<p class="title"><strong>ಲಖನೌ:</strong> ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಸಾಂಸ್ಕೃತಿಕ ಕೇಂದ್ರ ಹಾಗೂ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಘೋಷಿಸಿದರು.</p>.<p class="title">ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಹಜರತ್ಗಂಜ್ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು,ಸರ್ಕಾರವು ಬಾಬಾಸಾಹೇಬ್ ಹೆಸರಿನಲ್ಲಿ ಭವ್ಯವಾದ ಸಾಂಸ್ಕೃತಿಕ ಕೇಂದ್ರ ಮತ್ತು ಸ್ಮಾರಕವನ್ನು ನಿರ್ಮಿಸಲಿದೆ. ಸ್ಮಾರಕವು ಅಂಬೇಡ್ಕರ್ ಅವರ ಆದರ್ಶಗಳನ್ನು ಇಂದಿನ ಮತ್ತು ಭವಿಷ್ಯದ ಪೀಳಿಗೆಗೆ ಪ್ರಸ್ತುತಪಡಿಸುತ್ತದೆ ಎಂದು ಹೇಳಿದರು.</p>.<p>ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಾಬಾಸಾಹೇಬರ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಥಾವು, ಮುಸಾಹರ್, ಕೋಲ್, ವಂಟಂಗಿಯಂತಹ ವಂಚಿತ ವರ್ಗಗಳಿಗೆ ಸಹಾಯ ಮಾಡಿದ್ದೇವೆ, ರಾಜ್ಯ ಸರ್ಕಾರ ಶೋಷಿತರು ಮತ್ತು ಶೋಷಿತ ವರ್ಗಗಳ ಪರವಾಗಿ ನಿಂತಿದೆ ಎಂದರು.</p>.<p>ಕೊರೋನಾ ಅವಧಿಯಲ್ಲಿ ಬಡವರಿಗೆ ನೀಡಲಾದ ವಸತಿ ಯೋಜನೆ, ಶೌಚಾಲಯಗಳ ನಿರ್ಮಾಣ, ಉಚಿತ ವಿದ್ಯುತ್ ಮತ್ತು ಪಡಿತರವನ್ನು ಉಲ್ಲೇಖಿಸಿದ ಆದಿತ್ಯನಾಥ್, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಅಂಬೇಡ್ಕರ್ ತೋರಿಸಿದ ಮಾರ್ಗವನ್ನು ಅನುಸರಿಸುತ್ತಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong> ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಸಾಂಸ್ಕೃತಿಕ ಕೇಂದ್ರ ಹಾಗೂ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಘೋಷಿಸಿದರು.</p>.<p class="title">ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಹಜರತ್ಗಂಜ್ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು,ಸರ್ಕಾರವು ಬಾಬಾಸಾಹೇಬ್ ಹೆಸರಿನಲ್ಲಿ ಭವ್ಯವಾದ ಸಾಂಸ್ಕೃತಿಕ ಕೇಂದ್ರ ಮತ್ತು ಸ್ಮಾರಕವನ್ನು ನಿರ್ಮಿಸಲಿದೆ. ಸ್ಮಾರಕವು ಅಂಬೇಡ್ಕರ್ ಅವರ ಆದರ್ಶಗಳನ್ನು ಇಂದಿನ ಮತ್ತು ಭವಿಷ್ಯದ ಪೀಳಿಗೆಗೆ ಪ್ರಸ್ತುತಪಡಿಸುತ್ತದೆ ಎಂದು ಹೇಳಿದರು.</p>.<p>ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಾಬಾಸಾಹೇಬರ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಥಾವು, ಮುಸಾಹರ್, ಕೋಲ್, ವಂಟಂಗಿಯಂತಹ ವಂಚಿತ ವರ್ಗಗಳಿಗೆ ಸಹಾಯ ಮಾಡಿದ್ದೇವೆ, ರಾಜ್ಯ ಸರ್ಕಾರ ಶೋಷಿತರು ಮತ್ತು ಶೋಷಿತ ವರ್ಗಗಳ ಪರವಾಗಿ ನಿಂತಿದೆ ಎಂದರು.</p>.<p>ಕೊರೋನಾ ಅವಧಿಯಲ್ಲಿ ಬಡವರಿಗೆ ನೀಡಲಾದ ವಸತಿ ಯೋಜನೆ, ಶೌಚಾಲಯಗಳ ನಿರ್ಮಾಣ, ಉಚಿತ ವಿದ್ಯುತ್ ಮತ್ತು ಪಡಿತರವನ್ನು ಉಲ್ಲೇಖಿಸಿದ ಆದಿತ್ಯನಾಥ್, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಅಂಬೇಡ್ಕರ್ ತೋರಿಸಿದ ಮಾರ್ಗವನ್ನು ಅನುಸರಿಸುತ್ತಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>