ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಟ್ವೀಟ್ ಮಾಡಿರುವ ಅವರು, ‘ರಾಷ್ಟ್ರ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ನೀಡಿದ ಕೊಡುಗೆಯನ್ನು ನಾವು ಸದಾ ಸ್ಮರಿಸುತ್ತೇವೆ. ಭಾರತವನ್ನು ತಾರತಮ್ಯ ಮುಕ್ತ ರಾಷ್ಟ್ರವನ್ನಾಗಿಸಲು ಶ್ರಮಿಸುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕು’ ಎಂದಿದ್ದಾರೆ.