<p><strong>ನವದೆಹಲಿ: </strong>ಜಾರಿ ನಿರ್ದೇಶನಾಲಯವು (ಇ.ಡಿ) ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಮೂಹ ಓಂಕಾರ್ ರಿಯಲ್ಟರ್ಸ್ ಸಂಸ್ಥೆಯ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಯೆಸ್ ಬ್ಯಾಂಕ್ನಿಂದ ಪಡೆದಿದ್ದ ₹ 400 ಕೋಟಿ ಸಾಲದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದ ಆರೋಪದಡಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ.</p>.<p>ಈ ಕುರಿತ ಹೇಳಿಕೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಯು, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಆರೋಪಪಟ್ಟಿಯನ್ನು ಮುಂಬೈನ ವಿಶೇಷ ಕೋರ್ಟ್ನಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದೆ.</p>.<p>ಓಂಕಾರ್ ರಿಯಲ್ಟರ್ಸ್ ಅಧ್ಯಕ್ಷ ಕಮಲ್ ಕಿಶೋರ್ ಗುಪ್ತಾ, ವ್ಯವಸ್ಥಾಪಕ ನಿರ್ದೇಶಕ ಬಾಬುಲಾಲ್ ವರ್ಮಾ, ನಟ–ನಿರ್ಮಾಪಕ ಮತ್ತು ವಿಕಿಂಗ್ ಗ್ರೂಪ್ನ ಪ್ರವರ್ತಕ ಸಚಿನ್ ಜೋಷಿ ಮತ್ತು ಅವರ ಕಂಪನಿಗಳನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.</p>.<p>ಈ ಹಿಂದೆ ಪ್ರಕರಣದ ಸಂಬಂಧ ಕಂಪನಿಗಳ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು, ಈ ಮೂವರನ್ನು ಬಂಧಿಸಿದ್ದರು. ಯೆಸ್ ಬ್ಯಾಂಕ್ನಿಂದ ಪಡೆದಿದ್ದ ₹ 400 ಕೋಟಿ ಸಾಲವನ್ನು ಅನ್ಯ ಉದ್ದೇಶಕ್ಕೆ ಬಳಸಿದ, ಮರುಪಾವತಿಸದೇ ವಂಚಿಸಿದ ಸಂಬಂಧ ದಾಖಲಾಗಿದ್ದ ಔರಂಗಾಬಾದ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಜಾರಿ ನಿರ್ದೇಶನಾಲಯವು (ಇ.ಡಿ) ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಮೂಹ ಓಂಕಾರ್ ರಿಯಲ್ಟರ್ಸ್ ಸಂಸ್ಥೆಯ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಯೆಸ್ ಬ್ಯಾಂಕ್ನಿಂದ ಪಡೆದಿದ್ದ ₹ 400 ಕೋಟಿ ಸಾಲದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದ ಆರೋಪದಡಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ.</p>.<p>ಈ ಕುರಿತ ಹೇಳಿಕೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಯು, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಆರೋಪಪಟ್ಟಿಯನ್ನು ಮುಂಬೈನ ವಿಶೇಷ ಕೋರ್ಟ್ನಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದೆ.</p>.<p>ಓಂಕಾರ್ ರಿಯಲ್ಟರ್ಸ್ ಅಧ್ಯಕ್ಷ ಕಮಲ್ ಕಿಶೋರ್ ಗುಪ್ತಾ, ವ್ಯವಸ್ಥಾಪಕ ನಿರ್ದೇಶಕ ಬಾಬುಲಾಲ್ ವರ್ಮಾ, ನಟ–ನಿರ್ಮಾಪಕ ಮತ್ತು ವಿಕಿಂಗ್ ಗ್ರೂಪ್ನ ಪ್ರವರ್ತಕ ಸಚಿನ್ ಜೋಷಿ ಮತ್ತು ಅವರ ಕಂಪನಿಗಳನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.</p>.<p>ಈ ಹಿಂದೆ ಪ್ರಕರಣದ ಸಂಬಂಧ ಕಂಪನಿಗಳ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು, ಈ ಮೂವರನ್ನು ಬಂಧಿಸಿದ್ದರು. ಯೆಸ್ ಬ್ಯಾಂಕ್ನಿಂದ ಪಡೆದಿದ್ದ ₹ 400 ಕೋಟಿ ಸಾಲವನ್ನು ಅನ್ಯ ಉದ್ದೇಶಕ್ಕೆ ಬಳಸಿದ, ಮರುಪಾವತಿಸದೇ ವಂಚಿಸಿದ ಸಂಬಂಧ ದಾಖಲಾಗಿದ್ದ ಔರಂಗಾಬಾದ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>