<p><strong>ನವದೆಹಲಿ</strong>: ‘ಯಮುನಾ ನದಿಗೆ ಬಿಜೆಪಿ ವಿಷ ಬೆರೆಸಿದೆ’ ಎಂದು ಆರೋಪಿಸಿರುವ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್, ತಮ್ಮ ಹೇಳಿಕೆಯನ್ನು ವಾಪಸ್ ಪಡೆಯುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.</p><p>‘ದೆಹಲಿಯ ಜನರು ವಿಷ ಮಿಶ್ರಿತ ನೀರು ಕುಡಿದು ಸಾಯಲು ಬಿಡುವುದಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p><p>ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರ ಯುಮುನಾ ನದಿಗೆ ವಿಷ ಬೆರೆಸುತ್ತಿದೆ ಎಂದು ಕೇಜ್ರಿವಾಲ್ ಸೋಮವಾರ ಆರೋಪಿಸಿದ್ದರು. ನೆರೆ ರಾಜ್ಯದಿಂದ ಸರಬರಾಜಾಗುವ ನೀರಿನಲ್ಲಿ ಅಮೋನಿಯಾ ಎಂಬ ವಿಷವನ್ನು ಬೆರೆಸಲಾಗಿದೆ ಎಂದು ದೆಹಲಿ ಜಲಮಂಡಳಿ ಸಿಇಒ ಖಚಿತಪಡಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದ್ದರು.</p><p>ಕೇಜ್ರಿವಾಲ್ ಹೇಳಿಕೆಯನ್ನು ಅಲ್ಲಗೆಳೆದಿರುವ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕ್ಷಮೆಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದರು.</p><p>‘ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p><p>‘ಈ ವಿಚಾರದಲ್ಲಿ ರಾಜಕೀಯ ಸಲ್ಲದು. ಇದು ಪಾಪದ ಕೆಲಸವಾಗಿದೆ. ಜನರ ಶಾಪ ನಿಮಗೆ ತಟ್ಟದೇ ಇರುವುದಿಲ್ಲ’ ಎಂದು ನಯಾಬ್ ಸಿಂಗ್ ಸೈನಿ ವಿರುದ್ಧ ಕಿಡಿಕಾರಿದ್ದಾರೆ.</p><p>‘ನನ್ನ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಅವರು(ಬಿಜೆಪಿ) ನನಗೆ ಬೆದರಿಕೆ ಹಾಕುತ್ತಿದ್ದಾರೆ. ನನ್ನನ್ನು ಜೈಲಿಗೆ ಕಳುಹಿಸಿದ್ದಾರೆ. ಈಗ ನನ್ನನ್ನು ಗಲ್ಲಿಗೇರಿಸುತ್ತಾರೆಯೇ?’ ಎಂದು ಕೇಳಿದರು.</p><p>‘ಕಾನೂನು ಕ್ರಮಗಳ ಬಗ್ಗೆ ನನಗೆ ಯಾವುದೇ ಭಯವಿಲ್ಲ. ದೆಹಲಿ ಜನರು ಕೊಳಕು, ವಿಷ ಮಿಶ್ರಿತ ನೀರು ಕುಡಿದು ಸಾಯಲು ಬಿಡುವುದಿಲ್ಲ’ ಎಂದು ಹೇಳಿದರು.</p><p>ಕೊಳಕು ರಾಜಕಾರಣದಿಂದ ಬಿಜೆಪಿ ದೂರವಿರಬೇಕು ಎಂದು ಆಗ್ರಹಿಸಿದ ಅವರು, ಯುಮುನಾ ನದಿಗೆ ಶುದ್ಧ ನೀರು ಬಿಡುವಂತೆ ಹರಿಯಾಣ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.</p><p>ಏತನ್ಮಧ್ಯೆ, ಕೇಜ್ರಿವಾಲ್ ಆರೋಪವನ್ನು ದೆಹಲಿ ಜಲಮಂಡಳಿ ಸಿಇಒ ಶಿಲ್ಪಾ ಶಿಂದೆ ತಳ್ಳಿಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಯಮುನಾ ನದಿಗೆ ಬಿಜೆಪಿ ವಿಷ ಬೆರೆಸಿದೆ’ ಎಂದು ಆರೋಪಿಸಿರುವ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್, ತಮ್ಮ ಹೇಳಿಕೆಯನ್ನು ವಾಪಸ್ ಪಡೆಯುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.</p><p>‘ದೆಹಲಿಯ ಜನರು ವಿಷ ಮಿಶ್ರಿತ ನೀರು ಕುಡಿದು ಸಾಯಲು ಬಿಡುವುದಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p><p>ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರ ಯುಮುನಾ ನದಿಗೆ ವಿಷ ಬೆರೆಸುತ್ತಿದೆ ಎಂದು ಕೇಜ್ರಿವಾಲ್ ಸೋಮವಾರ ಆರೋಪಿಸಿದ್ದರು. ನೆರೆ ರಾಜ್ಯದಿಂದ ಸರಬರಾಜಾಗುವ ನೀರಿನಲ್ಲಿ ಅಮೋನಿಯಾ ಎಂಬ ವಿಷವನ್ನು ಬೆರೆಸಲಾಗಿದೆ ಎಂದು ದೆಹಲಿ ಜಲಮಂಡಳಿ ಸಿಇಒ ಖಚಿತಪಡಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದ್ದರು.</p><p>ಕೇಜ್ರಿವಾಲ್ ಹೇಳಿಕೆಯನ್ನು ಅಲ್ಲಗೆಳೆದಿರುವ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕ್ಷಮೆಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದರು.</p><p>‘ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p><p>‘ಈ ವಿಚಾರದಲ್ಲಿ ರಾಜಕೀಯ ಸಲ್ಲದು. ಇದು ಪಾಪದ ಕೆಲಸವಾಗಿದೆ. ಜನರ ಶಾಪ ನಿಮಗೆ ತಟ್ಟದೇ ಇರುವುದಿಲ್ಲ’ ಎಂದು ನಯಾಬ್ ಸಿಂಗ್ ಸೈನಿ ವಿರುದ್ಧ ಕಿಡಿಕಾರಿದ್ದಾರೆ.</p><p>‘ನನ್ನ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಅವರು(ಬಿಜೆಪಿ) ನನಗೆ ಬೆದರಿಕೆ ಹಾಕುತ್ತಿದ್ದಾರೆ. ನನ್ನನ್ನು ಜೈಲಿಗೆ ಕಳುಹಿಸಿದ್ದಾರೆ. ಈಗ ನನ್ನನ್ನು ಗಲ್ಲಿಗೇರಿಸುತ್ತಾರೆಯೇ?’ ಎಂದು ಕೇಳಿದರು.</p><p>‘ಕಾನೂನು ಕ್ರಮಗಳ ಬಗ್ಗೆ ನನಗೆ ಯಾವುದೇ ಭಯವಿಲ್ಲ. ದೆಹಲಿ ಜನರು ಕೊಳಕು, ವಿಷ ಮಿಶ್ರಿತ ನೀರು ಕುಡಿದು ಸಾಯಲು ಬಿಡುವುದಿಲ್ಲ’ ಎಂದು ಹೇಳಿದರು.</p><p>ಕೊಳಕು ರಾಜಕಾರಣದಿಂದ ಬಿಜೆಪಿ ದೂರವಿರಬೇಕು ಎಂದು ಆಗ್ರಹಿಸಿದ ಅವರು, ಯುಮುನಾ ನದಿಗೆ ಶುದ್ಧ ನೀರು ಬಿಡುವಂತೆ ಹರಿಯಾಣ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.</p><p>ಏತನ್ಮಧ್ಯೆ, ಕೇಜ್ರಿವಾಲ್ ಆರೋಪವನ್ನು ದೆಹಲಿ ಜಲಮಂಡಳಿ ಸಿಇಒ ಶಿಲ್ಪಾ ಶಿಂದೆ ತಳ್ಳಿಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>