ಕಳೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದರು. ಕಾಂಗ್ರೆಸ್ ಸೇರಿದ ಬಳಿಕ ಶರ್ಮಿಳಾ ಸ್ಥಾಪಿಸಿದ್ದ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ನಲ್ಲಿ ವಿಲೀನ ಮಾಡಿದರು.
ವೈ.ಎಸ್.ಶರ್ಮಿಳಾ ಅವರನ್ನು ಆಂಧ್ರಪ್ರದೇಶ ರಾಜ್ಯ ಘಟಕದ ನೂತನ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಂಧ್ರದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಿಡುಗು ರುದ್ರರಾಜು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.