದರು. ಆದರೆ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. </p><p>‘ಮತ ಎಣಿಕೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ. ಸುಮಾರು 100 ಸ್ಥಾನಗಳನ್ನು ‘ಲೂಟಿ ಮಾಡಲಾಗಿದೆ’ ಎಂಬ ಆರೋಪವನ್ನು ಅವರು ಪುನರುಚ್ಚರಿಸಿದರು.</p><p>‘ಈ ಚುನಾವಣೆಯಲ್ಲಿ ನಾವು ಬಿಜೆಪಿ ವಿರುದ್ಧ ಹೋರಾಡಿಲ್ಲ. ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದ ಚುನಾವಣಾ ಆಯೋಗದ ವಿರುದ್ಧ ಹೋರಾಡಿದ್ದೇವೆ. ನನ್ನ ಇಡೀ ರಾಜಕೀಯ ಜೀವನದಲ್ಲಿ ಇಂತಹ ಚುನಾವಣೆಯನ್ನು ಎಂದಿಗೂ ನೋಡಿಲ್ಲ’ ಎಂದರು. </p><p>ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದರಿಂದ ತಮ್ಮ ಕಾರ್ಯತಂತ್ರದಲ್ಲಿ ಬದಲಾವಣೆಯಾಗಿರುವುದರ ಸೂಚನೆ ನೀಡಿದ ಮಮತಾ, ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಬಲಪಡಿಸುವತ್ತ ಗಮನಹರಿಸುವುದಾಗಿ ತಿಳಿಸಿದರು.</p><p>‘ಇಂಡಿಯಾ ಮೈತ್ರಿಕೂಟದ ನಾಯಕರು ಒಗ್ಗಟ್ಟು ವ್ಯಕ್ತಪಡಿಸಲು ನನಗೆ ಕರೆ ಮಾಡಿದ್ದಾರೆ. ಸೋನಿಯಾ ಮತ್ತು ರಾಹುಲ್ ಗಾಂಧಿ ನನ್ನೊಂದಿಗೆ ಮಾತನಾಡಿದ್ದಾರೆ. ಅರವಿಂದ ಕೇಜ್ರಿವಾಲ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್ ಮತ್ತು ಹೇಮಂತ್ ಸೊರೇನ್ ಅವರಂತಹ ನಾಯಕರಿಂದಲೂ ನನಗೆ ಕರೆಗಳು ಬಂದಿವೆ’ ಎಂದರು.</p><p>‘ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರೆಗೂ, ನಾನು ಅನೇಕ ವಿಷಯಗಳನ್ನು ಸಹಿಸಿಕೊಂಡಿದ್ದೆ. ಈಗ ಸ್ವತಂತ್ರಗೊಂಡ ಹಕ್ಕಿಯಂತಾಗಿದ್ದೇನೆ. ನಾನೊಬ್ಬಳು ಬೀದಿ ಹೋರಾಟಗಾರ್ತಿ. ಬೀದಿಗಳಲ್ಲಿದ್ದುಕೊಂಡೇ ಎಲ್ಲಾ ಅನ್ಯಾಯಗಳ ವಿರುದ್ಧ ಹೋರಾಡುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು.</p><p>‘ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಏಕೆಂದರೆ, ನಾವು ಜನಾದೇಶದಿಂದ ಸೋತಿಲ್ಲ. ಒಳಸಂಚಿನಿಂದಾಗಿ ಸೋತಿದ್ದೇವೆ. ಆದ್ದರಿಂದ ರಾಜೀನಾಮೆ ನೀಡಲು ಲೋಕಭವನಕ್ಕೆ ಹೋಗುವುದಿಲ್ಲ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ನಾನು ಏಕೆ ರಾಜೀನಾಮೆ ನೀಡಬೇಕು? ನಾವು ಸೋತಿಲ್ಲ. ಮತಗಳನ್ನು ಲೂಟಿ ಮಾಡಲಾಗಿದೆ. ರಾಜೀನಾಮೆಯ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ಎಂದು ಪ್ರತಿಪಾದಿಸಿದರು.</p><p>ಆದರೂ ಸಾಂವಿಧಾನಿಕ ಆಯ್ಕೆಗಳು ಮುಕ್ತವಾಗಿವೆ ಎಂದು ಮಮತಾ ಸೂಚಿಸಿದರು. ‘ಅವರು ಸಾಂವಿಧಾನಿಕ ನಿಯಮಗಳ ಅನುಸಾರ ಮುಂದಿನ ಕ್ರಮ ತೆಗೆದುಕೊಳ್ಳಬಹುದು’ ಎಂದರು. ಆದರೆ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. </p><p>‘ಮತ ಎಣಿಕೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ. ಸುಮಾರು 100 ಸ್ಥಾನಗಳನ್ನು ‘ಲೂಟಿ ಮಾಡಲಾಗಿದೆ’ ಎಂಬ ಆರೋಪವನ್ನು ಅವರು ಪುನರುಚ್ಚರಿಸಿದರು.</p><p>‘ಈ ಚುನಾವಣೆಯಲ್ಲಿ ನಾವು ಬಿಜೆಪಿ ವಿರುದ್ಧ ಹೋರಾಡಿಲ್ಲ. ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದ ಚುನಾವಣಾ ಆಯೋಗದ ವಿರುದ್ಧ ಹೋರಾಡಿದ್ದೇವೆ. ನನ್ನ ಇಡೀ ರಾಜಕೀಯ ಜೀವನದಲ್ಲಿ ಇಂತಹ ಚುನಾವಣೆಯನ್ನು ಎಂದಿಗೂ ನೋಡಿಲ್ಲ’ ಎಂದರು. </p><p>ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದರಿಂದ ತಮ್ಮ ಕಾರ್ಯತಂತ್ರದಲ್ಲಿ ಬದಲಾವಣೆಯಾಗಿರುವುದರ ಸೂಚನೆ ನೀಡಿದ ಮಮತಾ, ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಬಲಪಡಿಸುವತ್ತ ಗಮನಹರಿಸುವುದಾಗಿ ತಿಳಿಸಿದರು.</p><p>‘ಇಂಡಿಯಾ ಮೈತ್ರಿಕೂಟದ ನಾಯಕರು ಒಗ್ಗಟ್ಟು ವ್ಯಕ್ತಪಡಿಸಲು ನನಗೆ ಕರೆ ಮಾಡಿದ್ದಾರೆ. ಸೋನಿಯಾ ಮತ್ತು ರಾಹುಲ್ ಗಾಂಧಿ ನನ್ನೊಂದಿಗೆ ಮಾತನಾಡಿದ್ದಾರೆ. ಅರವಿಂದ ಕೇಜ್ರಿವಾಲ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್ ಮತ್ತು ಹೇಮಂತ್ ಸೊರೇನ್ ಅವರಂತಹ ನಾಯಕರಿಂದಲೂ ನನಗೆ ಕರೆಗಳು ಬಂದಿವೆ’ ಎಂದರು.</p><p>‘ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರೆಗೂ, ನಾನು ಅನೇಕ ವಿಷಯಗಳನ್ನು ಸಹಿಸಿಕೊಂಡಿದ್ದೆ. ಈಗ ಸ್ವತಂತ್ರಗೊಂಡ ಹಕ್ಕಿಯಂತಾಗಿದ್ದೇನೆ. ನಾನೊಬ್ಬಳು ಬೀದಿ ಹೋರಾಟಗಾರ್ತಿ. ಬೀದಿಗಳಲ್ಲಿದ್ದುಕೊಂಡೇ ಎಲ್ಲಾ ಅನ್ಯಾಯಗಳ ವಿರುದ್ಧ ಹೋರಾಡುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>