<p>ಯಾದಗಿರಿ: ‘ಮಹಿಳೆಯರ ಪರ ಎಂದು ಹೇಳಿಕೊಳ್ಳುತ್ತಲೇ ಮಹಿಳಾ ಮೀಸಲಾತಿ ವಿರೋಧಿಸುವ ಮೂಲಕ ಕಾಂಗ್ರೆಸ್ ದ್ವಂದ್ವ ನೀತಿಯನ್ನು ತೋರಿಸಿದೆ’ ಎಂದು ಬಿಜೆಪಿ ನಾಯಕಿ ನಾಗರತ್ನಾ ಕುಪ್ಪಿ ಟೀಕಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ‘ಕಾಂಗ್ರೆಸ್ನ ಮಹಿಳಾ ಸಂಸದರೂ ಸಹ ವಿರೋಧ ವ್ಯಕ್ತಪಡಿಸಿದ್ದು ಆಶ್ಚರ್ಯಕರ. ಪ್ರಧಾನಮಂತ್ರಿ ಮೋದಿಯವರು ಮಹಿಳಾ ಸಬಲೀಕರಣಕ್ಕೆಂದು ಮಂಡಿಸಿದ್ದರು. ಆದರೆ, ವಿರೋಧ ಪಕ್ಷಗಳು ಇದನ್ನು ವಿರೋಧಿಸಿದ್ದರಿಂದ ದೇಶದ ಮಹಿಳೆಯರ ನಿರೀಕ್ಷೆಗೆ ಧಕ್ಕೆಯಾಗಿದೆ’ ಎಂದು ಹೇಳಿದ್ದಾರೆ</p>.<p>‘ಈ ಕಾಯ್ದೆಯಿಂದ ಕೇವಲ ರಾಜಕೀಯ ಮನೆತನಗಳ ಮಹಿಳೆಯರಿಗೆ ಮಾತ್ರ ಅವಕಾಶ ಸೀಮಿತವಾಗದೆ, ಎಲ್ಲಾ ಮನೆಗಳ ಮಹಿಳೆಯರು ಸ್ವಸಾಮರ್ಥ್ಯದಿಂದ ರಾಜಕೀಯದಲ್ಲಿ ಮುನ್ನಡೆಯುವ ಅವಕಾಶ ಸಿಗುತ್ತಿತ್ತು. ಆದರೆ, ಈಗ ಹಿನ್ನೆಡೆಯಾಗಿದೆ. ದೇಶದ ಮಹಿಳೆಯರು ಕಾಂಗ್ರೆಸ್ ಅನ್ನು ಕ್ಷಮಿಸುವುದಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>‘ಈ ಕುರಿತು ದೇಶಾದ್ಯಂತ ಜಾಗೃತಿ ಮೂಡಿಸಿ, ಹೋರಾಟ ರೂಪಿಸಲಾಗುವುದು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯಿದೆ’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-30-1028499785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಮಹಿಳೆಯರ ಪರ ಎಂದು ಹೇಳಿಕೊಳ್ಳುತ್ತಲೇ ಮಹಿಳಾ ಮೀಸಲಾತಿ ವಿರೋಧಿಸುವ ಮೂಲಕ ಕಾಂಗ್ರೆಸ್ ದ್ವಂದ್ವ ನೀತಿಯನ್ನು ತೋರಿಸಿದೆ’ ಎಂದು ಬಿಜೆಪಿ ನಾಯಕಿ ನಾಗರತ್ನಾ ಕುಪ್ಪಿ ಟೀಕಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ‘ಕಾಂಗ್ರೆಸ್ನ ಮಹಿಳಾ ಸಂಸದರೂ ಸಹ ವಿರೋಧ ವ್ಯಕ್ತಪಡಿಸಿದ್ದು ಆಶ್ಚರ್ಯಕರ. ಪ್ರಧಾನಮಂತ್ರಿ ಮೋದಿಯವರು ಮಹಿಳಾ ಸಬಲೀಕರಣಕ್ಕೆಂದು ಮಂಡಿಸಿದ್ದರು. ಆದರೆ, ವಿರೋಧ ಪಕ್ಷಗಳು ಇದನ್ನು ವಿರೋಧಿಸಿದ್ದರಿಂದ ದೇಶದ ಮಹಿಳೆಯರ ನಿರೀಕ್ಷೆಗೆ ಧಕ್ಕೆಯಾಗಿದೆ’ ಎಂದು ಹೇಳಿದ್ದಾರೆ</p>.<p>‘ಈ ಕಾಯ್ದೆಯಿಂದ ಕೇವಲ ರಾಜಕೀಯ ಮನೆತನಗಳ ಮಹಿಳೆಯರಿಗೆ ಮಾತ್ರ ಅವಕಾಶ ಸೀಮಿತವಾಗದೆ, ಎಲ್ಲಾ ಮನೆಗಳ ಮಹಿಳೆಯರು ಸ್ವಸಾಮರ್ಥ್ಯದಿಂದ ರಾಜಕೀಯದಲ್ಲಿ ಮುನ್ನಡೆಯುವ ಅವಕಾಶ ಸಿಗುತ್ತಿತ್ತು. ಆದರೆ, ಈಗ ಹಿನ್ನೆಡೆಯಾಗಿದೆ. ದೇಶದ ಮಹಿಳೆಯರು ಕಾಂಗ್ರೆಸ್ ಅನ್ನು ಕ್ಷಮಿಸುವುದಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>‘ಈ ಕುರಿತು ದೇಶಾದ್ಯಂತ ಜಾಗೃತಿ ಮೂಡಿಸಿ, ಹೋರಾಟ ರೂಪಿಸಲಾಗುವುದು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯಿದೆ’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-30-1028499785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>