<p><strong>ನವದೆಹಲಿ</strong>: ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ‘ಕೇವಲ ಕವಿತೆ ವಾಚನ, ಹಾಸ್ಯ, ಯಾವುದೇ ರೀತಿಯ ಕಲೆ ಅಥವಾ ಮನರಂಜನೆಯು ಸಮುದಾಯಗಳ ನಡುವೆ ದ್ವೇಷ ಬಿತ್ತಲು ಕಾರಣವಾಗುತ್ತದೆ ಎನ್ನಲಾಗದು’ ಎಂದು ಶುಕ್ರವಾರ ಹೇಳಿದೆ.</p>.<p>ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪಗಢಿ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ವಲ್ ಭುಯಾಂ ಅವರ ಪೀಠವು, ‘ಕಾವ್ಯ, ನಾಟಕ, ಚಲನಚಿತ್ರ ಮತ್ತು ಸ್ಟ್ಯಾಂಡ್-ಅಪ್ ಕಾಮಿಡಿ, ವಿಡಂಬನ ಸಾಹಿತ್ಯ ಹಾಗೂ ಕಲೆ ಸೇರಿದಂತೆ ವೇದಿಕೆ ಕಾರ್ಯಕ್ರಮಗಳು ಮಾನವನ ಜೀವನವನ್ನು ಹೆಚ್ಚು ಅರ್ಥಪೂರ್ಣವನ್ನಾಗಿಸಿದೆ’ ಎಂದು ಹೇಳಿತು.</p>.<p>‘ಯೆ ಖೂನ್ ಸೆ ಪ್ಯಾಸೆ ಬಾತ್ ಸುನೋ...’ ಎಂಬ ಕವಿತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಗುಜರಾತ್ನ ಜಾಮ್ನಗರದಲ್ಲಿ ಇಮ್ರಾನ್ ವಿರುದ್ಧ ಜನವರಿ 3ರಂದು ಪ್ರಕರಣ ದಾಖಲಾಗಿತ್ತು.</p>.<p>ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್ನ ಜ.17ರ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, ‘ಈ ಕವಿತೆಗೆ ಯಾವುದೇ ಧರ್ಮ, ಜಾತಿ, ಸಮುದಾಯ ಅಥವಾ ನಿರ್ದಿಷ್ಟ ಗುಂಪಿನ ಜತೆ ಸಂಬಂಧವಿಲ್ಲ’ ಎಂದು ಹೇಳಿತು. </p>.ವಿಡಿಯೊದಲ್ಲಿ ಪ್ರಚೋದನಕಾರಿ ಹಾಡು ಬಳಕೆ: ಕಾಂಗ್ರೆಸ್ ಸಂಸದ ಇಮ್ರಾನ್ ವಿರುದ್ಧ FIR .<p>‘ಕವಿತೆಯ ಸಾಲುಗಳು ದ್ವೇಷದ ಭಾವನೆ ಉಂಟುಮಾಡದು ಅಥವಾ ಉತ್ತೇಜಿಸದು. ಇದು ಆಡಳಿತಗಾರ ಮಾಡಿದ ಅನ್ಯಾಯವನ್ನು ಪ್ರಶ್ನಿಸುವಂತೆ ಕೋರುತ್ತದೆ. ಮೇಲ್ಮನವಿದಾರರು ಬಳಸಿರುವ ಪದಗಳು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲು ಆಗದು’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ‘ಕೇವಲ ಕವಿತೆ ವಾಚನ, ಹಾಸ್ಯ, ಯಾವುದೇ ರೀತಿಯ ಕಲೆ ಅಥವಾ ಮನರಂಜನೆಯು ಸಮುದಾಯಗಳ ನಡುವೆ ದ್ವೇಷ ಬಿತ್ತಲು ಕಾರಣವಾಗುತ್ತದೆ ಎನ್ನಲಾಗದು’ ಎಂದು ಶುಕ್ರವಾರ ಹೇಳಿದೆ.</p>.<p>ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪಗಢಿ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ವಲ್ ಭುಯಾಂ ಅವರ ಪೀಠವು, ‘ಕಾವ್ಯ, ನಾಟಕ, ಚಲನಚಿತ್ರ ಮತ್ತು ಸ್ಟ್ಯಾಂಡ್-ಅಪ್ ಕಾಮಿಡಿ, ವಿಡಂಬನ ಸಾಹಿತ್ಯ ಹಾಗೂ ಕಲೆ ಸೇರಿದಂತೆ ವೇದಿಕೆ ಕಾರ್ಯಕ್ರಮಗಳು ಮಾನವನ ಜೀವನವನ್ನು ಹೆಚ್ಚು ಅರ್ಥಪೂರ್ಣವನ್ನಾಗಿಸಿದೆ’ ಎಂದು ಹೇಳಿತು.</p>.<p>‘ಯೆ ಖೂನ್ ಸೆ ಪ್ಯಾಸೆ ಬಾತ್ ಸುನೋ...’ ಎಂಬ ಕವಿತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಗುಜರಾತ್ನ ಜಾಮ್ನಗರದಲ್ಲಿ ಇಮ್ರಾನ್ ವಿರುದ್ಧ ಜನವರಿ 3ರಂದು ಪ್ರಕರಣ ದಾಖಲಾಗಿತ್ತು.</p>.<p>ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್ನ ಜ.17ರ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, ‘ಈ ಕವಿತೆಗೆ ಯಾವುದೇ ಧರ್ಮ, ಜಾತಿ, ಸಮುದಾಯ ಅಥವಾ ನಿರ್ದಿಷ್ಟ ಗುಂಪಿನ ಜತೆ ಸಂಬಂಧವಿಲ್ಲ’ ಎಂದು ಹೇಳಿತು. </p>.ವಿಡಿಯೊದಲ್ಲಿ ಪ್ರಚೋದನಕಾರಿ ಹಾಡು ಬಳಕೆ: ಕಾಂಗ್ರೆಸ್ ಸಂಸದ ಇಮ್ರಾನ್ ವಿರುದ್ಧ FIR .<p>‘ಕವಿತೆಯ ಸಾಲುಗಳು ದ್ವೇಷದ ಭಾವನೆ ಉಂಟುಮಾಡದು ಅಥವಾ ಉತ್ತೇಜಿಸದು. ಇದು ಆಡಳಿತಗಾರ ಮಾಡಿದ ಅನ್ಯಾಯವನ್ನು ಪ್ರಶ್ನಿಸುವಂತೆ ಕೋರುತ್ತದೆ. ಮೇಲ್ಮನವಿದಾರರು ಬಳಸಿರುವ ಪದಗಳು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲು ಆಗದು’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>