<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯು ವಿವಾದಾತ್ಮಕ ಧಾರ್ಮಿಕ ವಿಷಯಗಳನ್ನು ಆಧರಿಸಿ ನಡೆಯಲಿದೆಯೇ ಎಂಬ ಚರ್ಚೆ ಹುಟ್ಟುಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಾಬರಿ ಮಸೀದಿ ವಿಚಾರವನ್ನು ಕೆದಕಿದ್ದಾರೆ ಎಂದು ವರದಿ ತಿಳಿಸಿದೆ.</p><p>ಬಾರಾಬಂಕಿಯಲ್ಲಿ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ ನಿರ್ಮಾಣ ಮಾಡುವುದಿಲ್ಲ. ಒಂದು ವೇಳೆ ಯಾರಾದರೂ ಬಾಬರಿ ಮಸೀದಿಯ ಪುನರ್ ನಿರ್ಮಾಣದ ಬಗ್ಗೆ ಕನಸನ್ನು ಇಟ್ಟುಕೊಂಡಿದ್ದರೆ, ಅಂತಹ ‘ಖಯಾಮತ್‘ (ವಿಸ್ಮಯಕಾರಿ) ದಿನ ಎಂದಿಗೂ ಬರುವುದಿಲ್ಲ’ ಎಂದಿದ್ದಾರೆ.</p><p>‘ಬಿಜೆಪಿ ಸರ್ಕಾರ ಹೇಳಿದ್ದನ್ನೇ ಮಾಡುತ್ತದೆ ಮತ್ತು ಮಾಡುವುದನ್ನೇ ಹೇಳುತ್ತದೆ. ನಾವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ ಎಂದು ಹೇಳಿದ್ದೆವು. ಅದರಂತೆಯೇ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.</p><p>‘500 ವರ್ಷಗಳ ನಂತರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಮೂಲಕ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಗಿದ್ದೇವೆ. ಆದರೆ, ಕೆಲವು ಅವಕಾಶವಾದಿಗಳು ಸಂಕಷ್ಟದಲ್ಲಿದ್ದಾಗ ಮಾತ್ರ ರಾಮನನ್ನು ನೆನಪು ಮಾಡಿಕೊಳ್ಳುತ್ತಾರೆ. ನಂತರ ಮರೆತುಬಿಡುತ್ತಾರೆ ಎಂದು ವಿಪಕ್ಷ ನಾಯಕರ ವಿರುದ್ಧ ಯೋಗಿ ಗುಡುಗಿದ್ದಾರೆ.</p><p>ಆದಿತ್ಯನಾಥ ಅವರ ‘ಖಯಾಮತ್’ (ವಿಸ್ಮಯಕಾರಿ) ಪದ ಬಳಕೆ ಬಗ್ಗೆ ಮುಸ್ಲಿಂ ಧರ್ಮಗುರುಗಳು ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.</p><p>‘ಮುಖ್ಯಮಂತ್ರಿಗಳಿಗೆ ಭಾಷೆಯ ಸಮಸ್ಯೆ ಇರುವುದರಿಂದ ಅವರು ಉರ್ದು ಪದಗಳನ್ನು ಬಳಸಬಾರದು. ಅಧಿಕಾರ ಕಳೆದುಕೊಳ್ಳುವ ಭಯದಿಂದ ಬಿಜೆಪಿ ಕೋಮು ರಾಜಕೀಯದಲ್ಲಿ ತೊಡಗಿದೆ’ ಎಂದು ಅಖಿಲೇಶ್ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯು ವಿವಾದಾತ್ಮಕ ಧಾರ್ಮಿಕ ವಿಷಯಗಳನ್ನು ಆಧರಿಸಿ ನಡೆಯಲಿದೆಯೇ ಎಂಬ ಚರ್ಚೆ ಹುಟ್ಟುಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಾಬರಿ ಮಸೀದಿ ವಿಚಾರವನ್ನು ಕೆದಕಿದ್ದಾರೆ ಎಂದು ವರದಿ ತಿಳಿಸಿದೆ.</p><p>ಬಾರಾಬಂಕಿಯಲ್ಲಿ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ ನಿರ್ಮಾಣ ಮಾಡುವುದಿಲ್ಲ. ಒಂದು ವೇಳೆ ಯಾರಾದರೂ ಬಾಬರಿ ಮಸೀದಿಯ ಪುನರ್ ನಿರ್ಮಾಣದ ಬಗ್ಗೆ ಕನಸನ್ನು ಇಟ್ಟುಕೊಂಡಿದ್ದರೆ, ಅಂತಹ ‘ಖಯಾಮತ್‘ (ವಿಸ್ಮಯಕಾರಿ) ದಿನ ಎಂದಿಗೂ ಬರುವುದಿಲ್ಲ’ ಎಂದಿದ್ದಾರೆ.</p><p>‘ಬಿಜೆಪಿ ಸರ್ಕಾರ ಹೇಳಿದ್ದನ್ನೇ ಮಾಡುತ್ತದೆ ಮತ್ತು ಮಾಡುವುದನ್ನೇ ಹೇಳುತ್ತದೆ. ನಾವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ ಎಂದು ಹೇಳಿದ್ದೆವು. ಅದರಂತೆಯೇ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.</p><p>‘500 ವರ್ಷಗಳ ನಂತರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಮೂಲಕ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಗಿದ್ದೇವೆ. ಆದರೆ, ಕೆಲವು ಅವಕಾಶವಾದಿಗಳು ಸಂಕಷ್ಟದಲ್ಲಿದ್ದಾಗ ಮಾತ್ರ ರಾಮನನ್ನು ನೆನಪು ಮಾಡಿಕೊಳ್ಳುತ್ತಾರೆ. ನಂತರ ಮರೆತುಬಿಡುತ್ತಾರೆ ಎಂದು ವಿಪಕ್ಷ ನಾಯಕರ ವಿರುದ್ಧ ಯೋಗಿ ಗುಡುಗಿದ್ದಾರೆ.</p><p>ಆದಿತ್ಯನಾಥ ಅವರ ‘ಖಯಾಮತ್’ (ವಿಸ್ಮಯಕಾರಿ) ಪದ ಬಳಕೆ ಬಗ್ಗೆ ಮುಸ್ಲಿಂ ಧರ್ಮಗುರುಗಳು ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.</p><p>‘ಮುಖ್ಯಮಂತ್ರಿಗಳಿಗೆ ಭಾಷೆಯ ಸಮಸ್ಯೆ ಇರುವುದರಿಂದ ಅವರು ಉರ್ದು ಪದಗಳನ್ನು ಬಳಸಬಾರದು. ಅಧಿಕಾರ ಕಳೆದುಕೊಳ್ಳುವ ಭಯದಿಂದ ಬಿಜೆಪಿ ಕೋಮು ರಾಜಕೀಯದಲ್ಲಿ ತೊಡಗಿದೆ’ ಎಂದು ಅಖಿಲೇಶ್ ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>