<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದ ಉದ್ಯಾನದಲ್ಲಿ ಗುರುವಾರ ‘ಸಿಂಧೂರ’ ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದರು. </p>.<p>1971ರ ಯುದ್ಧದಲ್ಲಿ ಅಸಾಧಾರಣ ಶೌರ್ಯ ತೋರಿದ್ದ ಮಹಿಳೆಯರ ಗುಂಪೊಂದು, ಇತ್ತೀಚೆಗೆ ಮೋದಿ ಅವರಿಗೆ ಚಂಡೀಗಢದಲ್ಲಿ ‘ಸಿಂಧೂರ’ ಸಸಿ ನೀಡಿತ್ತು. ಅದನ್ನು ತಮ್ಮ ನಿವಾಸದ ಉದ್ಯಾನದಲ್ಲಿ ನೆಡುವ ಭರವಸೆಯನ್ನು ಪ್ರಧಾನಿ ಅವರು ಆ ಗುಂಪಿಗೆ ನೀಡಿದ್ದರು.</p>.<p>‘ಈ ಸಸಿಯು ದೇಶದ ಮಹಿಳೆಯರ ಶೌರ್ಯ ಮತ್ತು ಧೈರ್ಯದ ಪ್ರತೀಕ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಇತ್ತೀಚೆಗೆ ನಡೆದ ‘ಆಪರೇಷನ್ ಸಿಂಧೂರ’ದ ಗೌರವಾರ್ಥಕವಾಗಿಯೂ ಈ ಸಸಿಯನ್ನು ಪರಿಗಣಿಸಲಾಗುತ್ತಿದೆ. </p>.<p>‘ಜಾಗತಿಕ ಹವಾಮಾನದ ರಕ್ಷಣೆಗಾಗಿ ಪ್ರತಿಯೊಂದು ದೇಶವು ಸ್ವಹಿತಾಸಕ್ತಿಯನ್ನು ಮೀರಿ ನಿಲ್ಲಬೇಕು. ಪ್ಲಾಸ್ಟಿಕ್ನಿಂದ ಉಂಟಾಗುವ ಪರಿಸರ ಮಾಲಿನ್ಯವನ್ನು ಕೊನೆಗೊಳಿಸುವುದು ಈ ವರ್ಷದ ವಿಶ್ವ ಪರಿಸರ ದಿನದ ವಿಷಯವಾಗಿದೆ. ಭಾರತವು ನಾಲ್ಕು– ಐದು ವರ್ಷಗಳಿಂದ ನಿರಂತರವಾಗಿ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ’ ಎಂದು ಮೋದಿ ಅವರು ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.</p>.<p>ಇಲ್ಲಿನ ಭಗವಾನ್ ಮಹಾವೀರ ವನಸ್ಥಲಿ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ‘ಏಕ್ ಪೇಡ್ ಮಾ ಕೆ ನಾಮ್’ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಸಸಿ ನೆಟ್ಟು, ನೀರೆರೆದರು.</p>.<p><strong>ಎಲೆಕ್ಟ್ರಿಕ್ ಬಸ್ಗಳಿಗೆ ಚಾಲನೆ:</strong> </p>.<p>ಸುಸ್ಥಿರ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಮಹತ್ವಕಾಂಕ್ಷಿಯ ಎಲೆಕ್ಟ್ರಿಕ್ ಬಸ್ಗಳಿಗೆ ಮೋದಿ ಅವರು ಇದೇ ವೇಳೆ ಚಾಲನೆ ನೀಡಿದರು. ಇದು ದೆಹಲಿಯ ಜನರ ಸುಗಮ ಜೀವನಕ್ಕೆ ಉಪಯುಕ್ತವಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದ ಉದ್ಯಾನದಲ್ಲಿ ಗುರುವಾರ ‘ಸಿಂಧೂರ’ ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದರು. </p>.<p>1971ರ ಯುದ್ಧದಲ್ಲಿ ಅಸಾಧಾರಣ ಶೌರ್ಯ ತೋರಿದ್ದ ಮಹಿಳೆಯರ ಗುಂಪೊಂದು, ಇತ್ತೀಚೆಗೆ ಮೋದಿ ಅವರಿಗೆ ಚಂಡೀಗಢದಲ್ಲಿ ‘ಸಿಂಧೂರ’ ಸಸಿ ನೀಡಿತ್ತು. ಅದನ್ನು ತಮ್ಮ ನಿವಾಸದ ಉದ್ಯಾನದಲ್ಲಿ ನೆಡುವ ಭರವಸೆಯನ್ನು ಪ್ರಧಾನಿ ಅವರು ಆ ಗುಂಪಿಗೆ ನೀಡಿದ್ದರು.</p>.<p>‘ಈ ಸಸಿಯು ದೇಶದ ಮಹಿಳೆಯರ ಶೌರ್ಯ ಮತ್ತು ಧೈರ್ಯದ ಪ್ರತೀಕ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಇತ್ತೀಚೆಗೆ ನಡೆದ ‘ಆಪರೇಷನ್ ಸಿಂಧೂರ’ದ ಗೌರವಾರ್ಥಕವಾಗಿಯೂ ಈ ಸಸಿಯನ್ನು ಪರಿಗಣಿಸಲಾಗುತ್ತಿದೆ. </p>.<p>‘ಜಾಗತಿಕ ಹವಾಮಾನದ ರಕ್ಷಣೆಗಾಗಿ ಪ್ರತಿಯೊಂದು ದೇಶವು ಸ್ವಹಿತಾಸಕ್ತಿಯನ್ನು ಮೀರಿ ನಿಲ್ಲಬೇಕು. ಪ್ಲಾಸ್ಟಿಕ್ನಿಂದ ಉಂಟಾಗುವ ಪರಿಸರ ಮಾಲಿನ್ಯವನ್ನು ಕೊನೆಗೊಳಿಸುವುದು ಈ ವರ್ಷದ ವಿಶ್ವ ಪರಿಸರ ದಿನದ ವಿಷಯವಾಗಿದೆ. ಭಾರತವು ನಾಲ್ಕು– ಐದು ವರ್ಷಗಳಿಂದ ನಿರಂತರವಾಗಿ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ’ ಎಂದು ಮೋದಿ ಅವರು ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.</p>.<p>ಇಲ್ಲಿನ ಭಗವಾನ್ ಮಹಾವೀರ ವನಸ್ಥಲಿ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ‘ಏಕ್ ಪೇಡ್ ಮಾ ಕೆ ನಾಮ್’ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಸಸಿ ನೆಟ್ಟು, ನೀರೆರೆದರು.</p>.<p><strong>ಎಲೆಕ್ಟ್ರಿಕ್ ಬಸ್ಗಳಿಗೆ ಚಾಲನೆ:</strong> </p>.<p>ಸುಸ್ಥಿರ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಮಹತ್ವಕಾಂಕ್ಷಿಯ ಎಲೆಕ್ಟ್ರಿಕ್ ಬಸ್ಗಳಿಗೆ ಮೋದಿ ಅವರು ಇದೇ ವೇಳೆ ಚಾಲನೆ ನೀಡಿದರು. ಇದು ದೆಹಲಿಯ ಜನರ ಸುಗಮ ಜೀವನಕ್ಕೆ ಉಪಯುಕ್ತವಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>