<p><strong>ನವದೆಹಲಿ: </strong>ಕೇಂದ್ರದ ಆಡಳಿತ ಸುಧಾರಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ದೂಳು ಹಿಡಿದು ಕುಳಿತಿದ್ದ ಎರಡನೇ ಆಡಳಿತ ಸುಧಾರಣಾ ಆಯೋಗ–2005ರ ವರದಿ ಜಾರಿ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.</p>.<p>ದೇಶದ ಆಡಳಿತ ಸುಧಾರಣೆಗಾಗಿ 2005ರಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಎರಡನೇ ಆಡಳಿತ ಸುಧಾರಣಾ ಆಯೋಗವನ್ನು ರಚನೆ ಮಾಡಿತ್ತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅದರ ಅಧ್ಯಕ್ಷರಾಗಿದ್ದರು.2006ರಿಂದ 2009ರ ವರೆಗೆ ಈ ಆಯೋಗವು 15 ಅಧ್ಯಾಯಗಳ ಬೃಹತ್ ವರದಿ ಸಲ್ಲಿಸಿತ್ತು. ಆಡಳಿತ ಸುಧಾರಣೆಗಾಗಿ ಮೊಯಿಲಿ ಆಯೋಗ ಹಲವು ಸಲಹೆ ಸೂಚನೆಗಳನ್ನು ನೀಡಿತ್ತಾದರೂ, ನಂತರದಲ್ಲಿ ಅದು ಜಾರಿಯಾಗದೇ ಉಳಿಯಿತು.</p>.<p>ಸದ್ಯ ಮೋದಿ ಸರ್ಕಾರ ಈ ವರದಿಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲು ಮೋದಿಆಡಳಿತ ಸುಧಾರಣಾ ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಾಷ್ಟ್ರೀಯ ಆಂಗ್ಲ ನಿಯತಕಾಲಿಕೆThe Week ಮೂಲಗಳ ಮಾಹಿತಿ ಉಲ್ಲೇಖಿಸಿ ವರದಿ ಮಾಡಿದೆ. ಅಲ್ಲದೆ, ಈ ವರದಿ ಜಾರಿಯಾಗದೇ ಉಳಿದ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎಂದೂThe Week ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರದ ಆಡಳಿತ ಸುಧಾರಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ದೂಳು ಹಿಡಿದು ಕುಳಿತಿದ್ದ ಎರಡನೇ ಆಡಳಿತ ಸುಧಾರಣಾ ಆಯೋಗ–2005ರ ವರದಿ ಜಾರಿ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.</p>.<p>ದೇಶದ ಆಡಳಿತ ಸುಧಾರಣೆಗಾಗಿ 2005ರಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಎರಡನೇ ಆಡಳಿತ ಸುಧಾರಣಾ ಆಯೋಗವನ್ನು ರಚನೆ ಮಾಡಿತ್ತು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅದರ ಅಧ್ಯಕ್ಷರಾಗಿದ್ದರು.2006ರಿಂದ 2009ರ ವರೆಗೆ ಈ ಆಯೋಗವು 15 ಅಧ್ಯಾಯಗಳ ಬೃಹತ್ ವರದಿ ಸಲ್ಲಿಸಿತ್ತು. ಆಡಳಿತ ಸುಧಾರಣೆಗಾಗಿ ಮೊಯಿಲಿ ಆಯೋಗ ಹಲವು ಸಲಹೆ ಸೂಚನೆಗಳನ್ನು ನೀಡಿತ್ತಾದರೂ, ನಂತರದಲ್ಲಿ ಅದು ಜಾರಿಯಾಗದೇ ಉಳಿಯಿತು.</p>.<p>ಸದ್ಯ ಮೋದಿ ಸರ್ಕಾರ ಈ ವರದಿಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲು ಮೋದಿಆಡಳಿತ ಸುಧಾರಣಾ ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಾಷ್ಟ್ರೀಯ ಆಂಗ್ಲ ನಿಯತಕಾಲಿಕೆThe Week ಮೂಲಗಳ ಮಾಹಿತಿ ಉಲ್ಲೇಖಿಸಿ ವರದಿ ಮಾಡಿದೆ. ಅಲ್ಲದೆ, ಈ ವರದಿ ಜಾರಿಯಾಗದೇ ಉಳಿದ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎಂದೂThe Week ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>