ರುಬಿಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಿಕ್, ಜಮ್ಮುವಿನ ನ್ಯಾಯಾಲಯಕ್ಕೆ ಸ್ವತಃ ಹಾಜರಾಗಲು ಅನುಮತಿ ನೀಡಬೇಕು ಎಂದು ಶುಕ್ರವಾರ ಬೆಳಿಗ್ಗಿನಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮಲಿಕ್ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಆದರೆ, ಕೇಂದ್ರವು ಅರ್ಜಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.