<p><strong>ನವದೆಹಲಿ</strong>: ಎಡಬಿಡದೆ ಸುರಿದ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬೀದಿಗಳು ಹೊಳೆಯಂತಾಗಿದ್ದು, ಮಾರುಕಟ್ಟೆ ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ.</p><p>ತಗ್ಗು ಪ್ರದೇಶಗಳಲ್ಲಿರುವ ಮನೆಗಳು ನೀರಿನಲ್ಲಿ ಮುಳುಗಿದ ಪರಿಣಾಮ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ನದಿ ನೀರಿನ ಮಟ್ಟ ಹೆಚ್ಚುತ್ತಿದ್ದ ಕಾರಣ ಬುಧವಾರ ಮಧ್ಯಾಹ್ನ ಅಧಿಕಾರಿಗಳು ಜನರನ್ನು ಸ್ಥಳಾಂತರ ಮಾಡಿದ್ದು, ಹಳೆಯ ರೈಲ್ವೆ ಸೇತುವೆಯನ್ನು ಬಂದ್ ಮಾಡಿದ್ದಾರೆ.</p><p>ಅನುಪ್ ಥಾಪಾ ಎನ್ನುವವರು ಮಾತನಾಡಿ, ‘ನಾವು ಬಹುತೇಕ ಸಾಮಗ್ರಿಗಳನ್ನು ತೆಗೆದುಕೊಂಡು ಬಂದಿದ್ದೇವೆ, ಆದರೆ ಕೆಲವು ವಸ್ತುಗಳು ನೀರಿನ ಪಾಲಾಗಿದೆ. ನೀರಿನ ಮಟ್ಟ ಇಳಿಕೆಯಾದ ಮೇಲೆ ನಮ್ಮ ಅಂಗಡಿಗಳನ್ನು ಮತ್ತೆ ದುರಸ್ಥಿ ಮಾಡಿಕೊಳ್ಳಬೇಕು, ಅದರ ವೆಚ್ಚ ನಮಗೆ ಹೊರೆಯಾಗಲಿದೆ’ ಎಂದು ಬೇಸರಿಸಿದ್ದಾರೆ.</p><p>ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ರಸ್ತೆ ಪಕ್ಕದಲ್ಲಿನ ಶಿಬಿರಕ್ಕೆ ಥಾಪಾ ಅವರ ಕುಟುಂಬ ಸ್ಥಳಾಂತರಗೊಂಡಿದೆ. ‘2023ರಲ್ಲೂ ನಾವು ಇದೇ ಪರಿಸ್ಥಿತಿಯನ್ನು ಎದುರಿಸಿದ್ದೆವು. ಬೀದಿಯನ್ನು ಸ್ವಚ್ಛಗೊಳಿಸಿ, ಪ್ರವಾಹದ ನೀರು ಹರಿದುಹೋಗುವಂತೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇವೆ’ ಎನ್ನುತ್ತಾರೆ ಥಾಪಾ.</p><p>ಮದನ್ಪುರ್ ಖಾದರ್ ಪ್ರದೇಶದಲ್ಲಿರುವ ಹಲವು ಕುಟುಂಬಗಳು ಮನೆಯನ್ನು ಕಳೆದುಕೊಂಡಿವೆ. ಈ ಬಗ್ಗೆ ಮಾತನಾಡಿದ ಅಲ್ಲಿಯ ನಿವಾಸಿ ತಯಾರಾ ಎನ್ನುವವರು ಮಾತನಾಡಿ, ‘ನಮ್ಮ ಎಲ್ಲಾ ವಸ್ತುಗಳು ಮನೆಯೊಳಗೇ ಇವೆ. ಕೆಲವು ಅಗತ್ಯ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಬರಲು ಸಾಧ್ಯವಾಯಿತು. ಶೌಚಾಲಯದ ಕೊರತೆಯಿಂದ ಮಹಿಳೆಯರು ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.</p><p>‘ಮನೆ ತೊರೆದು ಬಂದಿರುವ ನಮಗೆ ಸರಿಯಾದ ಆಹಾರ ಸಿಗುತ್ತಿಲ್ಲ. ಬನ್, ಬಿಸ್ಕತ್ತು ತಿನ್ನುತ್ತಿದ್ದೇವೆ. ಮನೆಯಲ್ಲಿದ್ದ ಅಡುಗೆ ಸಾಮಗ್ರಿಗಳನ್ನು ತರಲು ಸಾಧ್ಯವಾಗಲಿಲ್ಲ, ಈಗ ಆಹಾರ ತಯಾರಿಸಲು ಯಾವುದೇ ಸೌಲಭ್ಯವಿಲ್ಲ. ಗೂಡಂಗಡಿಗಳಲ್ಲಿ ಸಿಗುವ ಆಹಾರ ತಿನ್ನುತ್ತಿದ್ದೇವೆ’ ಎಂದು ಮತ್ತೊಬ್ಬ ನಿವಾಸಿ ದುಃಖಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಡಬಿಡದೆ ಸುರಿದ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬೀದಿಗಳು ಹೊಳೆಯಂತಾಗಿದ್ದು, ಮಾರುಕಟ್ಟೆ ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ.</p><p>ತಗ್ಗು ಪ್ರದೇಶಗಳಲ್ಲಿರುವ ಮನೆಗಳು ನೀರಿನಲ್ಲಿ ಮುಳುಗಿದ ಪರಿಣಾಮ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ನದಿ ನೀರಿನ ಮಟ್ಟ ಹೆಚ್ಚುತ್ತಿದ್ದ ಕಾರಣ ಬುಧವಾರ ಮಧ್ಯಾಹ್ನ ಅಧಿಕಾರಿಗಳು ಜನರನ್ನು ಸ್ಥಳಾಂತರ ಮಾಡಿದ್ದು, ಹಳೆಯ ರೈಲ್ವೆ ಸೇತುವೆಯನ್ನು ಬಂದ್ ಮಾಡಿದ್ದಾರೆ.</p><p>ಅನುಪ್ ಥಾಪಾ ಎನ್ನುವವರು ಮಾತನಾಡಿ, ‘ನಾವು ಬಹುತೇಕ ಸಾಮಗ್ರಿಗಳನ್ನು ತೆಗೆದುಕೊಂಡು ಬಂದಿದ್ದೇವೆ, ಆದರೆ ಕೆಲವು ವಸ್ತುಗಳು ನೀರಿನ ಪಾಲಾಗಿದೆ. ನೀರಿನ ಮಟ್ಟ ಇಳಿಕೆಯಾದ ಮೇಲೆ ನಮ್ಮ ಅಂಗಡಿಗಳನ್ನು ಮತ್ತೆ ದುರಸ್ಥಿ ಮಾಡಿಕೊಳ್ಳಬೇಕು, ಅದರ ವೆಚ್ಚ ನಮಗೆ ಹೊರೆಯಾಗಲಿದೆ’ ಎಂದು ಬೇಸರಿಸಿದ್ದಾರೆ.</p><p>ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ರಸ್ತೆ ಪಕ್ಕದಲ್ಲಿನ ಶಿಬಿರಕ್ಕೆ ಥಾಪಾ ಅವರ ಕುಟುಂಬ ಸ್ಥಳಾಂತರಗೊಂಡಿದೆ. ‘2023ರಲ್ಲೂ ನಾವು ಇದೇ ಪರಿಸ್ಥಿತಿಯನ್ನು ಎದುರಿಸಿದ್ದೆವು. ಬೀದಿಯನ್ನು ಸ್ವಚ್ಛಗೊಳಿಸಿ, ಪ್ರವಾಹದ ನೀರು ಹರಿದುಹೋಗುವಂತೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇವೆ’ ಎನ್ನುತ್ತಾರೆ ಥಾಪಾ.</p><p>ಮದನ್ಪುರ್ ಖಾದರ್ ಪ್ರದೇಶದಲ್ಲಿರುವ ಹಲವು ಕುಟುಂಬಗಳು ಮನೆಯನ್ನು ಕಳೆದುಕೊಂಡಿವೆ. ಈ ಬಗ್ಗೆ ಮಾತನಾಡಿದ ಅಲ್ಲಿಯ ನಿವಾಸಿ ತಯಾರಾ ಎನ್ನುವವರು ಮಾತನಾಡಿ, ‘ನಮ್ಮ ಎಲ್ಲಾ ವಸ್ತುಗಳು ಮನೆಯೊಳಗೇ ಇವೆ. ಕೆಲವು ಅಗತ್ಯ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಬರಲು ಸಾಧ್ಯವಾಯಿತು. ಶೌಚಾಲಯದ ಕೊರತೆಯಿಂದ ಮಹಿಳೆಯರು ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು.</p><p>‘ಮನೆ ತೊರೆದು ಬಂದಿರುವ ನಮಗೆ ಸರಿಯಾದ ಆಹಾರ ಸಿಗುತ್ತಿಲ್ಲ. ಬನ್, ಬಿಸ್ಕತ್ತು ತಿನ್ನುತ್ತಿದ್ದೇವೆ. ಮನೆಯಲ್ಲಿದ್ದ ಅಡುಗೆ ಸಾಮಗ್ರಿಗಳನ್ನು ತರಲು ಸಾಧ್ಯವಾಗಲಿಲ್ಲ, ಈಗ ಆಹಾರ ತಯಾರಿಸಲು ಯಾವುದೇ ಸೌಲಭ್ಯವಿಲ್ಲ. ಗೂಡಂಗಡಿಗಳಲ್ಲಿ ಸಿಗುವ ಆಹಾರ ತಿನ್ನುತ್ತಿದ್ದೇವೆ’ ಎಂದು ಮತ್ತೊಬ್ಬ ನಿವಾಸಿ ದುಃಖಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>