<p class="title"><strong>ತಿರುವನಂತಪುರ</strong>: ಸಂಪ್ರದಾಯವಾದಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಕೇರಳದ ಪ್ರಸಿದ್ಧ ನಗ್ನ ಮಹಿಳೆಯದೈತ್ಯ ಪ್ರತಿಮೆ ‘ಯಕ್ಷಿ’ಗೆ 50 ವರ್ಷ ಪೂರ್ಣಗೊಂಡಿದ್ದು, ಈಗ ಕಂಚಿನ ಲೇಪನದೊಂದಿಗೆ ಪುನರುಜ್ಜೀವನಗೊಳ್ಳುತ್ತಿದೆ.</p>.<p>ಪಾಲಕ್ಕಾಡ್ ಜಿಲ್ಲೆಯ ಮಲಂಪುಳದ ಉದ್ಯಾನದಲ್ಲಿ ಈ ಪ್ರತಿಮೆ ಇದೆ. 1969ರಲ್ಲಿ ಹಿರಿಯ ಕಲಾವಿದ ಕನಯಿ ಕುಹ್ಹಿರಾಮನ್ ಅವರು ಈ ಪ್ರತಿಮೆಯನ್ನು ಕೆತ್ತನೆ ಮಾಡಿದ್ದಾರೆ.</p>.<p>‘ಯಕ್ಷಿ’ಯಲ್ಲಿರುವ ಮಹಿಳೆ, ತಲೆಗೂದಲನ್ನು ಹರಡಿಕೊಂಡು, ಕಾಲುಗಳನ್ನು ಚಾಚಿಕೊಂಡು, ಅರ್ಧ ಕಣ್ಣು ಮುಚ್ಚಿದ್ದು, ಪಶ್ಚಿಮಘಟ್ಟದ ಪರ್ವತ ಶ್ರೇಣಿಗಳತ್ತ ಮುಖ ಮಾಡಿ ಕುಳಿತಿದ್ದಾಳೆ.</p>.<p>ಕೇರಳದ ಪ್ರಸಿದ್ಧ ಶಿಲ್ಪಗಳಲ್ಲಿ ಒಂದಾದ ‘ಯಕ್ಷಿ’ (ಸ್ಥಳೀಯ ಭಾಷೆಯಲ್ಲಿ ದೇವತೆ) ಅಪರೂಪದ ಕಲಾ ಕೌಶಲದಿಂದ ಕೂಡಿದೆ.</p>.<p>ಶಿಲ್ಪಿ ಕನಯಿ ಕುಹ್ಹಿರಾಮನ್ ಅವರಿಗೆ ಈಗ 81 ವರ್ಷ ವಯಸ್ಸಾಗಿದ್ದು, ಪ್ರತಿಮೆಯ ಪುನರುಜ್ಜೀವನ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೊಂದು ವಾರದಲ್ಲಿ ಕೆಲಸ ಮುಗಿಯಲಿದೆ ಎಂದು ಕುಹ್ಹಿರಾಮನ್ ಹೇಳಿದರು.</p>.<p>‘1960ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಪ್ರತಿಮೆ ಕೆತ್ತನೆ ಮಾಡಲು ಮುಂದಾದಾಗ ಸಾಕಷ್ಟು ವಿರೋಧ ಎದುರಿಸಬೇಕಾಯಿತು. ಪ್ರತಿಮೆ ಅಶ್ಲೀಲವಾಗಿದೆ, ರಾಜ್ಯದ ಸಂಸ್ಕೃತಿ ಮತ್ತು ನೈತಿಕೆಗೆ ವಿರುದ್ಧವಾಗಿದೆ ಎಂಬ ಆರೋಪಗಳು ಬಂದಿದ್ದವು’ ಎಂದರು.</p>.<p>‘ಅದರಲ್ಲಿ ತಪ್ಪೇನಿದೆ. ಎಂದು ಅವರನ್ನು ನಾನು ಕೇಳಿದ್ದೆ. ನಗ್ನ ಮಹಿಳೆಯ ಶಿಲ್ಪಗಳು ದೇವಾಲಯಗಳಲ್ಲಿ ಇಲ್ಲವೇ?. ನನಗೆ ಪ್ರಕೃತಿಯೇ ದೇವಾಲಯ ಎಂದು ಪ್ರತಿಪಾದನೆ ಮಾಡಿದ್ದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ತಿರುವನಂತಪುರ</strong>: ಸಂಪ್ರದಾಯವಾದಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಕೇರಳದ ಪ್ರಸಿದ್ಧ ನಗ್ನ ಮಹಿಳೆಯದೈತ್ಯ ಪ್ರತಿಮೆ ‘ಯಕ್ಷಿ’ಗೆ 50 ವರ್ಷ ಪೂರ್ಣಗೊಂಡಿದ್ದು, ಈಗ ಕಂಚಿನ ಲೇಪನದೊಂದಿಗೆ ಪುನರುಜ್ಜೀವನಗೊಳ್ಳುತ್ತಿದೆ.</p>.<p>ಪಾಲಕ್ಕಾಡ್ ಜಿಲ್ಲೆಯ ಮಲಂಪುಳದ ಉದ್ಯಾನದಲ್ಲಿ ಈ ಪ್ರತಿಮೆ ಇದೆ. 1969ರಲ್ಲಿ ಹಿರಿಯ ಕಲಾವಿದ ಕನಯಿ ಕುಹ್ಹಿರಾಮನ್ ಅವರು ಈ ಪ್ರತಿಮೆಯನ್ನು ಕೆತ್ತನೆ ಮಾಡಿದ್ದಾರೆ.</p>.<p>‘ಯಕ್ಷಿ’ಯಲ್ಲಿರುವ ಮಹಿಳೆ, ತಲೆಗೂದಲನ್ನು ಹರಡಿಕೊಂಡು, ಕಾಲುಗಳನ್ನು ಚಾಚಿಕೊಂಡು, ಅರ್ಧ ಕಣ್ಣು ಮುಚ್ಚಿದ್ದು, ಪಶ್ಚಿಮಘಟ್ಟದ ಪರ್ವತ ಶ್ರೇಣಿಗಳತ್ತ ಮುಖ ಮಾಡಿ ಕುಳಿತಿದ್ದಾಳೆ.</p>.<p>ಕೇರಳದ ಪ್ರಸಿದ್ಧ ಶಿಲ್ಪಗಳಲ್ಲಿ ಒಂದಾದ ‘ಯಕ್ಷಿ’ (ಸ್ಥಳೀಯ ಭಾಷೆಯಲ್ಲಿ ದೇವತೆ) ಅಪರೂಪದ ಕಲಾ ಕೌಶಲದಿಂದ ಕೂಡಿದೆ.</p>.<p>ಶಿಲ್ಪಿ ಕನಯಿ ಕುಹ್ಹಿರಾಮನ್ ಅವರಿಗೆ ಈಗ 81 ವರ್ಷ ವಯಸ್ಸಾಗಿದ್ದು, ಪ್ರತಿಮೆಯ ಪುನರುಜ್ಜೀವನ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನೊಂದು ವಾರದಲ್ಲಿ ಕೆಲಸ ಮುಗಿಯಲಿದೆ ಎಂದು ಕುಹ್ಹಿರಾಮನ್ ಹೇಳಿದರು.</p>.<p>‘1960ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಪ್ರತಿಮೆ ಕೆತ್ತನೆ ಮಾಡಲು ಮುಂದಾದಾಗ ಸಾಕಷ್ಟು ವಿರೋಧ ಎದುರಿಸಬೇಕಾಯಿತು. ಪ್ರತಿಮೆ ಅಶ್ಲೀಲವಾಗಿದೆ, ರಾಜ್ಯದ ಸಂಸ್ಕೃತಿ ಮತ್ತು ನೈತಿಕೆಗೆ ವಿರುದ್ಧವಾಗಿದೆ ಎಂಬ ಆರೋಪಗಳು ಬಂದಿದ್ದವು’ ಎಂದರು.</p>.<p>‘ಅದರಲ್ಲಿ ತಪ್ಪೇನಿದೆ. ಎಂದು ಅವರನ್ನು ನಾನು ಕೇಳಿದ್ದೆ. ನಗ್ನ ಮಹಿಳೆಯ ಶಿಲ್ಪಗಳು ದೇವಾಲಯಗಳಲ್ಲಿ ಇಲ್ಲವೇ?. ನನಗೆ ಪ್ರಕೃತಿಯೇ ದೇವಾಲಯ ಎಂದು ಪ್ರತಿಪಾದನೆ ಮಾಡಿದ್ದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>