ತೆಲಂಗಾಣ ಸಾರಿಗೆ ಸಂಸ್ಥೆಯನ್ನು (ಟಿಎಸ್ಆರ್ಟಿಸಿ) ಸರ್ಕಾರದೊಂದಿಗೆ ವಿಲೀನ ಗೊಳಿಸಬೇಕು, ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಾರ್ಮಿಕ ಸಂಘಟನೆ ‘ಜಂಟಿ ಕಾರ್ಯಾಚರಣ ಸಮಿತಿ‘ಯು ಶುಕ್ರವಾರ ರಾತ್ರಿ ಅನಿರ್ದಿಷ್ಟಾವತಿ ಹೋರಾಟಕ್ಕೆ ಕರೆ ನೀಡಿತ್ತು. ಈ ಪ್ರತಿಭಟನೆಯಲ್ಲಿ 50 ಸಾವಿರ ನೌಕರರು ಭಾಗವಹಿಸಿದ್ದರು. ಹಬ್ಬದ ಸಂದರ್ಭದಲ್ಲಿ ಸಾರಿಗೆ ನೌಕರರು ಆರಂಭಿಸಿದ ಈ ಹೋರಾಟದಿಂದಾಗಿ ತೆಲಂಗಾಣದಲ್ಲಿ ಸಾರಿಗೆ ಸಮಸ್ಯೆ ಉಂಟಾಗಿದೆ. ಹೋರಾಟಗಾರರು ಶನಿವಾರ ಸಂಜೆ 6ರ ಒಳಗೆ ಕರ್ತವ್ಯಕ್ಕೆ ಹಾಜರಾಬೇಕು ಎಂದು ಸರ್ಕಾರ ಸೂಚಿಸಿತ್ತು. ಆದರೆ, ನೌಕರರು ಹಾಜರಾಗಿರಲಿಲ್ಲ. ಹೀಗಾಗಿ, 48000 ಸಾವಿರ ನೌಕರರನ್ನು ವಜಾಗೊಳಿಸಿರುವ ಸರ್ಕಾರ, ಪ್ರತಿಭಟನಾಕಾರರೊಂದಿಗೆ ಯಾವುದೇ ಮಾತುಕತೆಗಳಿಲ್ಲ ಎಂದೂ ಸ್ಪಷ್ಟಪಡಿಸಿದೆ.