<p class="title"><strong>ಮುಜಾಫರ್ನಗರ:</strong> ‘ಹನುಮ ದಲಿತ’ ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆಸಚಿವ ಓಂ ಪ್ರಕಾಶ್ ರಾಜ್ಭರ್ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p class="title">ಶಾಮ್ಲಿ ಜಿಲ್ಲೆಯಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ದೇವರನ್ನು ಜಾತಿ ಹೆಸರಿನಲ್ಲಿ ವಿಂಗಡಿಸುವುದು ಸರಿಯಲ್ಲ.ಈ ವಿವಾದಾತ್ಮಕ ಹೇಳಿಕೆಯಿಂದಾಗಿ ದಲಿತ ಸಮುದಾಯದವರು ಹನುಮ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳಲು ಒತ್ತಾಯಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p class="title">‘ದೇಶದ ಎಲ್ಲ ಹನುಮ ದೇವಸ್ಥಾನಗಳನ್ನು ದಲಿತರು ಸುಪರ್ದಿಗೆ ತೆಗೆದುಕೊಳ್ಳಬೇಕು. ಮತ್ತು ಅಲ್ಲಿ ದಲಿತರನ್ನೇ ಪುರೋಹಿತರಾಗಿ ನೇಮಿಸಕೊಳ್ಳಬೇಕು ಎಂದು’ ಮುಖ್ಯಮಂತ್ರಿ ಹೇಳಿಕೆಗೆ ಭೀಮ್ ಆರ್ಮಿ ಸಂಘಟನೆ ಮುಖ್ಯಸ್ಥಚಂದ್ರಶೇಖರ್ ಪ್ರತಿಕ್ರಿಯಿಸಿದ್ದಾರೆ.</p>.<p class="title">ರಾಜಸ್ಥಾನದ ಅಲ್ವರ್ನಲ್ಲಿ ನಡೆದ ರ್ಯಾಲಿ ಸಂದರ್ಭದಲ್ಲಿ ‘ಹನುಮಂತ ವಂಚಿತ, ದಲಿತ ಮತ್ತು ಅರಣ್ಯವಾಸಿ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಈ ಹೇಳಿಕೆ ನೀಡಿದ್ದರು.ಅವರ ಹೇಳಿಕೆಗೆ ಬಿಜೆಪಿ ಮುಖಂಡರಿಂದಲೇ ಪ್ರತಿರೋಧ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಜಾಫರ್ನಗರ:</strong> ‘ಹನುಮ ದಲಿತ’ ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆಸಚಿವ ಓಂ ಪ್ರಕಾಶ್ ರಾಜ್ಭರ್ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p class="title">ಶಾಮ್ಲಿ ಜಿಲ್ಲೆಯಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ದೇವರನ್ನು ಜಾತಿ ಹೆಸರಿನಲ್ಲಿ ವಿಂಗಡಿಸುವುದು ಸರಿಯಲ್ಲ.ಈ ವಿವಾದಾತ್ಮಕ ಹೇಳಿಕೆಯಿಂದಾಗಿ ದಲಿತ ಸಮುದಾಯದವರು ಹನುಮ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳಲು ಒತ್ತಾಯಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p class="title">‘ದೇಶದ ಎಲ್ಲ ಹನುಮ ದೇವಸ್ಥಾನಗಳನ್ನು ದಲಿತರು ಸುಪರ್ದಿಗೆ ತೆಗೆದುಕೊಳ್ಳಬೇಕು. ಮತ್ತು ಅಲ್ಲಿ ದಲಿತರನ್ನೇ ಪುರೋಹಿತರಾಗಿ ನೇಮಿಸಕೊಳ್ಳಬೇಕು ಎಂದು’ ಮುಖ್ಯಮಂತ್ರಿ ಹೇಳಿಕೆಗೆ ಭೀಮ್ ಆರ್ಮಿ ಸಂಘಟನೆ ಮುಖ್ಯಸ್ಥಚಂದ್ರಶೇಖರ್ ಪ್ರತಿಕ್ರಿಯಿಸಿದ್ದಾರೆ.</p>.<p class="title">ರಾಜಸ್ಥಾನದ ಅಲ್ವರ್ನಲ್ಲಿ ನಡೆದ ರ್ಯಾಲಿ ಸಂದರ್ಭದಲ್ಲಿ ‘ಹನುಮಂತ ವಂಚಿತ, ದಲಿತ ಮತ್ತು ಅರಣ್ಯವಾಸಿ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಈ ಹೇಳಿಕೆ ನೀಡಿದ್ದರು.ಅವರ ಹೇಳಿಕೆಗೆ ಬಿಜೆಪಿ ಮುಖಂಡರಿಂದಲೇ ಪ್ರತಿರೋಧ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>