<p class="title"><strong>ನವದೆಹಲಿ:</strong> ಮಹಾರಾಷ್ಟ್ರ ವಿಧಾನಸಭೆಯಿಂದ 12 ಶಾಸಕರನ್ನು ಒಂದು ವರ್ಷದ ಅವಧಿಗೆ ಅಮಾನತು ಮಾಡಿರುವುದು ‘ಉಚ್ಚಾಟನೆಗಿಂತಲೂ ಕೆಟ್ಟದಾದ ಕ್ರಮ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.<p class="title">ಸದನದ ಒಳಗೆ ಮತ್ತು ಹೊರಗೆ ಸಭಾಧ್ಯಕ್ಷರ ಜೊತೆಗೆ ತೋರಿದ ಅನುಚಿತ ವರ್ತನೆಗಾಗಿ ಕಳೆದ ವರ್ಷ ಜುಲೈ ತಿಂಗಳುವಿಧಾನಸಭೆಯ 12 ಶಾಸಕರನ್ನು ಅಮಾನತುಪಡಿಸಲಾಗಿತ್ತು.</p>.<p class="title">ಅಮಾನತುಗೊಂಡಿದ್ದ ಶಾಸಕರು ಆಶೀಶ್ ಶೇಲರ್ ನೇತೃತ್ವದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠವು, ‘ವಿಧಾನಸಭೆಯಲ್ಲಿ ಈ ಕ್ಷೇತ್ರಗಳ ಪ್ರಾತಿನಿಧಿತ್ವ ಇಲ್ಲವಾಗುವ ಕಾರಣ ಈ ಶಿಸ್ತುಕ್ರಮ ಉಚ್ಚಾಟನೆಗಿಂತಲೂ ಕೆಟ್ಟದ್ದಾಗಿದೆ’ ಎಂದು ಅಭಿಪ್ರಾಯಪಟ್ಟಿತು.</p>.<p class="title">ಒಂದು ವರ್ಷದ ಅಮಾನತು ಎಂದರೆ ಅದು ಈ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಿಗೆ ವಿಧಿಸಲಾದ ದಂಡನೆ. ನಿಯಮದ ಪ್ರಕಾರ ಯಾವುದೇ ಕ್ಷೇತ್ರ ಆರು ತಿಂಗಳಿಗೂ ಹೆಚ್ಚು ಪ್ರಾತಿನಿಧಿತ್ವ ಇಲ್ಲದೇ ಇರಬಾರದು ಎಂದಿತು.</p>.<p class="title">ಚಾಲ್ತಿಯಲ್ಲಿರುವ ನಿಯಮಗಳನ್ನು ಉಲ್ಲೇಖಿಸಿ, ವಿಧಾನಸಭೆ ಸದಸ್ಯರನ್ನು 60 ದಿನಕ್ಕೂ ಅಧಿಕ ಕಾಲ ಅಮಾನತು ಮಾಡಲಾಗದು. ಸಂವಿಧಾನದ ವಿಧಿ 190 (4)ರ ಪ್ರಕಾರ ಅನುಮತಿಯಿಲ್ಲದೇ ಸದಸ್ಯ 60 ದಿನಕ್ಕೂ ಹೆಚ್ಚು ಕಾಲ ಸದನದಿಂದ ದೂರ ಉಳಿದರೆ ಆ ಕ್ಷೇತ್ರ ಖಾಲಿ ಇದೆ ಎಂದೇ ಭಾವಿಸಲಾಗುತ್ತದೆ ಎಂದು ಪೀಠವು ಉಲ್ಲೇಖಿಸಿತು.</p>.<p class="title">ಶಾಸಕರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅವರು, ಅನುಚಿತ ವರ್ತನೆಗಾಗಿ ಇತ್ತೀಚೆಗೆ ರಾಜ್ಯಸಭೆಯ 12 ಸದಸ್ಯರನ್ನು ಅಧಿವೇಶನದ ಅವಧಿಗೆ ಸೀಮಿತಗೊಳಿಸಿ ಅಮಾನತು ಮಾಡಲಾಗಿತ್ತು ಎಂದರು.</p>.<p class="title">ಮಹಾರಾಷ್ಟ್ರ ಸರ್ಕಾರ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ.ಎ.ಸುಂದರಂ, ಶಾಸನಸಭೆ ವಿಧಿಸುವ ದಂಡನೆಯನ್ನು ಕೋರ್ಟ್ ಪರಿಶೀಲಿಸಲು ಬರುವುದಿಲ್ಲ ಎಂದರು. ಆದರೆ ಪೀಠ ಇದನ್ನು ಒಪ್ಪಲಿಲ್ಲ. ವಿಚಾರಣೆಯನ್ನು ಜ.18ಕ್ಕೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಮಹಾರಾಷ್ಟ್ರ ವಿಧಾನಸಭೆಯಿಂದ 12 ಶಾಸಕರನ್ನು ಒಂದು ವರ್ಷದ ಅವಧಿಗೆ ಅಮಾನತು ಮಾಡಿರುವುದು ‘ಉಚ್ಚಾಟನೆಗಿಂತಲೂ ಕೆಟ್ಟದಾದ ಕ್ರಮ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.</p>.<p class="title">ಸದನದ ಒಳಗೆ ಮತ್ತು ಹೊರಗೆ ಸಭಾಧ್ಯಕ್ಷರ ಜೊತೆಗೆ ತೋರಿದ ಅನುಚಿತ ವರ್ತನೆಗಾಗಿ ಕಳೆದ ವರ್ಷ ಜುಲೈ ತಿಂಗಳುವಿಧಾನಸಭೆಯ 12 ಶಾಸಕರನ್ನು ಅಮಾನತುಪಡಿಸಲಾಗಿತ್ತು.</p>.<p class="title">ಅಮಾನತುಗೊಂಡಿದ್ದ ಶಾಸಕರು ಆಶೀಶ್ ಶೇಲರ್ ನೇತೃತ್ವದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠವು, ‘ವಿಧಾನಸಭೆಯಲ್ಲಿ ಈ ಕ್ಷೇತ್ರಗಳ ಪ್ರಾತಿನಿಧಿತ್ವ ಇಲ್ಲವಾಗುವ ಕಾರಣ ಈ ಶಿಸ್ತುಕ್ರಮ ಉಚ್ಚಾಟನೆಗಿಂತಲೂ ಕೆಟ್ಟದ್ದಾಗಿದೆ’ ಎಂದು ಅಭಿಪ್ರಾಯಪಟ್ಟಿತು.</p>.<p class="title">ಒಂದು ವರ್ಷದ ಅಮಾನತು ಎಂದರೆ ಅದು ಈ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಿಗೆ ವಿಧಿಸಲಾದ ದಂಡನೆ. ನಿಯಮದ ಪ್ರಕಾರ ಯಾವುದೇ ಕ್ಷೇತ್ರ ಆರು ತಿಂಗಳಿಗೂ ಹೆಚ್ಚು ಪ್ರಾತಿನಿಧಿತ್ವ ಇಲ್ಲದೇ ಇರಬಾರದು ಎಂದಿತು.</p>.<p class="title">ಚಾಲ್ತಿಯಲ್ಲಿರುವ ನಿಯಮಗಳನ್ನು ಉಲ್ಲೇಖಿಸಿ, ವಿಧಾನಸಭೆ ಸದಸ್ಯರನ್ನು 60 ದಿನಕ್ಕೂ ಅಧಿಕ ಕಾಲ ಅಮಾನತು ಮಾಡಲಾಗದು. ಸಂವಿಧಾನದ ವಿಧಿ 190 (4)ರ ಪ್ರಕಾರ ಅನುಮತಿಯಿಲ್ಲದೇ ಸದಸ್ಯ 60 ದಿನಕ್ಕೂ ಹೆಚ್ಚು ಕಾಲ ಸದನದಿಂದ ದೂರ ಉಳಿದರೆ ಆ ಕ್ಷೇತ್ರ ಖಾಲಿ ಇದೆ ಎಂದೇ ಭಾವಿಸಲಾಗುತ್ತದೆ ಎಂದು ಪೀಠವು ಉಲ್ಲೇಖಿಸಿತು.</p>.<p class="title">ಶಾಸಕರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅವರು, ಅನುಚಿತ ವರ್ತನೆಗಾಗಿ ಇತ್ತೀಚೆಗೆ ರಾಜ್ಯಸಭೆಯ 12 ಸದಸ್ಯರನ್ನು ಅಧಿವೇಶನದ ಅವಧಿಗೆ ಸೀಮಿತಗೊಳಿಸಿ ಅಮಾನತು ಮಾಡಲಾಗಿತ್ತು ಎಂದರು.</p>.<p class="title">ಮಹಾರಾಷ್ಟ್ರ ಸರ್ಕಾರ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ.ಎ.ಸುಂದರಂ, ಶಾಸನಸಭೆ ವಿಧಿಸುವ ದಂಡನೆಯನ್ನು ಕೋರ್ಟ್ ಪರಿಶೀಲಿಸಲು ಬರುವುದಿಲ್ಲ ಎಂದರು. ಆದರೆ ಪೀಠ ಇದನ್ನು ಒಪ್ಪಲಿಲ್ಲ. ವಿಚಾರಣೆಯನ್ನು ಜ.18ಕ್ಕೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>