<p><strong>ನವದೆಹಲಿ</strong>: ‘ಉತ್ತರ ಪ್ರದೇಶ ದಲ್ಲಿನ ಎಲ್ಲ 80 ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸಿದರೂ ಇವಿಎಂಗಳನ್ನು ನಂಬೋದಿಲ್ಲ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರದ (ಇವಿಎಂ) ವಿಶ್ವಾಸರ್ಹತೆ ಕುರಿತಂತೆ ಪ್ರಶ್ನೆ ಎತ್ತಿದ್ದಾರೆ.</p><p>‘ನಿನ್ನೆಯೂ ಇವಿಎಂಗಳನ್ನು ನಂಬಿರಲಿಲ್ಲ. ಇಂದು ಸಹ ನಂಬಲ್ಲ. ಎಲ್ಲ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ನಂಬಲ್ಲ. ಇವಿಎಂಗಳ ಸಮಸ್ಯೆ ಮುಗಿದ ಅಧ್ಯಾಯವಲ್ಲ. ಈ ವಿಷಯದಲ್ಲಿ ಸಮಾಜವಾದಿಗಳ ನಿಲುವು ಅಚಲವಾಗಿರುತ್ತದೆ’ ಎಂದು ಹೇಳಿದ್ದಾರೆ.</p><p>ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಯು ದೇಶದಲ್ಲಿ ಕೋಮು ರಾಜಕೀಯಕ್ಕೆ ಅಂತ್ಯ ಹಾಡಿದೆ. ಈ ಚುನಾವಣಾ ಫಲಿತಾಂಶ ಇಂಡಿಯಾ ಮೈತ್ರಿಕೂಟದ ನೈತಿಕ ವಿಜಯವಾಗಿದೆ’ ಎಂದಿದ್ದಾರೆ.</p><p>‘ಚುನಾವಣಾ ಫಲಿತಾಂಶ ಪ್ರಕಟವಾದ ಜೂನ್ 4 ಭಾರತಕ್ಕೆ ಕೋಮು ರಾಜಕೀಯದಿಂದ ಮುಕ್ತಿ ಸಿಕ್ಕ ದಿನವಾಗಿದೆ. ದೇಶದಲ್ಲಿ ಕೋಮು ರಾಜಕೀಯವೂ ಶಾಶ್ವತವಾಗಿ ಅಂತ್ಯ ಕಂಡಿದೆ. ರಾಮಮಂದಿರ ನಿರ್ಮಾಣವಾಗಿರುವ ಅಯೋಧ್ಯೆಯ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವುದು ಮತದಾರರ ಬುದ್ಧಿವಂತಿಕೆಯನ್ನು ತೋರಿಸುತ್ತದೆ. ಬಿಜೆಪಿಯ ಸೋಲು ಶ್ರೀರಾಮನ ಆಶಯವೂ ಆಗಿರಬಹುದು’ ಎಂದು ಹೇಳಿದ್ದಾರೆ.</p><p>‘ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಆಯೋಗವು ಕೆಲವರಿಗೆ ಅನುಕೂಲ ಮಾಡಿಕೊಟ್ಟಂತಿತ್ತು. ಈ ಬಗ್ಗೆ ಹೆಚ್ಚಿನ ವಿವರಣೆಗೆ ನಾನು ಮುಂದಾಗಲ್ಲ. ಆ ಸಂಸ್ಥೆಯ ಬಗ್ಗೆ ಎಲ್ಲೋ ಒಂದು ಪ್ರಶ್ನೆ ಎದ್ದಿದೆ’ ಎಂದು ಚುನಾವಣಾ ಆಯೋಗದ ಕುರಿತಂತೆಯೂ ಅವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.</p><p>ನೀಟ್ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಕಿಡಿಕಾರಿದ ಅವರು, ‘ಶಿಕ್ಷಣ ಮಾಫಿಯಾ ಹುಟ್ಟಿರುವುದೇ ಈ ಸರ್ಕಾರದ ಕಳೆದ ಹತ್ತು ವರ್ಷಗಳ ಸಾಧನೆಯಾಗಿದೆ. ದೇಶದ ಅತಿ ದೊಡ್ಡ ಪರೀಕ್ಷೆಯ ಪ್ರಶ್ನೆಪತ್ರಿಕೆ ಕೂಡ ಸೋರಿಕೆಯಾಗಿದೆ. ಯುವಕರಿಗೆ ಉದ್ಯೋಗ ನೀಡಬಾರದು ಎಂಬ ಕಾರಣಕ್ಕೆ ಸರ್ಕಾರ ಇಂತಹ ಕೆಲಸಗಳನ್ನು ಮುಂದುವರಿಸುತ್ತಿದೆ’ ಎಂದು ಆರೋಪಿಸಿದ್ದಾರೆ.</p><p>‘ಉದ್ಯೋಗ ಕೊಡುವುದಾದರೆ ಮೀಸಲಾತಿಯೂ ಕೊಡಬೇಕು. ಉದ್ಯೋಗ ಮತ್ತು ಮೀಸಲಾತಿ ಕುರಿತಂತೆ ಸರ್ಕಾರ ಆಟವಾಡುತ್ತಿದೆ’ ಎಂದು ಹೇಳಿದ್ದಾರೆ.</p><p>‘ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಅಗ್ನಿಪಥ್ ಯೋಜನೆಯನ್ನು ರದ್ದುಪಡಿಸುತ್ತದೆ ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ತರುತ್ತದೆ’ ಎಂದು ಪುನರುಚ್ಛರಿಸಿದ್ದಾರೆ.</p><p>ಇದೇ ವೇಳೆ ಜಾತಿ ಗಣತಿ ನಡೆಸುವಂತೆಯೂ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಉತ್ತರ ಪ್ರದೇಶ ದಲ್ಲಿನ ಎಲ್ಲ 80 ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸಿದರೂ ಇವಿಎಂಗಳನ್ನು ನಂಬೋದಿಲ್ಲ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರದ (ಇವಿಎಂ) ವಿಶ್ವಾಸರ್ಹತೆ ಕುರಿತಂತೆ ಪ್ರಶ್ನೆ ಎತ್ತಿದ್ದಾರೆ.</p><p>‘ನಿನ್ನೆಯೂ ಇವಿಎಂಗಳನ್ನು ನಂಬಿರಲಿಲ್ಲ. ಇಂದು ಸಹ ನಂಬಲ್ಲ. ಎಲ್ಲ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ನಂಬಲ್ಲ. ಇವಿಎಂಗಳ ಸಮಸ್ಯೆ ಮುಗಿದ ಅಧ್ಯಾಯವಲ್ಲ. ಈ ವಿಷಯದಲ್ಲಿ ಸಮಾಜವಾದಿಗಳ ನಿಲುವು ಅಚಲವಾಗಿರುತ್ತದೆ’ ಎಂದು ಹೇಳಿದ್ದಾರೆ.</p><p>ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಯು ದೇಶದಲ್ಲಿ ಕೋಮು ರಾಜಕೀಯಕ್ಕೆ ಅಂತ್ಯ ಹಾಡಿದೆ. ಈ ಚುನಾವಣಾ ಫಲಿತಾಂಶ ಇಂಡಿಯಾ ಮೈತ್ರಿಕೂಟದ ನೈತಿಕ ವಿಜಯವಾಗಿದೆ’ ಎಂದಿದ್ದಾರೆ.</p><p>‘ಚುನಾವಣಾ ಫಲಿತಾಂಶ ಪ್ರಕಟವಾದ ಜೂನ್ 4 ಭಾರತಕ್ಕೆ ಕೋಮು ರಾಜಕೀಯದಿಂದ ಮುಕ್ತಿ ಸಿಕ್ಕ ದಿನವಾಗಿದೆ. ದೇಶದಲ್ಲಿ ಕೋಮು ರಾಜಕೀಯವೂ ಶಾಶ್ವತವಾಗಿ ಅಂತ್ಯ ಕಂಡಿದೆ. ರಾಮಮಂದಿರ ನಿರ್ಮಾಣವಾಗಿರುವ ಅಯೋಧ್ಯೆಯ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವುದು ಮತದಾರರ ಬುದ್ಧಿವಂತಿಕೆಯನ್ನು ತೋರಿಸುತ್ತದೆ. ಬಿಜೆಪಿಯ ಸೋಲು ಶ್ರೀರಾಮನ ಆಶಯವೂ ಆಗಿರಬಹುದು’ ಎಂದು ಹೇಳಿದ್ದಾರೆ.</p><p>‘ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಆಯೋಗವು ಕೆಲವರಿಗೆ ಅನುಕೂಲ ಮಾಡಿಕೊಟ್ಟಂತಿತ್ತು. ಈ ಬಗ್ಗೆ ಹೆಚ್ಚಿನ ವಿವರಣೆಗೆ ನಾನು ಮುಂದಾಗಲ್ಲ. ಆ ಸಂಸ್ಥೆಯ ಬಗ್ಗೆ ಎಲ್ಲೋ ಒಂದು ಪ್ರಶ್ನೆ ಎದ್ದಿದೆ’ ಎಂದು ಚುನಾವಣಾ ಆಯೋಗದ ಕುರಿತಂತೆಯೂ ಅವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.</p><p>ನೀಟ್ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಕಿಡಿಕಾರಿದ ಅವರು, ‘ಶಿಕ್ಷಣ ಮಾಫಿಯಾ ಹುಟ್ಟಿರುವುದೇ ಈ ಸರ್ಕಾರದ ಕಳೆದ ಹತ್ತು ವರ್ಷಗಳ ಸಾಧನೆಯಾಗಿದೆ. ದೇಶದ ಅತಿ ದೊಡ್ಡ ಪರೀಕ್ಷೆಯ ಪ್ರಶ್ನೆಪತ್ರಿಕೆ ಕೂಡ ಸೋರಿಕೆಯಾಗಿದೆ. ಯುವಕರಿಗೆ ಉದ್ಯೋಗ ನೀಡಬಾರದು ಎಂಬ ಕಾರಣಕ್ಕೆ ಸರ್ಕಾರ ಇಂತಹ ಕೆಲಸಗಳನ್ನು ಮುಂದುವರಿಸುತ್ತಿದೆ’ ಎಂದು ಆರೋಪಿಸಿದ್ದಾರೆ.</p><p>‘ಉದ್ಯೋಗ ಕೊಡುವುದಾದರೆ ಮೀಸಲಾತಿಯೂ ಕೊಡಬೇಕು. ಉದ್ಯೋಗ ಮತ್ತು ಮೀಸಲಾತಿ ಕುರಿತಂತೆ ಸರ್ಕಾರ ಆಟವಾಡುತ್ತಿದೆ’ ಎಂದು ಹೇಳಿದ್ದಾರೆ.</p><p>‘ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಅಗ್ನಿಪಥ್ ಯೋಜನೆಯನ್ನು ರದ್ದುಪಡಿಸುತ್ತದೆ ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ತರುತ್ತದೆ’ ಎಂದು ಪುನರುಚ್ಛರಿಸಿದ್ದಾರೆ.</p><p>ಇದೇ ವೇಳೆ ಜಾತಿ ಗಣತಿ ನಡೆಸುವಂತೆಯೂ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>