<p><strong>ಮುಂಬೈ:</strong> ರಷ್ಯಾ–ಉಕ್ರೇನ್ ಮತ್ತು ಇರಾನ್–ಇಸ್ರೇಲ್ ಯುದ್ಧಗಳು ವಿಶ್ವದ ಮೂರನೇ ಮಹಾಯುದ್ಧದತ್ತ ತಳ್ಳುತ್ತಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಜಗತ್ತಿನಾದ್ಯಂತ ಸಂಘರ್ಷದ ವಾತಾವರಣವಿದೆ. ಯಾವಾಗ ಬೇಕಾದರೂ ಜಗತ್ತನ್ನು ಮತ್ತೊಂದು ಮಹಾಯುದ್ಧದತ್ತ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾಗತಿಕ ಮಹಾಶಕ್ತಿಗಳ ಸರ್ವಾಧಿಕಾರ ಹಾಗೂ ನಿರಂಕುಶವಾದದಿಂದ ಸಮನ್ವಯ, ಸಾಮರಸ್ಯ ಹಾಗೂ ಪ್ರೀತಿ ಕಣ್ಮರೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಭಾರತವು ಸತ್ಯ, ಅಹಿಂಸೆ ಹಾಗೂ ಶಾಂತಿಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಗೌತಮ ಬುದ್ಧನ ನಾಡು. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿ, ಪರಿಶೀಲಿಸಿ ಭವಿಷ್ಯದ ನೀತಿಗಳನ್ನು ರೂಪಿಸಿಕೊಳ್ಳುವ ಅಗತ್ಯವಿದೆ ಎಂದಿದ್ದಾರೆ. </p>.<p>ಸುಧಾರಿತ ತಂತ್ರಜ್ಞಾನದಿಂದಾಗಿ ಯುದ್ಧದ ಆಯಾಮ ಬದಲಾಗಿದೆ. ಕ್ಷಿಪಣಿ ಹಾಗೂ ಡ್ರೋನ್ಗಳ ಬಳಕೆ ಹೆಚ್ಚಾಗಿದೆ. ಯುದ್ಧ ಟ್ಯಾಂಕರ್ಗಳು ಹಾಗೂ ವಿಮಾನಗಳ ಬಳಕೆ ಕಡಿಮೆಯಾಗುತ್ತಿದೆ. ಯುದ್ಧಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಗತಿಯು ಮಾನವೀಯತೆಯನ್ನು ರಕ್ಷಿಸಿಕೊಳ್ಳುವುದನ್ನು ಕಠಿಣಗೊಳಿಸುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ರಷ್ಯಾ–ಉಕ್ರೇನ್ ಮತ್ತು ಇರಾನ್–ಇಸ್ರೇಲ್ ಯುದ್ಧಗಳು ವಿಶ್ವದ ಮೂರನೇ ಮಹಾಯುದ್ಧದತ್ತ ತಳ್ಳುತ್ತಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಜಗತ್ತಿನಾದ್ಯಂತ ಸಂಘರ್ಷದ ವಾತಾವರಣವಿದೆ. ಯಾವಾಗ ಬೇಕಾದರೂ ಜಗತ್ತನ್ನು ಮತ್ತೊಂದು ಮಹಾಯುದ್ಧದತ್ತ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾಗತಿಕ ಮಹಾಶಕ್ತಿಗಳ ಸರ್ವಾಧಿಕಾರ ಹಾಗೂ ನಿರಂಕುಶವಾದದಿಂದ ಸಮನ್ವಯ, ಸಾಮರಸ್ಯ ಹಾಗೂ ಪ್ರೀತಿ ಕಣ್ಮರೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಭಾರತವು ಸತ್ಯ, ಅಹಿಂಸೆ ಹಾಗೂ ಶಾಂತಿಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಗೌತಮ ಬುದ್ಧನ ನಾಡು. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿ, ಪರಿಶೀಲಿಸಿ ಭವಿಷ್ಯದ ನೀತಿಗಳನ್ನು ರೂಪಿಸಿಕೊಳ್ಳುವ ಅಗತ್ಯವಿದೆ ಎಂದಿದ್ದಾರೆ. </p>.<p>ಸುಧಾರಿತ ತಂತ್ರಜ್ಞಾನದಿಂದಾಗಿ ಯುದ್ಧದ ಆಯಾಮ ಬದಲಾಗಿದೆ. ಕ್ಷಿಪಣಿ ಹಾಗೂ ಡ್ರೋನ್ಗಳ ಬಳಕೆ ಹೆಚ್ಚಾಗಿದೆ. ಯುದ್ಧ ಟ್ಯಾಂಕರ್ಗಳು ಹಾಗೂ ವಿಮಾನಗಳ ಬಳಕೆ ಕಡಿಮೆಯಾಗುತ್ತಿದೆ. ಯುದ್ಧಕ್ಕೆ ಸಂಬಂಧಿಸಿದ ತಾಂತ್ರಿಕ ಪ್ರಗತಿಯು ಮಾನವೀಯತೆಯನ್ನು ರಕ್ಷಿಸಿಕೊಳ್ಳುವುದನ್ನು ಕಠಿಣಗೊಳಿಸುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>