ಮೋದಿ ಅವರೂ ಇತ್ತೀಚೆಗೆ ರಾಜ್ಯಸಭೆಯಲ್ಲಿ ಆಜಾದ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಆಜಾದ್ ಹಾಗೂ ನಿವೃತ್ತರಾಗುತ್ತಿರುವ ರಾಜ್ಯಸಭೆ ಸದಸ್ಯರಿಗೆ ವಿದಾಯ ಹೇಳುವ ಸಂದರ್ಭದಲ್ಲಿ ಮಾತನಾಡಿದ್ದ ಮೋದಿ, ‘ಗುಲಾಂ ನಬಿ ಜೀ (ಪ್ರತಿಪಕ್ಷ ನಾಯಕ) ಅವರ ಸ್ಥಾನವನ್ನು ತುಂಬುವುದು ಕಷ್ಟವಿದೆ. ಅವರಂತೆಯೇ ಕೆಲಸ ಮಾಡುವುದು ಸುಲಭವಲ್ಲ. ಅವರು ತಮ್ಮ ಪಕ್ಷದ ಬಗ್ಗೆ ಮಾತ್ರ ಕಾಳಜಿ ಇದ್ದವರಲ್ಲ. ಇಡೀ ದೇಶ ಹಾಗೂ ಸದನದ ಬಗ್ಗೆ ಕಾಳಜಿಯುಳ್ಳವರಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಮಾತುಗಳನ್ನಾಡುವ ಮಧ್ಯೆ ಮೋದಿ ಅವರು ಹಲವು ಬಾರಿ ಗದ್ಗದಿತರಾಗಿದ್ದರು.