ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸ್ತಿ‍ಪಟುಗಳಿಗೆ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ಇಲ್ಲ: ದೆಹಲಿ ಪೊಲೀಸ್

Published 29 ಮೇ 2023, 11:08 IST
Last Updated 29 ಮೇ 2023, 11:08 IST
ಅಕ್ಷರ ಗಾತ್ರ

ನವದೆಹಲಿ: ಜಂತರ್‌ಮಂತರ್‌ನಲ್ಲಿ ಕುಸ್ತಿಪಟುಗಳಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳವನ್ನು ಖಾಲಿ ಮಾಡಿದ ಮರುದಿನವೇ ದೆಹಲಿ ಪೊಲೀಸರಿಂದ ಈ ಹೇಳಿಕೆ ಹೊರಬಿದ್ದಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ನವದೆಹಲಿ ಡಿಸಿಪಿ, ‘ಜಂತರ್‌ಮಂತರ್‌ನ ಸೂಚಿತ ಸ್ಥಳದಲ್ಲಿ ಕುಸ್ತಿಪಟುಗಳ ಪ್ರತಿಭಟನೆ ಶಾಂತವಾಗಿ ನಡೆಯುತ್ತಿತ್ತು. ಭಾನುವಾರ ನಮ್ಮ ಸತತ ಮನವಿಯ ಹೊರತಾಗಿಯೂ ಕುಸ್ತಿಪಟುಗಳು ಕಾನೂನನ್ನು ಧಿಕ್ಕರಿಸಿದರು. ಹೀಗಾಗಿ ನಾವು ಪ್ರತಿಭಟನಾ ಸ್ಥಳವನ್ನು ಖಾಲಿಮಾಡಿ ಧರಣಿಯನ್ನು ಅಂತ್ಯಗೊಳಿಸಿದ್ದೇವೆ‘ ಎಂದು ಬರೆದುಕೊಂಡಿದ್ದಾರೆ.

‘ಭವಿಷ್ಯದಲ್ಲಿ ಕುಸ್ತಿಪಟುಗಳು ಪ್ರತಿಭಟನೆ ಮಾಡಲು ಅನುಮತಿ ಕೇಳಿದ್ದೇ ಆದಲ್ಲಿ, ಜಂತರ್‌ಮಂತರ್‌ ಹೊರತುಪಡಿಸಿ ಬೇರೆ ಸ್ಥಳಗಳನ್ನು ಸೂಚಿಸಲಾಗುವುದು’ ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT